AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ: ಶೀಘ್ರದಲ್ಲೇ ಶುರುವಾಗಲಿದೆ ಹೊಗೇನಕಲ್ ಸಫಾರಿ

ಕರ್ನಾಟಕ ಸರ್ಕಾರವು ವೀರಪ್ಪನ್‌ನ ಹಿಂದಿನ ಅಡಗುದಾಣ ಪ್ರದೇಶಗಳೂ ಒಳಗೊಂಡಂತೆ ಹೊಗೇನಕಲ್‌ನಲ್ಲಿ ಸಫಾರಿಯನ್ನು ಆರಂಭಿಸಲು ಯೋಜಿಸಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಸ್ಥಳೀಯ ಆರ್ಥಿಕತೆಗೆ ಪುಷ್ಟಿ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. 22 ಕಿಲೋಮೀಟರ್ ವ್ಯಾಪ್ತಿಯ ಈ ಸಫಾರಿಯು ಕಾವೇರಿ ವನ್ಯಜೀವಿ ಅಭಯಾರಣ್ಯವನ್ನು ಒಳಗೊಳ್ಳಲಿದೆ ಮತ್ತು ವಿವಿಧ ವನ್ಯಜೀವಿಗಳನ್ನು ವೀಕ್ಷಿಸಲು ಅವಕಾಶ ನೀಡಲಿದೆ.

ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ: ಶೀಘ್ರದಲ್ಲೇ ಶುರುವಾಗಲಿದೆ ಹೊಗೇನಕಲ್ ಸಫಾರಿ
ಸಫಾರಿ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Jan 06, 2025 | 12:13 PM

Share

ಬೆಂಗಳೂರು, ಜನವರಿ 6: ಕಾಡುಗಳ್ಳ ವೀರಪ್ಪನ್ ಪೊಲೀಸರ ಗುಂಡಿಗೆ ಬಲಿಯಾಗಿ ಎರಡು ದಶಕಗಳೇ ಸಂದಿವೆ. ಆದರೂ ಆತನ ಹೆಸರು ಇಂದಿಗೂ ರಾಜ್ಯದಲ್ಲಿ ಪ್ರಚಲಿತದಲ್ಲಿದೆ. ವರನಟ ಡಾ. ರಾಜ್​ಕುಮಾರ್ ಅಪಹರಣದಿಂದ ಕರ್ನಾಟಕದಲ್ಲಿ ಮನೆಮಾತಾಗಿದ್ದ ವೀರಪ್ಪ ಓಡಾಡಿದ್ದ ಕಾಡಿನಲ್ಲಿ ಸಫಾರಿ ಆರಂಭಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಶೀಘ್ರದಲ್ಲೇ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಹೊಗೇನಕಲ್ ಜಲಪಾತದಿಂದ ಸಫಾರಿ ಆರಂಭಿಸಲು ಕರ್ನಾಟಕ ಅರಣ್ಯ ಇಲಾಖೆ ಉತ್ಸುಕವಾಗಿದೆ. ವೀರಪ್ಪನ್‌ನ ಹುಟ್ಟೂರಾದ ಗೋಪಿನಾಥನ್‌ನಿಂದ ಆರಂಭಿಸಿರುವ ಸಫಾರಿಗೆ ಪ್ರವಾಸಿಗರಿಂದ ಹೆಚ್ಚಿನ ಬೇಡಿಕೆ ಇರುವುದನ್ನು ಗಮನಿಸಿ ಕರ್ನಾಟಕ ಅರಣ್ಯ ಇಲಾಖೆ ಸಹ ಹೊಗೇನಕಲ್​​ನಲ್ಲಿ ಸಫಾರಿ ಆರಂಭಿಸಲು ಮುಂದಾಗಿದೆ ಎನ್ನಲಾಗಿದೆ.

ಉದ್ದೇಶಿತ ಸಫಾರಿಯು 22 ಕಿಲೋಮೀಟರ್ ಅರಣ್ಯ ವ್ಯಾಪ್ತಿಯನ್ನು ಒಳಗೊಂಡಿರಲಿದೆ. ವಿಶೇಷವಾಗಿ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ವೀರಪ್ಪನ್ ಅಡಗುತಾಣಗಳನ್ನು ಒಳಗೊಂಡಿರಲಿವೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈ ಪ್ರದೇಶವು ಆನೆಗಳು, ಜಿಂಕೆಗಳು, ಕರಡಿಗಳು ಮತ್ತು ಇತರ ವನ್ಯಜೀವಿಗಳ ಹೆಚ್ಚಿನ ಇರುವಿಕೆಯನ್ನು ಹೊಂದಿವೆ ಎಂದು ವರದಿ ಉಲ್ಲೇಖಿಸಿದೆ.

ಹೊಗೇನಕಲ್​ನಿಂದಲೇ ಸಫಾರಿ ಯಾಕೆ?

ಕಾವೇರಿ ವನ್ಯಜೀವಿ ಅಭಯಾರಣ್ಯದ ಅಧಿಕಾರಿಗಳು ಹೊಗೇನಕಲ್​ನಿಂದಲೇ ಸಫಾರಿಯನ್ನು ಪ್ರಾರಂಭಿಸಲು ಬಯಸಿದ್ದಾರೆ. ಯಾಕೆಂದರೆ ಇದು ಗಡಿಯ ಎರಡೂ ಬದಿಗಳಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ವಿಶೇಷವಾಗಿ ಕಾವೇರಿ ನದಿಯಲ್ಲಿ ದೋಣಿ ವಿಹಾರ ಮತ್ತು ಮೀನಿನ ಸಾಂಪ್ರದಾಯಿಕ ಭಕ್ಷ್ಯಗಳಿಂದ ಪ್ರಸಿದ್ಧವಾಗಿದೆ. ಹೀಗಾಗಿ ಈ ಭಾಗದಲ್ಲಿ ಆರಂಭಿಸಿದರೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಬಹುದು ಎಂಬುದು ಅಧಿಕಾರಿಗಳ ಲೆಕ್ಕಾಚಾರವಾಗಿದೆ.

ನಾಲ್ಕು ಟ್ರಿಪ್ ಹೊಗೇನಕಲ್ ಸಫಾರಿಗೆ ಚಿಂತನೆ

ಅರಣ್ಯ ಇಲಾಖೆಯು ಬೆಳಿಗ್ಗೆ ಎರಡು ಮತ್ತು ಸಂಜೆ ಎರಡರಂತೆ ನಾಲ್ಕು ಟ್ರಿಪ್‌ಗಳ ಸಫಾರಿಗೆ ಚಿಂತನೆ ನಡೆಸಿದೆ. 25 ಮಂದಿಯನ್ನು ಸಾಗಿಸುವ ಸಾಮರ್ಥ್ಯವುಳ್ಳ 2 ವಾಹನಗಳನ್ನು ಬಳಸಿಕೊಳ್ಳಲು ಉದ್ದೇಶಿಸಿದೆ. ದಟ್ಟಾರಣ್ಯದಲ್ಲಿ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆದೊಯ್ಯಬಲ್ಲ ಹೊಸ ಸಫಾರಿ ವಾಹನಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಆರ್ಡರ್ ಮಾಡಿದ್ದಾರೆ ಎಂದೂ ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಚಾಮರಾಜನಗರ: ಬಿಆರ್​ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ 2 ಹೊಸ ಸಫಾರಿ ಕೇಂದ್ರ ತೆರೆಯಲು ಚಿಂತನೆ

ಹೊಗೇನಕಲ್ ಜಲಪಾತಕ್ಕೆ 2024 ರ ಜನವರಿಯಲ್ಲಿ 3500 ಪ್ರವಾಸಿಗರು ಭೇಟಿ ನೀಡಿದ್ದರೆ, ಮಾರ್ಚ್‌ನಲ್ಲಿ 9,381 ಪ್ರವಾಸಿಗರು ಭೇಟಿ ನೀಡಿದ್ದರು. ಸುಮಾರು 1,400 ವಿದೇಶಿ ಪ್ರವಾಸಿಗರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಈ ಜಾಗದಲ್ಲಿ ಸಫಾರಿಯನ್ನೂ ಆರಂಭಿಸುವುದರಿಂದ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ. ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್