Sign In

By signing in or creating an account, you agree with Associated Broadcasting Company's Terms & Conditions and Privacy Policy.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ

ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ ಜನಗಣತಿ ಮಾಡಲು ನಿರ್ಧರಿಸಿದೆ.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ
ಸಾಂಧರ್ಬಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Mar 06, 2023 | 8:33 AM

ಮೈಸೂರು: ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು (Karnataka Government) ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ (Transgender) ಜನಗಣತಿ (Survey) ಮಾಡಲು ನಿರ್ಧರಿಸಿದೆ. ಈ ಸಮೀಕ್ಷೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತದೆ. ಪ್ರಾಯೋಗಿಕವಾಗಿ ಮೈಸೂರು (Mysore) ಮತ್ತು ವಿಜಯಪುರ (Vijaypura) ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಮಾರ್ಚ್​ 10 ರಿಂದ 24ರವರೆಗೆ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯಿಂದ ತೃತೀಯಲಿಂಗಿಗಳ ಜನಸಂಖ್ಯೆ ತಿಳಿಯುತ್ತದೆ. ಹಾಗೆ ಅವರ ಸಾಮಾಜಿ ಮತ್ತು ಆರ್ಥಿಕ ಪರೀಸ್ಥಿತಿ ಬಗ್ಗೆಯೂ ಗೊತ್ತಾಗುತ್ತದೆ. ಇದರಿಂದ ಸರ್ಕಾರಕ್ಕೆ ಸಮುದಯಾದ ಸಬಲೀಕರಣಕ್ಕಾಗಿ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯಲ್ಲಿ ಮಾರ್ಚ್​ 10 ರಿಂದ ಸಮೀಕ್ಷೆ ಪ್ರಾರಂಭವಾಗಲಿದ್ದು, 45 ದಿನಗಳ ಕಾಲ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯನ್ನು ತೃತೀಯಲಿಂಗಿಗಳ ಮೂಲಕವೇ ನಡೆಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ. ಬಸವರಾಜು ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮೀಕ್ಷೆಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರಿನ ತೃತೀಯಲಿಂಗಿ ಸಮುದಾಯದ ಪ್ರಮುಖರಲ್ಲಿ ಒಬ್ಬರಾದ ಪ್ರಣತಿ ಪ್ರಕಾಶ್ ಮಾತನಾಡಿ ಈ ಸಮೀಕ್ಷೆಯನ್ನು ತೃತೀಯಲಿಂಗಿ ಸಮುದಾಯದ ಸದಸ್ಯರೇ ನಡೆಸುತ್ತಾರೆ ಎಂದು ವಿವರಿಸಿದರು.

ತೃತೀಯಲಿಂಗಿಗಳ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ಇತರ ಜೀವನ ಪರಿಸ್ಥಿತಿಗಳನ್ನು ಕಂಡುಹಿಡಿಯುವುದು ಸಮೀಕ್ಷೆಯ ಹಿಂದಿನ ಆಲೋಚನೆಯಾಗಿದೆ. ಸಮೀಕ್ಷೆಯನ್ನು ತಾಲೂಕು ಕೇಂದ್ರದಲ್ಲಿ ಮಾಡಲಾಗುವುದು. ನಿಗದಿತ ದಿನಾಂಕದಂದು ಹತ್ತಿರದ ಪ್ರದೇಶಗಳ ತೃತೀಯಲಿಂಗಿಗಳು ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಮುಂಬೈ ಮುಂತಾದ ಮಹಾನಗರಗಳಿಗೆ ವಲಸೆ ಹೋದವರು ನಿಗದಿತ ದಿನದಂದು ಸಮೀಕ್ಷೆಗೆ ಹಾಜರಾಗಬೇಕು ಎಂದರು.

ಮೈಸೂರು ಜಿಲ್ಲೆಯಿಂದ ಒಟ್ಟು 9 ಮಂದಿ ಸಮೀಕ್ಷೆ ನಡೆಸುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮೀಕ್ಷೆಯ ನಂತರ, ಎಲ್ಲ ತೃತೀಯಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ಗಳು ಸಹಾಯವಾಗುತ್ತದೆ. ಈ ಸಮೀಕ್ಷೆಯು ಜಿಲ್ಲೆಯ ಸಮುದಾಯದ ನೈಜ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ. ತೃತೀಯ ಲಿಂಗಿಗಳು ಈಗ ಒಂದಾಗಿದ್ದಾರೆ. ಮತ್ತು ಸಮಾಜದ ಮುನ್ನಲೆಗೆ ಬರುತ್ತಿದ್ದಾರೆ ಹೆಮ್ಮೆ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Mon, 6 March 23

ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ