ಇಂದಿಗೂ ಸಿಎಂ ಕನಸು ಕಾಣುತ್ತಿರುವ ಸಿದ್ದರಾಮಯ್ಯ! ದುರಂತ ಏನು ಗೊತ್ತಾ?

ಬಾಗಲಕೋಟೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರಾ? ಹೀಗೊಂದು ಪ್ರಶ್ನೆ ಅತೀವೃಷ್ಟಿಯ ನಡುವೆಯೂ ಬಾಗಲಕೋಟೆಯಲ್ಲಿ ಚಕ್ರಸುಳಿ ಸುತ್ತುತ್ತಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಮ್ಮರೆಡ್ಡಿಕೊಪ್ಪ ಗ್ರಾಮದ ಸಂತ್ರಸ್ತರ ಮುಂದೆ ಸಿದ್ದರಾಮಯ್ಯ ಇಂತಹ ಸುಳಿವು ಬಿಟ್ಟುಕೊಟ್ಟಿದ್ದಾರೆ. ಮಧ್ಯಂತರ ಚುನಾವಣೆಯ ಸುಳಿವು ಕೊಟ್ಟ ಸಿದ್ದರಾಮಯ್ಯ: ಎಪ್ರಿಲ್ ಮೇ ತಿಂಗಳಲ್ಲಿ ಚುನಾವಣೆ ಬರುತ್ತೆ. ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ನಿಮ್ಮ ಎಲ್ಲ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಸಂತ್ರಸ್ಥರಿಗೆ ಅಭಯಹಸ್ತ ನೀಡಿದ್ದಾರೆ. ದುರಂತ ಅಂದ್ರೆ ಇದು! ರಾಜ್ಯದ […]

ಇಂದಿಗೂ ಸಿಎಂ ಕನಸು ಕಾಣುತ್ತಿರುವ ಸಿದ್ದರಾಮಯ್ಯ! ದುರಂತ ಏನು ಗೊತ್ತಾ?
ಸಾಧು ಶ್ರೀನಾಥ್​

Updated on: Oct 23, 2019 | 1:27 PM

ಬಾಗಲಕೋಟೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರಾ? ಹೀಗೊಂದು ಪ್ರಶ್ನೆ ಅತೀವೃಷ್ಟಿಯ ನಡುವೆಯೂ ಬಾಗಲಕೋಟೆಯಲ್ಲಿ ಚಕ್ರಸುಳಿ ಸುತ್ತುತ್ತಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಮ್ಮರೆಡ್ಡಿಕೊಪ್ಪ ಗ್ರಾಮದ ಸಂತ್ರಸ್ತರ ಮುಂದೆ ಸಿದ್ದರಾಮಯ್ಯ ಇಂತಹ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಮಧ್ಯಂತರ ಚುನಾವಣೆಯ ಸುಳಿವು ಕೊಟ್ಟ ಸಿದ್ದರಾಮಯ್ಯ:
ಎಪ್ರಿಲ್ ಮೇ ತಿಂಗಳಲ್ಲಿ ಚುನಾವಣೆ ಬರುತ್ತೆ. ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ನಿಮ್ಮ ಎಲ್ಲ ಕೆಲಸ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಸಂತ್ರಸ್ಥರಿಗೆ ಅಭಯಹಸ್ತ ನೀಡಿದ್ದಾರೆ.

ದುರಂತ ಅಂದ್ರೆ ಇದು!
ರಾಜ್ಯದ ಜನತೆ ಅತೀವೃಷ್ಟಿಯಿಂದ ತತ್ತರಿಸಿದ್ದರೆ ಆಡಳಿತಾರೂಢ ಬಿಜೆಪಿ ನಾಯಕರಾಗಲಿ ಅಥವಾ ವಿಪಕ್ಷದ ನಾಯಕರಿಗಾಗಲಿ ಜನರ ಬವಣೆ ಬಗ್ಗೆ ಗಮನ ಹರಿಸುವ ಉಮೇದಿ ಇಲ್ಲವಾಗಿದೆ. ಇನ್ನು ಮೂರು ತಿಂಗಳಲ್ಲಿ ಚುನಾವಣೆ ಬರುತ್ತದೆ ಎಂದು ತುತ್ತೂರಿ ಬಾರಿಸುವುದರಲ್ಲಿ ಮಗ್ನರಾಗಿದ್ದಾರೆ.
ಇನ್ನು, ನೆರೆ ಸಂತ್ರಸ್ತ ಸಮಸ್ಯೆ ಆಲಿಸಲು ಹಾಲಿ ಸಿಎಂ ಯಡಿಯೂರಪ್ಪಗೆ ಟೈಂ ಇಲ್ಲವಾಗಿದೆ. ಇಂದು ವಿಧಾನಸೌಧದಲ್ಲಿ  ನಾನಾ ಜಿಲ್ಲಾಧಿಕಾರಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್​ ಮೀಟಿಂಗ್ ಅನ್ನು 10 ನಿಮಿಷಕ್ಕೆ ಫಿನಿಶ್ ಮಾಡಿದ ಯಡಿಯೂರಪ್ಪ, ಉಪ ಚುನಾವಣೆ ಮೀಟಿಂಗ್ ಗೆ ಓಡೋಡಿ ಸಾಗಿದ್ದಾರೆ.

Published On - 1:22 pm, Wed, 23 October 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us