AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ

ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ.

ಗಣರಾಜ್ಯೋತ್ಸವದಂದು ರಾಜ್ಯದಲ್ಲಿ ಮೊಳಗಲಿದೆ ರೈತ ಕಹಳೆ.. ರೈತ ಪರೇಡ್​ನಲ್ಲಿ 10 ಸಾವಿರ ವಾಹನ ಭಾಗಿ
ಕೋಡಿಹಳ್ಳಿ ಚಂದ್ರಶೇಖರ್​ (ಸಂಗ್ರಹ ಚಿತ್ರ)
ಆಯೇಷಾ ಬಾನು
|

Updated on: Jan 24, 2021 | 9:23 AM

Share

ಬೆಂಗಳೂರು: ಜನವರಿ 26ರಂದು ರಾಜ್ಯದಲ್ಲೂ ರೈತರಿಂದ ಪರೇಡ್ ಇರಲಿದೆ. ಗಣರಾಜ್ಯೋತ್ಸವದ ಧ್ವಜಾರೋಹಣ ಬಳಿಕ ರೈತರಿಂದ ಪರೇಡ್ ಮಾಡಲಾಗುತ್ತಿದ್ದು, ನೆಲಮಂಗಲದ ನೈಸ್ ಜಂಕ್ಷನ್​ನಿಂದ ಫ್ರೀಡಂಪಾರ್ಕ್​ವರೆಗೂ ಪರೇಡ್ ನಡೆಸಲಾಗುತ್ತೆ. ಇದರಲ್ಲಿ ಟ್ರ್ಯಾಕ್ಟರ್ ಸೇರಿ 10 ಸಾವಿರ ವಾಹನಗಳು ಭಾಗಿಯಾಗಲಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ 57ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆದ್ರೆ ಇದನ್ನು ಒಪ್ಪದ ರೈತ ಸಂಘಟನೆಗಳು ಜನವರಿ 26 ಗಣರಾಜ್ಯೋತ್ಸವದ ದಿನದಂದು ಪರೇಡ್ ನಡೆಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ “ಕೃಷಿ ತಿದ್ದುಪಡಿ ಕಾಯ್ದೆಯನ್ನ ಹಿಂಪಡೆಯಲು ದೆಹಲಿಯಲ್ಲಿ 57 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಹತ್ತು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಮ್ಮ ಬೇಡಿಕೆಯನ್ನ ಬಿಟ್ಟು ಬೇರೆಯಲ್ಲ ಮಾತನಾಡುತ್ತಿದ್ದಾರೆ . ಒಂದೂವರೆ ವರ್ಷ ಕಾಯ್ದೆ ಜಾರಿ‌ ಮಾಡಲ್ಲ ಅಂತ ಹೇಳಿದ್ದಾರೆ. ಆದ್ರೆ ಆನಂತರ ಜಾರಿ‌ ಮಾಡುತ್ತಾರಾ.

ಸಂಪೂರ್ಣ ಖಾಸಗೀಕರಣ ಮಾಡುವ‌ ನಿಟ್ಟಿನಲ್ಲಿ ಕಾಯ್ದೆ ಜಾರಿಗೆ ತಂದಿದ್ದಾರೆ. ಗೂಡ್ಸ್ ವಾಹನಗಳ ಮೇಲೂ ಅದಾನಿ ಹೆಸರಿದೆ. ಜನರು ಮಾತನಾಡಬೇಕು. ಕೃಷಿ ವಲಯದಲ್ಲಿ ಶೇ 85 ರಷ್ಟು ಜನರು ಇದ್ದಾರೆ. ಕೃಷಿ ಕ್ಷೇತ್ರವನ್ನ ಖಾಸಗಿ ವಲಯ ಮಾಡಲು ಹೊರಟಿದ್ದಾರೆ. ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೈಬಿಡಬೇಕು. ಇಲ್ಲವಾದ್ರೆ ಜನವರಿ 26 ರಂದು ರೈತರಿಂದ ಪರೇಡ್ ಇರುತ್ತದೆ. ಸರ್ಕಾರ ತಡೆದರೇ ಪೇಚೆಗೆ ಸಿಲುಕಿಕೊಳ್ಳಲಿದೆ. ಹಲವು ಸಂಘಟನೆಗಳು ಈ ಪರೇಡ್​ನಲ್ಲಿ ಭಾಗವಹಿಸಲಿವೆ. ಈ ಬಗ್ಗೆ ಸರ್ಕಾರಕ್ಕೆ ಅನುಮತಿ ಕೇಳಿದ್ದೇವೆ. ಆದ್ರೆ ರೈತರ ಪರೇಡ್​ಗೆ ಸರ್ಕಾರ ಇನ್ನೂ ಅನುಮತಿ ನೀಡಿಲ್ಲ ಮಾತುಕತೆ ನಡೆಸುತ್ತಿದ್ದಾರೆ” ಎಂದು ಹೇಳಿದ್ರು.

ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಚಲೋ: ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು