AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ

ಕರ್ನಾಟಕ ಅಬಕಾರಿ ಇಲಾಖೆಯ ಅಧಿಕಾರಿಗಳು ಮದ್ಯದಂಗಡಿಗಳಿಂದ ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪದ ಬಗ್ಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಗರಣದಲ್ಲಿ ಸಚಿವರ ಪಾತ್ರವನ್ನು ಪ್ರಶ್ನಿಸಿದ್ದಾರೆ.

ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ ವಾಗ್ದಾಳಿ
ಆರ್ ಅಶೋಕ್ (ಸಂಗ್ರಹ ಚಿತ್ರ)Image Credit source: PTI
ಕಿರಣ್​ ಹನಿಯಡ್ಕ
| Edited By: |

Updated on:Nov 06, 2024 | 11:13 AM

Share

ಬೆಂಗಳೂರು, ನವೆಂಬರ್ 6: ಕರ್ನಾಟಕ ಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಈ ವಿಚಾರವಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಈ ಸರ್ಕಾರದ ಸಚಿವರು ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಬಕಾರಿ ಇಲಾಖೆಯಲ್ಲಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯಪಾಲರಿಗೆ ಮದ್ಯದಂಗಡಿ ಮಾಲೀಕರೇ ದೂರು ಕೊಟ್ಟಿದ್ದಾರೆ. ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ವೈನ್ ಸ್ಟೋರ್​​ಗಳಿವೆ. ಪ್ರತಿಯೊಂದರಿಂದ 20 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಅಶೋಕ್ ಗಂಭೀರ ಆರೋಪ ಮಾಡಿದರು.

ನಮ್ಮ ವಿರುದ್ಧ ಹಿಂದೆ ಪೇಸಿಎಂ ಪೋಸ್ಟರ್ ಅಂಟಿಸಿದ್ದಿರಿ. ಆಗ ನಾವು ನಿಮ್ಮನ್ನು ಸನ್ಮಾನ ಮಾಡಲು ಆಗಲಿಲ್ಲ. ಈಗ ಪೇಸಿಎಂ ಪೋಸ್ಟರ್ ಅಂಟಿಸಿದಾಗ ಹೇಳಿ ಬಂದು ಸನ್ಮಾನ ಮಾಡುತ್ತೇವೆ ಎಂದು ಅಶೋಕ್ ವ್ಯಂಗ್ಯವಾಡಿದರು.

ಪ್ರತಿನಿತ್ಯ ಸಚಿವರಿಂದ ಲೂಟಿ ನಡೆಯುತ್ತಿದೆ: ಅಶೋಕ್

ಲೋಕಾಯುಕ್ತ ಅಧಿಕಾರಿಗಳಿಂದ ಸಿದ್ದರಾಮಯ್ಯ ವಿಚಾರಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ್, ಈ ಸರ್ಕಾರದಲ್ಲಿ ಪ್ರತಿ ನಿತ್ಯ ಒಬ್ಬರಲ್ಲ ಒಬ್ಬ ಸಚಿವರು ಲೂಟಿ ಹೊಡೆಯುತ್ತಿದ್ದಾರೆ. 40 ವರ್ಷದ ರಾಜಕೀಯ ಜೀವನ ತೆರೆದ ಪುಸ್ತಕ ಎಂದಿದ್ದರು. ತೆರೆದ ಪುಸ್ತಕ ಎಂದವರು ಲೋಕಾಯುಕ್ತ ವಿಚಾರಣೆಗೆ ಹೋಗಿದ್ದಾರೆ. ಮುಖ್ಯಮಂತ್ರಿ ಆಗಿ ವಿಚಾರಣೆ ಎದುರಿಸುತ್ತಿದ್ದಾರೆ, ನಾಚಿಕೆ ಆಗಲ್ವಾ ಎಂದು ಅಶೋಕ್ ಪ್ರಶ್ನಿಸಿದರು.

ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ: ಅಶೋಕ್ ಪ್ರಶ್ನೆ

ಬೆಳಗ್ಗೆ ವಿಚಾರಣೆ ಅಂತೆ, ಮಧ್ಯಾಹ್ನ ಪ್ರಚಾರ ಅಂತೆ. ಸಿಎಂ ಮೊದಲೇ ಟೈಮ್ ಫಿಕ್ಸ್ ಮಾಡಿಕೊಂಡು ಹೋಗಿದ್ದಾರೆ. ಇದೇನು ಮ್ಯಾಚ್ ಫಿಕ್ಸಿಂಗ್ ಕೇಸಾ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

ತನಿಖಾಧಿಕಾರಿಗಳು ಎಷ್ಟು ಹೊತ್ತು ವಿಚಾರಣೆ ನಡೆಸ್ತಾರೆಂದು ಗೊತ್ತಾ? ಇವರೇ ಲೋಕಾಯುಕ್ತ ವಿಚಾರಣೆಗೆ ಸಮಯ ನಿಗದಿ ಮಾಡಿದ್ದಾರಾ ಎಂದು ಅಶೋಕ್ ಪ್ರಶ್ನೆಗಳ ಮಳೆಗೈದರು.

ಇದನ್ನೂ ಓದಿ: ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತ ಮಾಲೀಕರು, ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್​ಗೆ ನಿರ್ಧಾರ

ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಮಂಗಳವಾರ ​​ಆರೋಪಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:12 am, Wed, 6 November 24

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!