AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ

ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ ಜನಗಣತಿ ಮಾಡಲು ನಿರ್ಧರಿಸಿದೆ.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 06, 2023 | 8:33 AM

Share

ಮೈಸೂರು: ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು (Karnataka Government) ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ (Transgender) ಜನಗಣತಿ (Survey) ಮಾಡಲು ನಿರ್ಧರಿಸಿದೆ. ಈ ಸಮೀಕ್ಷೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತದೆ. ಪ್ರಾಯೋಗಿಕವಾಗಿ ಮೈಸೂರು (Mysore) ಮತ್ತು ವಿಜಯಪುರ (Vijaypura) ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಮಾರ್ಚ್​ 10 ರಿಂದ 24ರವರೆಗೆ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯಿಂದ ತೃತೀಯಲಿಂಗಿಗಳ ಜನಸಂಖ್ಯೆ ತಿಳಿಯುತ್ತದೆ. ಹಾಗೆ ಅವರ ಸಾಮಾಜಿ ಮತ್ತು ಆರ್ಥಿಕ ಪರೀಸ್ಥಿತಿ ಬಗ್ಗೆಯೂ ಗೊತ್ತಾಗುತ್ತದೆ. ಇದರಿಂದ ಸರ್ಕಾರಕ್ಕೆ ಸಮುದಯಾದ ಸಬಲೀಕರಣಕ್ಕಾಗಿ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯಲ್ಲಿ ಮಾರ್ಚ್​ 10 ರಿಂದ ಸಮೀಕ್ಷೆ ಪ್ರಾರಂಭವಾಗಲಿದ್ದು, 45 ದಿನಗಳ ಕಾಲ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯನ್ನು ತೃತೀಯಲಿಂಗಿಗಳ ಮೂಲಕವೇ ನಡೆಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ. ಬಸವರಾಜು ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮೀಕ್ಷೆಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರಿನ ತೃತೀಯಲಿಂಗಿ ಸಮುದಾಯದ ಪ್ರಮುಖರಲ್ಲಿ ಒಬ್ಬರಾದ ಪ್ರಣತಿ ಪ್ರಕಾಶ್ ಮಾತನಾಡಿ ಈ ಸಮೀಕ್ಷೆಯನ್ನು ತೃತೀಯಲಿಂಗಿ ಸಮುದಾಯದ ಸದಸ್ಯರೇ ನಡೆಸುತ್ತಾರೆ ಎಂದು ವಿವರಿಸಿದರು.

ತೃತೀಯಲಿಂಗಿಗಳ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ಇತರ ಜೀವನ ಪರಿಸ್ಥಿತಿಗಳನ್ನು ಕಂಡುಹಿಡಿಯುವುದು ಸಮೀಕ್ಷೆಯ ಹಿಂದಿನ ಆಲೋಚನೆಯಾಗಿದೆ. ಸಮೀಕ್ಷೆಯನ್ನು ತಾಲೂಕು ಕೇಂದ್ರದಲ್ಲಿ ಮಾಡಲಾಗುವುದು. ನಿಗದಿತ ದಿನಾಂಕದಂದು ಹತ್ತಿರದ ಪ್ರದೇಶಗಳ ತೃತೀಯಲಿಂಗಿಗಳು ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಮುಂಬೈ ಮುಂತಾದ ಮಹಾನಗರಗಳಿಗೆ ವಲಸೆ ಹೋದವರು ನಿಗದಿತ ದಿನದಂದು ಸಮೀಕ್ಷೆಗೆ ಹಾಜರಾಗಬೇಕು ಎಂದರು.

ಮೈಸೂರು ಜಿಲ್ಲೆಯಿಂದ ಒಟ್ಟು 9 ಮಂದಿ ಸಮೀಕ್ಷೆ ನಡೆಸುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮೀಕ್ಷೆಯ ನಂತರ, ಎಲ್ಲ ತೃತೀಯಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ಗಳು ಸಹಾಯವಾಗುತ್ತದೆ. ಈ ಸಮೀಕ್ಷೆಯು ಜಿಲ್ಲೆಯ ಸಮುದಾಯದ ನೈಜ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ. ತೃತೀಯ ಲಿಂಗಿಗಳು ಈಗ ಒಂದಾಗಿದ್ದಾರೆ. ಮತ್ತು ಸಮಾಜದ ಮುನ್ನಲೆಗೆ ಬರುತ್ತಿದ್ದಾರೆ ಹೆಮ್ಮೆ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Mon, 6 March 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ