AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

Namma Metro Advertisement| ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು ಎಂದು ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ನಡೆಯನ್ನು ಕಟುಪದಗಳಲ್ಲಿ ಟೀಕಿಸಿದ್ದಾರೆ.

ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ
ದಿನಪತ್ರಿಕೆಗಳಲ್ಲಿ ನಗುಮುಖದ ಜಾಹೀರಾತು! ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಕುಮಾರಸ್ವಾಮಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 22, 2021 | 12:57 PM

Share

ಬೆಂಗಳೂರು: ರಾಜ್ಯದ ಜನ ಬೆಡ್ ಇಲ್ಲ, ಆಕ್ಸಿಜನ್ ಇಲ್ಲ ಅಂತಾ ಒದ್ದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರ ಪುಟಗಟ್ಟಲೆ ಕೋಟ್ಯಾಂತರ ರೂಪಾಯಿ ಹಣ ಖರ್ಚು ಮಾಡಿ ಜಾಹೀರಾತು ನೀಡಿದೆ. ಇದು ಸರಿಯಲ್ಲ. ಆಡಳಿತಾರೂಢ ಬಿಜೆಪಿ ಸರ್ಕಾರ ಮೂರ್ಖ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಕೇಂದ್ರ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ 14 ಸಾವಿರ ಕೋಟಿ ರೂಪಾಯಿ ಬಿಡುಗಡೆ ಹಿನ್ನೆಲೆ ದಿನಪತ್ರಿಕೆಗಳಲ್ಲಿ ಇಂದು ರಾಜ್ಯ ಬಿಜೆಪಿ ಸರ್ಕಾರ ದೊಡ್ಡ ದೊಡ್ಡ ಜಾಹೀರಾತು ಹಾಕಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದೆ. ಕೊರೊನಾ ಸಮಯದಲ್ಲೂ ಜಾಹೀರಾತಿಗೆ ಹಣ ಖರ್ಚು ಮಾಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ; ನಾವು ಸಾವಿನ ಮನೆಯಲ್ಲಿ ಇದ್ದೇವೆ. ಮೆಟ್ರೋ ಹಣ ಏನು ಕೇಂದ್ರ ಸರ್ಕಾರ ಭಿಕ್ಷೆ ನೀಡೋದಲ್ಲ ಎಂದು ರಾಜ್ಯ ಸರಕಾರವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

karnataka former chief minister hd kumaraswamy on bjp government on namma metro advertisement in dailies

ಈ ಜಾಹೀರಾತು ವಿರುದ್ಧ ಕೇಂದ್ರ-ರಾಜ್ಯ ಸರ್ಕಾರಕ್ಕೆ ಸೂಕ್ಷ್ಮತೆ ಇಲ್ಲವೇ ಎಂದು ಝಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಸೂತಕದ ಸಂದರ್ಭದಲ್ಲಿ ಜನರ ನೋವನ್ನು ಗೇಲಿ ಮಾಡಿದೆ ಬಿಜೆಪಿ ಸರ್ಕಾರ; ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ: ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಆಕ್ಸಿಜನ್ ಸಿಗದೆ ಜನ ಒದ್ದಾಡುತ್ತಿರುವ ವಾತಾವರಣ ನಿರ್ಮಾಣ ಆಗಿರುವ ಈ ಸನ್ನಿವೇಶದಲ್ಲಿ ಕೋಟ್ಯಾಂತರ ರೂಪಾಯಿ ಜನರ ದುಡ್ಡನ್ನು ಈ ರೀತಿ ಅನಗತ್ಯವಾಗಿ ಜಾಹೀರಾತಿಗೆ ಪೋಲು ಮಾಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡನೀಯ.

ಕೊರೊನಾ ವೈರಸ್‌ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!

ಬೆಂಗಳೂರಿನ ನಮ್ಮ ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.

ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ.. ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು.

ಸರ್ಕಾರ ಕೋವಿಡ್‌ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.

ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್​ ಡಿ ಕುಮಾರಸ್ವಾಮಿ ಬಿಜೆಪಿ ಸರ್ಕಾರದ ನಡೆಯನ್ನು ಕಟುಪದಗಳಲ್ಲಿ ಟೀಕಿಸಿದ್ದಾರೆ.

(hd kumaraswamy on bjp government on namma metro advertisement in dailies)

Published On - 12:39 pm, Thu, 22 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್