AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ

ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ ಜನಗಣತಿ ಮಾಡಲು ನಿರ್ಧರಿಸಿದೆ.

Transgender Survey: ರಾಜ್ಯ ಸರ್ಕಾರದಿಂದ ಇದೇ ಮೊದಲ ಬಾರಿಗೆ ತೃತೀಯಲಿಂಗಿಗಳ ಜನಗಣತಿ ನಡೆಸಲು ನಿರ್ಧಾರ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
|

Updated on:Mar 06, 2023 | 8:33 AM

Share

ಮೈಸೂರು: ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು (Karnataka Government) ರಾಜ್ಯದಲ್ಲಿ ಇರುವ ತೃತೀಯಲಿಂಗಿಗಳ (Transgender) ಜನಗಣತಿ (Survey) ಮಾಡಲು ನಿರ್ಧರಿಸಿದೆ. ಈ ಸಮೀಕ್ಷೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತದೆ. ಪ್ರಾಯೋಗಿಕವಾಗಿ ಮೈಸೂರು (Mysore) ಮತ್ತು ವಿಜಯಪುರ (Vijaypura) ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಮಾರ್ಚ್​ 10 ರಿಂದ 24ರವರೆಗೆ ಸಮೀಕ್ಷೆ ನಡೆಯಲಿದೆ. ಈ ಸಮೀಕ್ಷೆಯಿಂದ ತೃತೀಯಲಿಂಗಿಗಳ ಜನಸಂಖ್ಯೆ ತಿಳಿಯುತ್ತದೆ. ಹಾಗೆ ಅವರ ಸಾಮಾಜಿ ಮತ್ತು ಆರ್ಥಿಕ ಪರೀಸ್ಥಿತಿ ಬಗ್ಗೆಯೂ ಗೊತ್ತಾಗುತ್ತದೆ. ಇದರಿಂದ ಸರ್ಕಾರಕ್ಕೆ ಸಮುದಯಾದ ಸಬಲೀಕರಣಕ್ಕಾಗಿ ನೀತಿಗಳು ಮತ್ತು ಯೋಜನೆಗಳನ್ನು ರೂಪಿಸಲು ಅನುಕೂಲವಾಗುತ್ತದೆ.

ಮೈಸೂರು ಜಿಲ್ಲೆಯಲ್ಲಿ ಮಾರ್ಚ್​ 10 ರಿಂದ ಸಮೀಕ್ಷೆ ಪ್ರಾರಂಭವಾಗಲಿದ್ದು, 45 ದಿನಗಳ ಕಾಲ ಸಮೀಕ್ಷೆ ನಡೆಯುತ್ತದೆ. ಸಮೀಕ್ಷೆಯನ್ನು ತೃತೀಯಲಿಂಗಿಗಳ ಮೂಲಕವೇ ನಡೆಸಲಾಗುತ್ತದೆ. ತಾಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ. ಬಸವರಾಜು ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮೀಕ್ಷೆಯ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೈಸೂರಿನ ತೃತೀಯಲಿಂಗಿ ಸಮುದಾಯದ ಪ್ರಮುಖರಲ್ಲಿ ಒಬ್ಬರಾದ ಪ್ರಣತಿ ಪ್ರಕಾಶ್ ಮಾತನಾಡಿ ಈ ಸಮೀಕ್ಷೆಯನ್ನು ತೃತೀಯಲಿಂಗಿ ಸಮುದಾಯದ ಸದಸ್ಯರೇ ನಡೆಸುತ್ತಾರೆ ಎಂದು ವಿವರಿಸಿದರು.

ತೃತೀಯಲಿಂಗಿಗಳ ಸಾಮಾಜಿಕ-ಆರ್ಥಿಕ, ಶೈಕ್ಷಣಿಕ ಮತ್ತು ಇತರ ಜೀವನ ಪರಿಸ್ಥಿತಿಗಳನ್ನು ಕಂಡುಹಿಡಿಯುವುದು ಸಮೀಕ್ಷೆಯ ಹಿಂದಿನ ಆಲೋಚನೆಯಾಗಿದೆ. ಸಮೀಕ್ಷೆಯನ್ನು ತಾಲೂಕು ಕೇಂದ್ರದಲ್ಲಿ ಮಾಡಲಾಗುವುದು. ನಿಗದಿತ ದಿನಾಂಕದಂದು ಹತ್ತಿರದ ಪ್ರದೇಶಗಳ ತೃತೀಯಲಿಂಗಿಗಳು ಸಮೀಕ್ಷೆಯಲ್ಲಿ ಭಾಗಿಯಾಗಬೇಕು. ಮುಂಬೈ ಮುಂತಾದ ಮಹಾನಗರಗಳಿಗೆ ವಲಸೆ ಹೋದವರು ನಿಗದಿತ ದಿನದಂದು ಸಮೀಕ್ಷೆಗೆ ಹಾಜರಾಗಬೇಕು ಎಂದರು.

ಮೈಸೂರು ಜಿಲ್ಲೆಯಿಂದ ಒಟ್ಟು 9 ಮಂದಿ ಸಮೀಕ್ಷೆ ನಡೆಸುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮೀಕ್ಷೆಯ ನಂತರ, ಎಲ್ಲ ತೃತೀಯಲಿಂಗಿ ವ್ಯಕ್ತಿಗಳಿಗೆ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ. ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಕಾರ್ಡ್‌ಗಳು ಸಹಾಯವಾಗುತ್ತದೆ. ಈ ಸಮೀಕ್ಷೆಯು ಜಿಲ್ಲೆಯ ಸಮುದಾಯದ ನೈಜ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ. ತೃತೀಯ ಲಿಂಗಿಗಳು ಈಗ ಒಂದಾಗಿದ್ದಾರೆ. ಮತ್ತು ಸಮಾಜದ ಮುನ್ನಲೆಗೆ ಬರುತ್ತಿದ್ದಾರೆ ಹೆಮ್ಮೆ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:30 am, Mon, 6 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ