AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಯರ್ ಮಾರಾಟ ಭಾರೀ ಜಿಗಿತ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!

ರಾಜ್ಯ ಸರ್ಕಾರ ಜಾರಿಗೆ ತಂದ ಅಬಕಾರಿ ಸುಧಾರಣೆಗಳು ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಬಿಯರ್ ಬೆಲೆ ಕಡಿತದ ಬೆನ್ನಲ್ಲೇ ಕರ್ನಾಟಕದಲ್ಲಿ ಬಿಯರ್ ಮಾರಾಟ ಶೇ 54.67 ರಷ್ಟು ಏರಿಕೆ ಕಂಡಿದೆ. ಇದರಿಂದಾಗಿ ಕೇವಲ ಒಂದೇ ತಿಂಗಳಲ್ಲಿ ರಾಜ್ಯದ ಅಬಕಾರಿ ಕಂದಾಯ ಸಂಗ್ರಹಣೆಯಲ್ಲಿ ಶೇ 14.84 ರಷ್ಟು ಗಣನೀಯ ಪ್ರಗತಿ ದಾಖಲಾಗಿದೆ.

ಬಿಯರ್ ಮಾರಾಟ ಭಾರೀ ಜಿಗಿತ: ಒಂದೇ ತಿಂಗಳಲ್ಲಿ ಅಬಕಾರಿ ಆದಾಯ ಶೇ 14.84 ರಷ್ಟು ಏರಿಕೆ!
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Jun 24, 2026 | 9:01 AM

Share

ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿಗೆ ತಂದ ಅಬಕಾರಿ ಸುಧಾರಣೆಗಳು ಮತ್ತು ಹೊಸ ದರ ಪರಿಷ್ಕರಣೆ ನೀತಿಯು ಖಜಾನೆಗೆ ಭಾರೀ ಆದಾಯ ತಂದುಕೊಟ್ಟಿದೆ. ಕಡಿಮೆ ಪ್ರಮಾಣದ ಆಲ್ಕೋಹಾಲ್ ಅಂಶ ಹೊಂದಿರುವ ಕೆಲವು ಬಿಯರ್ ಬ್ರ್ಯಾಂಡ್‌ಗಳ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಯರ್ ಮಾರಾಟ ಭಾರೀ ಪ್ರಮಾಣದಲ್ಲಿ ಜಿಗಿತ ಕಂಡಿದೆ. ಹೊಸ ದರ ಪಟ್ಟಿ ಅನುಷ್ಠಾನಕ್ಕೆ ಬಂದ ಮೇ 11 ರಿಂದ ಜೂನ್ 11 ರವರೆಗಿನ ಒಂದು ತಿಂಗಳ ಅವಧಿಯಲ್ಲಿ ರಾಜ್ಯದ ಅಬಕಾರಿ ಕಂದಾಯ ಸಂಗ್ರಹಣೆ ಬರೋಬ್ಬರಿ ಶೇ 14.84 ರಷ್ಟು ಹೆಚ್ಚಳವಾಗಿದೆ.

ಮುಖ್ಯಾಂಶಗಳು

  • ಬಿಯರ್ ಮಾರಾಟ ಶೇ 54.67 ಭಾರಿ ಏರಿಕೆ.
  • ಒಂದೇ ತಿಂಗಳಲ್ಲಿ 3745 ಕೋಟಿ ರೂ. ಸರ್ಕಾರದ ಖಜಾನೆಗೆ.
  • ಐಎಂಎಲ್ ಲಿಕ್ಕರ್ ಮಾರಾಟದಲ್ಲಿ ಅಲ್ಪ ಕುಸಿತ.

ದಾಖಲೆ ಬರೆದ ಬಿಯರ್ ಕೌಂಟ್: ಐಎಂಎಲ್ ಕುಸಿತ

ಮೇ 11 ರಿಂದ ಜೂನ್ 11 ರವರೆಗಿನ ಅವಧಿಯಲ್ಲಿ ಬರೋಬ್ಬರಿ 54.6 ಲಕ್ಷ ಕೇಸ್ ಬಿಯರ್ ಮಾರಾಟವಾಗಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ (35.3 ಲಕ್ಷ ಕೇಸ್) ಭಾರೀ ಏರಿಕೆ ದಾಖಲಾಗಿದೆ. ಆದರೆ, ಇದೇ ಅವಧಿಯಲ್ಲಿ ಭಾರತೀಯ ತಯಾರಿಕೆಯ ವಿದೇಶಿ ಮದ್ಯ (IML) ಮಾರಾಟದಲ್ಲಿ ಶೇ 0.35 ರಷ್ಟು ಅಲ್ಪ ಕುಸಿತ ಕಂಡುಬಂದಿದೆ. ಕಳೆದ ವರ್ಷ 54.74 ಲಕ್ಷ ಕೇಸ್ ಇದ್ದ ಐಎಂಎಲ್ ಮಾರಾಟ ಈ ಬಾರಿ 54.55 ಲಕ್ಷ ಕೇಸ್‌ಗಳಿಗೆ ಇಳಿಕೆಯಾಗಿದೆ. ಬಿಯರ್ ಬಳಕೆಯ ಹೆಚ್ಚಳದಿಂದಾಗಿ ರಾಜ್ಯದ ಒಟ್ಟು ಅಬಕಾರಿ ಆದಾಯವು ಕಳೆದ ವರ್ಷದ 3,261.24 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ಈ ಬಾರಿ 3,745.14 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ.

ಬೆಲೆ ಕಡಿತ ಮತ್ತು ಬಿಸಿಲಿನ ಎಫೆಕ್ಟ್

ಕಳೆದ 2025-26 ರ ಆರ್ಥಿಕ ಸಾಲಿನಲ್ಲಿ ಬಿಯರ್ ಮಾರಾಟವು ಶೇ 11.3 ರಷ್ಟು ಕುಸಿತ ಕಂಡು ಒಟ್ಟು ಮಾರಾಟ 399.29 ಲಕ್ಷ ಕೇಸ್‌ಗಳಿಗೆ ಇಳಿದಿತ್ತು. ಆದರೆ ಈ ಬಾರಿ ಸರ್ಕಾರ ಜಾರಿಗೆ ತಂದ ಹೊಸ ಆಲ್ಕೋಹಾಲ್ ಆಧಾರಿತ ತೆರಿಗೆ ನೀತಿ ಮತ್ತು ರಾಜ್ಯದಲ್ಲಿದ್ದ ತೀವ್ರ ಬಿಸಿಲಿನ ವಾತಾವರಣದಿಂದಾಗಿ ಬಿಯರ್ ಮಾರಾಟ ಮರಳಿ ಚೇತರಿಸಿಕೊಂಡಿದೆ.

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಗುಡ್, ಬ್ಯಾಡ್ ನ್ಯೂಸ್: ಇಳಿಕೆಯಾಗಲಿದೆ ಪ್ರೀಮಿಯಂ ಸ್ಕಾಚ್ ದರ, ದುಬಾರಿಯಾಗಲಿದೆ ಬಡವರ ಮದ್ಯ

ಮುಂಬರುವ ದಿನಗಳಲ್ಲಿ ಮುಂಗಾರು ಮಳೆಯಿಂದಾಗಿ ಹವಾಮಾನ ತಂಪಾಗಲಿದ್ದು, ಮಾರಾಟದಲ್ಲಿ ಸ್ವಲ್ಪ ಏರಿಳಿತವಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದಾಗ್ಯೂ, ಸರ್ಕಾರದ ಈ ಹೊಸ ಪ್ರಯೋಗ ಮದ್ಯದ ಮಾರುಕಟ್ಟೆಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿರುವುದಂತೂ ನಿಜ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ