AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ಉದ್ಯೋಗಾಕಾಂಕ್ಷಿಗಳ ತಾಳ್ಮೆ ಕಟ್ಟೆಯೊಡೆದಿದ್ದು, ಧಾರವಾಡದಲ್ಲಿ ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಇತ್ತ ನಿರುದ್ಯೋಗಿ ಯುವ ಜನತೆಗೆ ರಾಜ್ಯ ಸರ್ಕಾರ ಗುಡ್​​ನ್ಯೂಸ್ ನೀಡಿದೆ.

ಧಾರವಾಡದಲ್ಲಿ ಉಗ್ರ ಹೋರಾಟ ಬೆನ್ನಲ್ಲೇ  ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
Vidhana Soudha
ರಮೇಶ್ ಬಿ. ಜವಳಗೇರಾ
|

Updated on: Feb 24, 2026 | 5:14 PM

Share

ಬೆಂಗಳೂರು, (ಫೆಬ್ರವರಿ 24):ಕರ್ನಾಟಕದಲ್ಲಿ (Karnataka) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ (Jobs) ಭರ್ತಿಗೆ ಆಗ್ರಹಿಸಿ ವಿದ್ಯಾಕಾಶಿ ಧಾರವಾಡದಲ್ಲಿ ಈ ಹಿಂದೆಯೂ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದು. ಆದರೂ ಸರ್ಕಾರ ಯಾವುದೇ ಕ್ರಮಕೈಗೊಳ್ಳದಿದ್ದರಿಂದ ರೊಚ್ಚಿಗೆದ್ದ ಯುವಕರು ಸರ್ಕಾರದ ವಿರುದ್ಧ ಮತ್ತೆ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಯುವಕರ ಕಿಚ್ಚು ಜೋರಾಗುತ್ತಿದ್ದಂತೆಯೇ ಇತ್ತ ಕರ್ನಾಟಕ ಆರ್ಥಿಕ ಇಲಾಖೆ (Karnataka finance department ), 24 ಸಾವಿ ಹುದ್ದೆಗಳ ನೇಮಕಾತಿಗೆ ನೇಮಕಾತಿಗೆ ಮಂಜೂರಾತಿ ನೀಡಿದೆ.

ಕರ್ನಾಟಕದ ವಿವಿಧ ಒಟ್ಟು 32 ಇಲಾಖೆಯಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಎ ದರ್ಜೆಯ 542 ಹುದ್ದೆ, ಬಿ ದರ್ಜೆಯ 619 ಹುದ್ದೆ ಹಾಗೂ ಎಫ್ ಡಿ ಸಿ ದರ್ಜೆಯ 23119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಉದ್ಯೋಗಕ್ಕಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ನಿರುದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡುವಂಥ ತೀರ್ಮಾನವನ್ನು ಸರ್ಕಾರ ತೆಗದುಕೊಂಡಿದೆ.

ಇದನ್ನೂ ನೋಡಿ: ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್​​

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿದ್ದು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಈ ಹಿಂದೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದರು. ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ.

ಧಾರವಾಡದ ಬೃಹತ್ ಪ್ರತಿಭಟನೆಗೆ ಸಿಎಂ ಪ್ರತಿಕ್ರಿಯೆ

ಇನ್ನು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸಾವಿರಾರು ವಿದ್ಯಾರ್ಥಿಗಳು ಧಾರವಾಡದಲ್ಲಿ ನಡೆಸುತ್ತಿರುವ ಬೃಹತ್ ಉಗ್ರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಸುದೀರ್ಘ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕುಟುಂಬದ ಭರವಸೆ ಮತ್ತು ವರ್ಷಗಳ ಪರಿಶ್ರಮವಿರುತ್ತದೆ ಎಂಬುದು ನನಗೆ ತಿಳಿದಿದೆ. ಉದ್ಯೋಗಾಕಾಂಕ್ಷಿಗಳು ಅನುಭವಿಸುತ್ತಿರುವ ಆತಂಕ ಮತ್ತು ಹತಾಶೆಯನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ನಿಮ್ಮ ಭವಿಷ್ಯ ನಮಗೆ ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಬೃಹತ್ ಪ್ರಮಾಣದಲ್ಲಿ ಖಾಲಿ ಇರುವುದಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಸಿದ್ದರಾಮಯ್ಯ ನೇರ ವಾಗ್ದಾಳಿ ನಡೆಸಿದ್ದಾರೆ. ‘ನಾವು ಅಧಿಕಾರಕ್ಕೆ ಬಂದಾಗ ರಾಜ್ಯದಲ್ಲಿ 2.64 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದವು. ಇದು ಹಿಂದಿನ ಸರ್ಕಾರದ ನಿಷ್ಕ್ರಿಯತೆಯ ಫಲ. 2019 ರಿಂದ 2023ರ ನಡುವೆ ನಡೆದ ನೇಮಕಾತಿ ಅಕ್ರಮಗಳು ಮತ್ತು ಭ್ರಷ್ಟಾಚಾರದ ಹಗರಣಗಳು ಇಡೀ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಕುಂದಿಸಿದವು. ಈಗ ವಿರೋಧ ಪಕ್ಷದ ನಾಯಕರು ರಾಜಕೀಯ ಹಿತಾಸಕ್ತಿಗಾಗಿ ಮುಗ್ಧ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ’ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​