AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ

ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ
ಕೋಡಿಹಳ್ಳಿ ಚಂದ್ರಶೇಖರ್​ (ಸಂಗ್ರಹ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: Jan 24, 2021 | 9:23 AM

Share

ಬೆಂಗಳೂರು: ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ. ಇದರಲ್ಲಿ ಟ್ರ್ಯಾಕ್ಟರ್ ಸೇರಿ 10 ಸಾವಿರ ವಾಹನಗಳು ಭಾಗಿಯಾಗಲಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 57ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದ್ರೆ ಇದನ್ನು ಒಪ್ಪದ ರೈತ ಸಂಘಟನೆಗಳು ಜನವರಿ 26 ಗಣರಾಜ್ಯೋತ್ಸವದ ದಿನದಂದು ಪರೇಡ್ ನಡೆಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ “ಕೃಷಿ ತಿದ್ದುಪಡಿ ಕಾಯ್ದೆಯನ್ನ ಹಿಂಪಡೆಯಲು ದೆಹಲಿಯಲ್ಲಿ 57 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹತ್ತು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಮ್ಮ ಬೇಡಿಕೆಯನ್ನ ಬಿಟ್ಟು ಬೇರೆಯಲ್ಲ ಮಾತನಾಡುತ್ತಿದ್ದಾರೆ . ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಅಂತ ಹೇಳಿದ್ದಾರೆ. ಆದ್ರೆ ಆನಂತರ ಜಾರಿ‌ ಮಾಡುತ್ತಾರಾ.

ಸಂಪೂರ್ಣ ಖಾಸಗೀಕರಣ ಮಾಡುವ‌ ನಿಟ್ಟಿನಲ್ಲಿ ಕಾಯ್ದೆ ಜಾರಿಗೆ ತಂದಿದ್ದಾರೆ. ಗೂಡ್ಸ್ ವಾಹನಗಳ ಮೇಲೂ ಅದಾನಿ ಹೆಸರಿದೆ. ಜನರು ಮಾತನಾಡಬೇಕು. ಕೃಷಿ ವಲಯದಲ್ಲಿ ಶೇ 85 ರಷ್ಟು ಜನರು ಇದ್ದಾರೆ. ಕೃಷಿ ಕ್ಷೇತ್ರವನ್ನ ಖಾಸಗಿ ವಲಯ ಮಾಡಲು ಹೊರಟಿದ್ದಾರೆ. ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೈಬಿಡಬೇಕು. ಇಲ್ಲವಾದ್ರೆ ಜನವರಿ 26 ರಂದು ರೈತರಿಂದ ಪರೇಡ್ ಇರುತ್ತದೆ. ಸರ್ಕಾರ ತಡೆದರೇ ಪೇಚೆಗೆ ಸಿಲುಕಿಕೊಳ್ಳಲಿದೆ. ಹಲವು ಸಂಘಟನೆಗಳು ಈ ಪರೇಡ್​ನಲ್ಲಿ ಭಾಗವಹಿಸಲಿವೆ. ಈ ಬಗ್ಗೆ ಸರ್ಕಾರಕ್ಕೆ ಅನುಮತಿ ಕೇಳಿದ್ದೇವೆ. ಆದ್ರೆ ರೈತರ ಪರೇಡ್​ಗೆ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ ಮಾತುಕತೆ ನಡೆಸುತ್ತಿದ್ದಾರೆ” ಎಂದು ಹೇಳಿದ್ರು.

ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಕಾಂಗ್ರೆಸ್ ಮುಖಂಡರ ಪ್ರತಿಭಟನೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ