AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ

ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ
ಕೋಡಿಹಳ್ಳಿ ಚಂದ್ರಶೇಖರ್​ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: Jan 24, 2021 | 9:23 AM

Share

ಬೆಂಗಳೂರು: ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ. ಇದರಲ್ಲಿ ಟ್ರ್ಯಾಕ್ಟರ್ ಸೇರಿ 10 ಸಾವಿರ ವಾಹನಗಳು ಭಾಗಿಯಾಗಲಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 57ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದ್ರೆ ಇದನ್ನು ಒಪ್ಪದ ರೈತ ಸಂಘಟನೆಗಳು ಜನವರಿ 26 ಗಣರಾಜ್ಯೋತ್ಸವದ ದಿನದಂದು ಪರೇಡ್ ನಡೆಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ “ಕೃಷಿ ತಿದ್ದುಪಡಿ ಕಾಯ್ದೆಯನ್ನ ಹಿಂಪಡೆಯಲು ದೆಹಲಿಯಲ್ಲಿ 57 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹತ್ತು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಮ್ಮ ಬೇಡಿಕೆಯನ್ನ ಬಿಟ್ಟು ಬೇರೆಯಲ್ಲ ಮಾತನಾಡುತ್ತಿದ್ದಾರೆ . ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಅಂತ ಹೇಳಿದ್ದಾರೆ. ಆದ್ರೆ ಆನಂತರ ಜಾರಿ‌ ಮಾಡುತ್ತಾರಾ.

ಸಂಪೂರ್ಣ ಖಾಸಗೀಕರಣ ಮಾಡುವ‌ ನಿಟ್ಟಿನಲ್ಲಿ ಕಾಯ್ದೆ ಜಾರಿಗೆ ತಂದಿದ್ದಾರೆ. ಗೂಡ್ಸ್ ವಾಹನಗಳ ಮೇಲೂ ಅದಾನಿ ಹೆಸರಿದೆ. ಜನರು ಮಾತನಾಡಬೇಕು. ಕೃಷಿ ವಲಯದಲ್ಲಿ ಶೇ 85 ರಷ್ಟು ಜನರು ಇದ್ದಾರೆ. ಕೃಷಿ ಕ್ಷೇತ್ರವನ್ನ ಖಾಸಗಿ ವಲಯ ಮಾಡಲು ಹೊರಟಿದ್ದಾರೆ. ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೈಬಿಡಬೇಕು. ಇಲ್ಲವಾದ್ರೆ ಜನವರಿ 26 ರಂದು ರೈತರಿಂದ ಪರೇಡ್ ಇರುತ್ತದೆ. ಸರ್ಕಾರ ತಡೆದರೇ ಪೇಚೆಗೆ ಸಿಲುಕಿಕೊಳ್ಳಲಿದೆ. ಹಲವು ಸಂಘಟನೆಗಳು ಈ ಪರೇಡ್​ನಲ್ಲಿ ಭಾಗವಹಿಸಲಿವೆ. ಈ ಬಗ್ಗೆ ಸರ್ಕಾರಕ್ಕೆ ಅನುಮತಿ ಕೇಳಿದ್ದೇವೆ. ಆದ್ರೆ ರೈತರ ಪರೇಡ್​ಗೆ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ ಮಾತುಕತೆ ನಡೆಸುತ್ತಿದ್ದಾರೆ” ಎಂದು ಹೇಳಿದ್ರು.

ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು