AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ

ಕರ್ನಾಟಕ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯದಂಗಡಿಗಳಿಂದ ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪದ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಗರಣದಲ್ಲಿ ಸಚಿವರ ಪಾತ್ರವನ್ನು ಪ್ರಶ್ನಿಸಿದ್ದಾರೆ.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ
ಆರ್ ಅಶೋಕ್ (ಸಂಗ್ರಹ ಚಿತ್ರ)Image Credit source: PTI
ಕಿರಣ್​ ಹನಿಯಡ್ಕ
| Edited By: |

Updated on:Nov 06, 2024 | 11:13 AM

Share

ಬೆಂಗಳೂರು, ನವೆಂಬರ್ 6: ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.

ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಪ್ರತಿನಿತ್ಯ ಸಚಿವರಿಂದ ಲೂಟಿ ನಡೆಯುತ್ತಿದೆ: ಅಶೋಕ್

ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಅಶೋಕ್ ಪ್ರಶ್ನಿಸಿದರು.

ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ: ಅಶೋಕ್ ಪ್ರಶ್ನೆ

ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ ಎಂದು ಅಶೋಕ್ ಪ್ರಶ್ನೆಗಳ ಮಳೆಗೈದರು.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಮಂಗಳವಾರ ​​ಆರೋಪಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:12 am, Wed, 6 November 24

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’