AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್

ಎಚ್ಎಂಟಿ ಅರಣ್ಯ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಹಾಗೂ ಹಾಲಿ ಐಎಎಸ್ ಮತ್ತು ಐಎಫ್ಎಸ್ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಮೊದಲು ಅರಣ್ಯ ಸಚಿವರ ಅನುಮತಿ ಪಡೆಯದಿರುವುದು ಮತ್ತು ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್
ಸಚಿವ ಈಶ್ವರ್ ಖಂಡ್ರೆ ಮತ್ತು ಶೋಕಾಸ್ ನೋಟಿಸ್ ಪ್ರತಿ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 12, 2024 | 10:29 AM

Share

ಬೆಂಗಳೂರು, ನವೆಂಬರ್ 12: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ ಬಿಜ್ಜೂರ್, ಆರ್ ಗೋಕುಲ್​ಗೆ ಕಾರಣ ಕೇಳಿ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಈ ಅಧಿಕಾರಿಗಳು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, ಎಚ್ಎಂಟಿ ವಶದಲ್ಲಿರುವ ಅರಣ್ಯ ಭೂಮಿ ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಅನುಮತಿ ಕೋರಿ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಏನಿದು ಪ್ರಕರಣ?

ಐಎಎಸ್ ಅಧಿಕಾರಿಗಳು ಹಾಗೂ ಐಎಫ್ಎಸ್ ಅಧಿಕಾರಿಗಳು ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರ ಜಮೀನು ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಕೋರಿದ್ದರು. ಅರಣ್ಯದ ಸ್ವರೂಪ ಕಳೆದುಕೊಂಡಿದೆ ಎಂಬ ಬಗ್ಗೆ ಕೇವಲ ಅಧಿಕಾರಿಗಳ ಮಟ್ಟದಲ್ಲೇ ನಿರ್ಧಾರ ಕೈಗೊಳ್ಳಲಾಗಿತ್ತು. ಸುಪ್ರೀಂಕೋರ್ಟ್​ಗೆ ಮೇಲಿನ ಐಎಫ್ಎಸ್ ಅಧಿಕಾರಿಗಳು ಐಎ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಅಂದಿನ ಅರಣ್ಯ ಸಚಿವರ ಅಥವಾ ಸಚಿವ ಸಂಪುಟದ ಪೂರ್ವಾನುಮತಿಯನ್ನೂ ಪಡೆದಿರಲಿಲ್ಲ.

ಈ ಹಿನ್ನೆಲೆಯಲ್ಲಿ, ನಿಯಮ ಉಲ್ಲಂಘಿಸಿ ಸಾವಿರಾರು ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯನ್ನು ಡಿ ನೋಟಿಫೈ ಮಾಡಲು ಐಎ ಸಲ್ಲಿಸಿದ ಅಧಿಕಾರಿಗಳೇ ಕಾರಣ ಎಂದು ಆರೋಪಿಸಲಾಗಿದೆ. ಹೀಗಾಗಿ ಕಾರಣ ಕೇಳಿ ನೋಟಿಸ್ ನೀಡುವಂತೆ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೆಪ್ಟೆಂಬರ್ 24ರಂದು ಸೂಚನೆ ನೀಡಿದ್ದರು. ಅದರಂತೆ, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾಗಿರುವ ಸಂದೀಪ್ ದವೆ, ನಿವೃತ್ತ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಗೋಗಿ ಹಾಗೂ ಹಾಲಿ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾಗಿರುವ ಐಟಿಸಿ ವಿಭಾಗದ ಸ್ಮಿತಾ ಬಿಜ್ಜೂರ್, ತಾಂತ್ರಿಕ ಕೋಶದ ಆರ್. ಗೋಕುಲ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಅರಣ್ಯ ಭೂಮಿ ಬಗ್ಗೆ ನಿಯಮಗಳಲ್ಲೇನಿದೆ?

ಸುಪ್ರೀಂಕೋರ್ಟ್ ಹೇಳಿರುವಂತೆ ‘Once a forest is always a forest unless it is de-notified’. ಅಂದರೆ ಅನ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಆಗದ ಹೊರತು ಒಮ್ಮೆ ಅರಣ್ಯ ಎಂದು ನಮೂದಾದ ಭೂಮಿ ಎಂದೆಂದಿಗೂ ಅರಣ್ಯವೇ ಆಗಿರುತ್ತದೆ. ಹೀಗಾಗಿ ಅರಣ್ಯ ಸಂರಕ್ಷಣಾ ಕಾಯಿದೆ 1980ರಡಿ ಅರಣ್ಯ ಭೂಮಿಯನ್ನು ಅರಣ್ಯೇತರ ಬಳಕೆಗೆ ಪರಿಹಾರ ಭೂಮಿ ಒದಗಿಸುವುದರೊಂದಿಗೆ ಎನ್​​ಪಿವಿ ಮೊತ್ತ ಪಾವತಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ. ಹೀಗೆ ಅನುಮತಿ ನೀಡಿದರೂ ಸಹ ಅರಣ್ಯ ಭೂಮಿಯನ್ನು ಗುತ್ತಿಗೆ ಮಾತ್ರ ನೀಡಿ, ಗುತ್ತಿಗೆ ಅವಧಿ ಮುಗಿದ ಬಳಿಕ ಅರಣ್ಯ ಇಲಾಖೆಗೆ ಮರಳಿ ಪಡೆಯಬೇಕಾಗುತ್ತದೆ ಎಂದು ನೋಟಿಸ್​​ನಲ್ಲಿ ಪ್ರಸ್ತಾಪಿಸಲಾಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಸಿನಿಮಾದಿಂದ ಮರ ಕಡಿದ ಆರೋಪ; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಎಚ್​​ಎಂಟಿ

ಆದರೆ, ಎಚ್​ಎಂಟಿ ತನ್ನ ವಶದಲ್ಲಿರುವ ಅರಣ್ಯ ಭೂಮಿಯನ್ನು ವಿವಿಧ ಸರ್ಕಾರಿ, ಖಾಸಗಿ ಸಂಸ್ಥೆ, ವ್ಯಕ್ತಿಗಳಿಗೆ ಭಾಗಶಃ ಮಾರಾಟ ಮಾಡಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರ ರೂಪಿಸಿರುವ ಪರಿಸರ ಮತ್ತು ಅರಣ್ಯ ಸಂರಕ್ಷಣೆ ಹಾಗೂ ಕಂದಾಯ ಕಾಯಿದೆ, ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆ ಎಂದು ಸಚಿವ ಖಂಡ್ರೆ ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!