AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ 27 ಪದಕ ಪಡೆದು ಮೊದಲ ಸ್ಥಾನ ಅಲಂಕರಿಸಿದ ಕರ್ನಾಟಕ

India Skills: ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕವು 27 ಪದಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದೆ. ಯಾವೆಲ್ಲಾ ಸ್ಪರ್ಧೆಗಳಲ್ಲಿ ರಾಜ್ಯಕ್ಕೆ ಪದಕಗಳು ಲಭಿಸಿವೆ ಎಂಬ ಮಾಹಿತಿ ಇಲ್ಲಿದೆ.

ದಕ್ಷಿಣ ಭಾರತ ಮಟ್ಟದ ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ 27 ಪದಕ ಪಡೆದು ಮೊದಲ ಸ್ಥಾನ ಅಲಂಕರಿಸಿದ ಕರ್ನಾಟಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 05, 2021 | 7:15 AM

Share

ಪ್ರಾದೇಶಿಕ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ 27 ಪದಕಗಳೊಂದಿಗೆ ದಕ್ಷಿಣ ಭಾರತ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ವಿಶಾಖಪಟ್ಟಣದಲ್ಲಿ ನಡೆದ ಕೌಶಲ್ಯ ಸ್ಪರ್ಧೆಯಲ್ಲಿ ರಾಜ್ಯವು 14 ಚಿನ್ನ, 13 ಬೆಳ್ಳಿ ಪದಕಗಳೊಂದಿಗೆ ಪ್ರಥಮ ಸ್ಥಾನ ಅಲಂಕರಿಸಿತು. ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಒಡಿಶಾ ರಾಜ್ಯದ ತಂಡಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಕರ್ನಾಟಕ ತಂಡದ 17 ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ 10 ಸ್ಪರ್ಧಿಗಳಿಗೆ ಸರ್ಕಾರಿ ಉಪಕರಣ ಕಾರ್ಯಾಗಾರದಿಂದ ತರಬೇತಿ ನೀಡಲಾಗಿತ್ತು. ರಾಜ್ಯದ 69 ಸ್ಪರ್ಧಿಗಳು 35 ಬಗೆಯ ಸ್ಪರ್ಧೆಗಳಲ್ಲಿ ಭಾಗಿವಹಿಸಿದ್ದರು. 35 ಸ್ಪರ್ಧೆಗಳಲ್ಲಿ ರಾಜ್ಯವು 27ರಲ್ಲಿ ಪದಕ ಜಯಿಸಿದೆ.

ರಾಜ್ಯಕ್ಕೆ ಮೆಕಾಟ್ರಾನಿಕ್ಸ್, ಮುದ್ರಣ ತಂತ್ರಜ್ಞಾನ, ಆಭರಣ ತಯಾರಿಕೆ, ಕೈಗಾರಿಕಾ ನಿಯಂತ್ರಣ, ಕಾರ್ ಪೇಂಟಿಂಗ್, ಅಡುಗೆ ತಯಾರಿಕೆ, ಪ್ಲಾಸ್ಟಿಕ್ ಡೈ ಎಂಜಿನಿಯರಿಂಗ್, ಬೇಕರಿ ಪದಾರ್ಥಗಳ ತಯಾರಿಕೆ ಮತ್ತು ಕ್ಲೌಡ್ ಕಂಪ್ಯೂಟಿಂಗ್ ವಿಭಾಗಗಳಲ್ಲಿ ಚಿನ್ನದ ಪದಕ ಲಭಿಸಿದೆ. ಎಂ-ಕ್ಯಾಡ್, ಕೇಶವಿನ್ಯಾಸ, ಗ್ರಾಫಿಕ್ ವಿನ್ಯಾಸ, ವಿಷುಯಲ್ ಮರ್ಕಂಡೈಸಿಂಗ್, 3ಡಿ ಡಿಜಿಟಲ್ ಗೇಮ್ ಆರ್ಟ್ ಮತ್ತು ವಾಟರ್ ಟೆಕ್ನಾಲಜಿ ವಿಭಾಗಗಳಲ್ಲಿ ರಜತ ಪದಕ ಲಭ್ಯವಾಗಿದೆ.

ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು(NSDC) ಈ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದರಲ್ಲಿನ ‘ಇಂಡಿಯಾ ಸ್ಕಿಲ್ಸ್’ ಸ್ಪರ್ಧೆಯು ದೇಶದ ಅತ್ಯಂತ ದೊಡ್ಡ ಕೌಶಲ್ಯ ಸ್ಪರ್ಧೆಯಾಗಿದೆ. ಅದರಲ್ಲಿ ಭಾರತದ ಐದು ವಲಯಗಳಲ್ಲಿ ಸ್ಪರ್ಧೆ ನಡೆದಿದ್ದು, ದಕ್ಷಿಣ ಭಾರತದ ವಲಯದಲ್ಲಿ ಕರ್ನಾಟಕವು ಮೊದಲ ಸ್ಥಾನ ಪಡೆದಿದೆ. ಸ್ಪರ್ಧೆಯಲ್ಲಿ 5 ರಾಜ್ಯಗಳ 400ಕ್ಕೂ ಅಧಿಕ ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ

ಒಮಿಕ್ರಾನ್​ ಮಾರಣಾಂತಿಕವಲ್ಲ, ಆದರೆ ಭಾರತೀಯರು ಕೊರೊನಾ 3ನೇ ಅಲೆಗೆ ಸಿದ್ಧರಾಗಬೇಕು: ತಜ್ಞರ ವರದಿ

Follow Us
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ವ್ಯಾನ್​ಗೆ ಗುದ್ದಿದ ಸ್ಲೀಪರ್ ಬಸ್, 6 ಮಂದಿ ಸಾವು
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ಹೋಳಿ ಆಚರಣೆ ವೇಳೆ ಹೊತ್ತಿಸಿದ್ದ ಬೆಂಕಿ ಮೇಲೆ ನಡೆದ ಕಲಿಯುಗದ ಪ್ರಹ್ಲಾದ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ