AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಾವುಟ ರೂಪಿಸಿದ ರಾಮಮೂರ್ತಿ ಪತ್ನಿ ನಿಧನ

ಕನ್ನಡ ಬಾವುಟ ರೂಪಿಸಿದ ಎಂ. ರಾಮಮೂರ್ತಿಯವರ ಪತ್ನಿ ಶತಾಯುಷಿ ಕಮಲಮ್ಮ ಅವರು ಮೇ 26 ರಂದು ನಿಧನರಾದರು. ವಯೋಸಹಜ ಅನಾರೋಗ್ಯದಿಂದ ನಿಧನರಾದ ಅವರು ಬನಶಂಕರಿಯಲ್ಲಿ ವಾಸವಿದ್ದರು. ಕಮಲಮ್ಮ ಅವರ ನಿಧನಕ್ಕೆ ಕನ್ನಡಪರ ಸಂಘಟನೆಗಳು ಸಂತಾಪ ಸೂಚಿಸಿವೆ. ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.

ಕರ್ನಾಟಕ ಬಾವುಟ ರೂಪಿಸಿದ ರಾಮಮೂರ್ತಿ ಪತ್ನಿ ನಿಧನ
ಎಂ. ರಾಮಮೂರ್ತಿ ಪತ್ನಿ ಕಮಲಮ್ಮ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 26, 2025 | 2:45 PM

Share

ಬೆಂಗಳೂರು, ಮೇ 26: ಕನ್ನಡ ಚಳವಳಿಯ ಕಟ್ಟಾಳು, ಕರ್ನಾಟಕ ಬಾವುಟ (Karnataka Flag) ರೂಪಿಸಿದ ಎಂ. ರಾಮಮೂರ್ತಿ (M Ramamurathy) ಅವರ ಪತ್ನಿ ಶತಾಯುಷಿ ಕಮಲಮ್ಮ ಅವರು ವಯೋಸಹಜ ಅನಾರೋಗ್ಯದಿಂದ ಸೋಮವಾರ (ಮೇ 26) ಬೆಳಿಗ್ಗೆ 7:20ಕ್ಕೆ ನಿಧನರಾಗಿದ್ದಾರೆ. ಬನಶಂಕರಿ ಸೇವಾಕ್ಷೇತ್ರದಲ್ಲಿ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕಮಲಮ್ಮ ಅವರ ನಿಧನಕ್ಕೆ ಕನ್ನಡಪರ ಸಂಘಟನೆಗಳು ಸಂತಾಪ ಸೂಚಿಸಿವೆ. ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಕಮಲಮ್ಮ ಅವರು ಬನಶಂಕರಿ ಸೇವಾಶ್ರಮದಲ್ಲೇ ವಾಸವಿದ್ದರು.

ಪರಭಾಷೆಯ ಹಾವಳಿ ಸಂದರ್ಭದಲ್ಲಿ ಕನ್ನಡ ಭಾವುಟ ರೂಪಿಸಿದ್ದ ರಾಮಮೂರ್ತಿ

1950-60ರ ದಶಕದಲ್ಲಿ ರಾಜಧಾನಿ ಬೆಂಗಳೂರಿನಲ್ಲೇ ಕನ್ನಡ ಅನಾಥವಾಗಿತ್ತು. ಪರಭಾಷಿಯ ಹಾವಳಿ ಜೋರಾಗಿತ್ತು. ಇಂತಹ ಸಂದರ್ಭದಲ್ಲಿ ನಮ್ಮ ನಾಡುನುಡಿ ನೆಲಜಲಗಳ ಪ್ರೇಮ, ಅಭಿಮಾನ ಜಾಗೃತಗೊಳ್ಳುವಂತಾಗಬೇಕು ಎಂದು ಅಂದುಕೊಡವರಲ್ಲಿ ಎಂ. ರಾಮಮೂರ್ತಿಯವರು ಒಬ್ಬರು.

1962ರಲ್ಲಿ ಕರ್ನಾಟಕ ಸಂಯುಕ್ತ ರಂಗ ಎಂಬ ಕನ್ನಡ ವೇದಿಕೆ ಮೂಲಕ ಕನ್ನಡದ ಕೆಲಸಕ್ಕಾಗಿ ಬೀದಿಗಿಳಿಯುತ್ತಾರೆ ಕನ್ನಡೇತರರ ಪ್ರಾಬಲ್ಯ ಕಡಿಮೆ ಮಾಡಲು ಪ್ರತಿಭಟನೆಗೆ ತೊಡಗುತ್ತಾರೆ. ಅಲ್ಲದೇ ಎಂ. ರಾಮಮೂರ್ತಿಯವರು ಕನ್ನಡ ಯುವಜನ ಎಂಬ ಪತ್ರಿಕೆಯನ್ನೂ ಪ್ರಾರಂಭಿಸುತ್ತಾರೆ. ಕನ್ನಡ ರಾಜ್ಯೋತ್ಸವಗಳ ಆಚರಣೆಗೆ ಪ್ರೇರಣೆ ಒದಗಿಸಿ ಮೊದಲು ಬೆಂಗಳೂರಿನಲ್ಲಿ ರಾಜ್ಯೋತ್ಸವ ಆಚರಿಸುತ್ತಾರೆ. ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿಯಲು ರಾಮಮೂರ್ತಿಯವರು ಹಳದಿ ಕೆಂಪು ಬಣ್ಣದ ಕನ್ನಡ ಧ್ವಜವನ್ನು ರೂಪಿಸುತ್ತಾರೆ.

ವರದಿ: ಲಕ್ಷ್ಮೀ ನರಸಿಂಹ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Mon, 26 May 25

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು