AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಚ್ಚಾಗಲಿದೆ ಮದ್ಯದ ದರ: ಎಣ್ಣೆ ಪ್ರಿಯಕರಿಗೆ 3ನೇ ಬಾರಿಗೆ ಅಬಕಾರಿ ಇಲಾಖೆ ಶಾಕ್..!

Liquor Price Hike: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಐಎಂಎಲ್ ಗಳ ಮೇಲಿನ ದರವನ್ನು ಹೆಚ್ಚಳ ಮಾಡಿತ್ತು. ಇದೀಗ ಮೂರನೇ ಬಾರಿ ದರ ಹೆಚ್ಚಳ ಮಾಡಲು ಅಬಕಾರಿ ಇಲಾಖೆ ಪ್ಲಾನ್ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮದ್ಯಪ್ರಿಯರು ಹಾಗೂ ಬಾರ್ ಮಾಲೀಕರು ಆಕ್ರೋಶಗೊಂಡಿದ್ದಾರೆ. ಹಾಗಾದ್ರೆ, ಈ ಬಾರಿ ಎಣ್ಣೆ ರೇಟ್​ ಎಷ್ಟು ಹೆಚ್ಚಳವಾಗಲಿದೆ ಎನ್ನುವ ವಿವರ ಇಲ್ಲಿದೆ.

ಮತ್ತೆ ಹೆಚ್ಚಾಗಲಿದೆ ಮದ್ಯದ ದರ: ಎಣ್ಣೆ ಪ್ರಿಯಕರಿಗೆ 3ನೇ ಬಾರಿಗೆ ಅಬಕಾರಿ ಇಲಾಖೆ ಶಾಕ್..!
ಮದ್ಯಪಾನ ಆರೋಗ್ಯಕ್ಕೆ ಹಾನಿಕರImage Credit source: Fortune India
ಕಿರಣ್​ ಸೂರ್ಯ
| Edited By: |

Updated on: Mar 11, 2025 | 10:02 PM

Share

ಬೆಂಗಳೂರು, (ಮಾರ್ಚ್​ 11): ಕರ್ನಾಟಕದಲ್ಲಿ ಮತ್ತೆ ಐಎಂಎಲ್ ಮೇಲಿನ ದರ ಹೆಚ್ಚಳವಾಗಲಿದ್ಯಂತೆ‌‌‌. ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಮತ್ತೆ ಎಣ್ಣೆ ದರ ಹೆಚ್ಚಳ ಮಾಡುವ ಬಗ್ಗೆ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಕಾರಣ  2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಬಕಾರಿ ಇಲಾಖೆಯಿಂದ 38 ಸಾವಿರದ 500 ಕೋಟಿ ರೂಪಾಯಿ ಟಾರ್ಗೆಟ್ ನೀಡಲಾಗಿತ್ತು. ಕಳೆದ ಬಾರಿಯ ಈ ಟಾರ್ಗೆಟ್‌ನಲ್ಲಿ 36 ಸಾವಿರದ 500 ಕೋಟಿ ರೂಪಾಯಿ ಸಂಗ್ರಹವಾಗಿದೆ. ಆದ್ರೆ, ಈ ಬಾರಿಯ 2025ನೇ ಸಾಲಿನ ಬಜೆಟ್‌ನಲ್ಲಿ 40 ಸಾವಿರ ಕೋಟಿ ರೂ. ಟಾರ್ಗೆಟ್ ನೀಡಲಾಗಿದೆ. ಅಂದರೆ ಈ ಸಾಲಿನಲ್ಲಿ ಹೆಚ್ಚುವರಿಯಾಗಿ 1400 ಕೋಟಿ ರುಪಾಯಿ ಟಾರ್ಗೆಟ್ ನೀಡಿದ್ದು, ಹೊಸ ಟಾರ್ಗೆಟ್ ರೀಚ್ ಮಾಡಲು ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಪ್ಲಾನ್ ಮಾಡಿದೆ.

ಕಳೆದ ಬಾರಿಗಿಂತ ಈ ವರ್ಷದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅಬಕಾರಿ ಇಲಾಖೆಗೆ ಮೂರೂವರೆ ಸಾವಿರ ಕೋಟಿ ಹೆಚ್ಚುವರಿ ಆದಾಯ ಸಂಗ್ರಹಣೆಯ ಗುರಿ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮತ್ತೆ ಮದ್ಯದರ ಏರಿಕೆಯ ಸೂಚನೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಬಜೆಟ್​ನಲ್ಲಿ ಮದ್ಯದ ದರ ಏರಿಕೆ ಮಾಡಿದ್ರೆ ಪ್ರತಿಭಟನೆಗಳು ನಡೆಯಬಹುದು ಎಂದು ಅರಿತ ಸರ್ಕಾರ ಯಾವುದೇ ಏರಿಕೆ ಮಾಡಿಲ್ಲ. ಅಬಕಾರಿ ಇಲಾಖೆಗೆ ಟಾರ್ಗೆಟ್​ ನೀಡಿದರೆ ಮಧ್ಯದಲ್ಲಿ ಯಾವಾಗಾದರೂ ಎಣ್ಣೆ ಬೆಲೆ ಏರಿಕೆ ಮಾಡಬಹುದು ಎನ್ನುವುದು ಸರ್ಕಾರದ ಪ್ಲ್ಯಾನ್. ಅದರಂತೆ ಇದೀಗ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ಅಬಕಾರಿ ಇಲಾಖೆ ಮದ್ಯದ ಬೆಲೆ ಏರಿಕೆ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ಬಿಗ್ ಶಾಕ್: ಬಜೆಟ್​ಗೂ ಮೊದಲೇ ಮತ್ತೊಮ್ಮೆ ಬಿಯರ್ ದರ ಏರಿಕೆ..!

ಇನ್ನೂ ಕಡಿಮೆ ದರ ಇರುವ ವಿಸ್ಕಿ, ಬ್ರ್ಯಾಂಡಿ,ರಮ್ ಹಾಗೂ ಜಿನ್ ಮೇಲೆ ದರ ಏರಿಕೆ ಆಗಲಿದ್ಯಂತೆ. ಪ್ರತಿ ಬ್ರ್ಯಾಂಡ್ ಮೇಲೆ 5 ರಿಂದ 20 ರುಪಾಯಿವರೆಗೆ ಹೆಚ್ಚಳವಾದ್ರೆ, 80 ರುಪಾಯಿ ಇರೋದು 100 ರುಪಾಯಿ,90 ರುಪಾಯಿ ಇರೋದು 110 ರುಪಾಯಿ, 100 ರುಪಾಯಿ ಇರೋದು 120 ರುಪಾಯಿ. ಹೀಗೆ ಮಧ್ಯಮ ವರ್ಗದ ಮದ್ಯಪ್ರಿಯರು ಕುಡಿಯುವ ಮದ್ಯದ ದರವನ್ನು ಏರಿಕೆ ಮಾಡಲು ಅಬಕಾರಿ ಇಲಾಖೆ ಚಿಂತನೆ ನಡೆಸಿದ್ಯಂತೆ.

ಇದನ್ನೂ ಓದಿ
Image
ಅಬಕಾರಿ ಇಲಾಖೆಗೆ ಬಜೆಟ್​ನಲ್ಲಿ ಸಿದ್ದರಾಮಯ್ಯ ಹೊಸ ಟಾರ್ಗೆಟ್
Image
ಮದ್ಯಪ್ರಿಯರಿಗೆ ಬಿಗ್ ಶಾಕ್: ಬಜೆಟ್​ಗೂ ಮೊದಲೇ ಬಿಯರ್ ದರ ಏರಿಕೆ..!
Image
ದರ ಏರಿಕೆ ನಡುವೆಯೂ ಮದ್ಯ ಸೇವನೆ ಹೆಚ್ಚಳ: ರಾಜ್ಯ ಸರ್ಕಾರದ ಭರ್ಜರಿ ಆದಾಯ

ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿಕೊಂಡರೇ ಕಡಿಮೆ ಬೆಲೆಯ ಮದ್ಯ ನಮ್ಮ ಕರ್ನಾಟಕದಲ್ಲಿ ತುಂಬಾ ಕಡಿಮೆ ಇದೆಯಂತೆ. ಈ ಬಗ್ಗೆ ಮಾತನಾಡಿದ ಮದ್ಯಪ್ರಿಯರು ಹೆಣ್ಣು ಮಕ್ಕಳಿಗೆ ಉಚಿತ ನೀಡಲು ಎಣ್ಣೆ ದರ ಏರಿಕೆ ಮಾಡಿದ್ರೆ ಹೇಗೆ ಎಂದು ಎಣ್ಣೆ ಪ್ರಿಯರು ಅಸಮಾಧಾನ ಹೊರಹಾಕಿದ್ದಾರೆ.

ಒಟ್ಟಿನಲ್ಲಿ ರಾಜ್ಯ ಸರ್ಕಾರ ನೀಡಿರೋ ಟಾರ್ಗೆಟ್ ರೀಚ್ ಮಾಡಲು ಅಬಕಾರಿ ಇಲಾಖೆ ‌ಮತ್ತೊಮ್ಮೆ ಮದ್ಯದ ದರ ಹೆಚ್ಚಳ ಮಾಡಲು ಮುಂದಾಗಿರುವುದು ಎಣ್ಣೆಪ್ರಿಯರ ಆಕ್ರೋಶಕ್ಕೆ ಕಾರಣವಾಗಿರುವುದರಿಂತು ಸುಳ್ಳಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್