AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕಿತರ ಮರಣ ಪ್ರಮಾಣ; ಅಂತ್ಯಸಂಸ್ಕಾರಕ್ಕೆ 13 ಚಿತಾಗಾರಗಳಿಗೆ ಅನುಮತಿ ನೀಡಿದ ಸರ್ಕಾರ

ಈ ಮೊದಲು ಬೆಂಗಳೂರು ನಗರದ 7 ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ದಿನ ಕಳೆದಂತೆ ಕೊರೊನಾ ಸೋಂಕಿತರು ಅಧಿಕ ಸಂಖ್ಯೆಯಲ್ಲಿ ಮೃತಪಡುತ್ತಿರುವ ಹಿನ್ನೆಲೆ, ಬೆಂಗಳೂರಿನ 13 ಚಿತಾಗಾರಗಳಲ್ಲೂ ಅಂತ್ಯಸಂಸ್ಕಾರಕ್ಕೆ ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕಿತರ ಮರಣ ಪ್ರಮಾಣ; ಅಂತ್ಯಸಂಸ್ಕಾರಕ್ಕೆ 13 ಚಿತಾಗಾರಗಳಿಗೆ ಅನುಮತಿ ನೀಡಿದ ಸರ್ಕಾರ
ಸಂಗ್ರಹ ಚಿತ್ರ
Follow us
Skanda
| Updated By: preethi shettigar

Updated on: Apr 21, 2021 | 11:43 AM

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು ಸೋಂಕಿತರ ಸಂಖ್ಯೆ ವೇಗವಾಗಿ ಏರುತ್ತಿದೆ. ಒಂದೆಡೆ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆಯೇ ಇಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇನ್ನೊಂದೆಡೆ ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಚಿತಾಗಾರಗಳಲ್ಲೂ ಒದ್ದಾಡಬೇಕಾದ ದುಸ್ಥಿತಿ ಉದ್ಭವಿಸಿದೆ. ಕಳೆದೆರೆಡು ದಿನಗಳಿಂದಲೂ ಬೆಂಗಳೂರಿನ ಚಿತಾಗಾರಗಳಲ್ಲಿ ಬಿಡುವಿಲ್ಲದೇ ಶವ ಸಂಸ್ಕಾರ ನಡೆಸಲಾಗುತ್ತಿದ್ದು, ಕೆಲ ಸ್ಮಶಾನಗಳಲ್ಲಿ ಕಾದು ಕಾದು ಸುಸ್ತಾದ ಮೃತರ ಸಂಬಂಧಿಕರು ಬೇರೆಡೆಗೆ ಶವ ಸಾಗಿಸಿದ ದಾರುಣ ಘಟನೆಗಳು ಸಹ ವರದಿಯಾಗಿವೆ. ಈ ಸಂಬಂಧ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ 13 ಚಿತಾಗಾರಗಳಲ್ಲಿ ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಅವಕಾಶ ಕಲ್ಪಿಸಿದ್ದು, ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಸದರಿ ವಿಚಾರದ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಮೊದಲು ಬೆಂಗಳೂರು ನಗರದ 7 ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ದಿನ ಕಳೆದಂತೆ ಕೊರೊನಾ ಸೋಂಕಿತರು ಅಧಿಕ ಸಂಖ್ಯೆಯಲ್ಲಿ ಮೃತಪಡುತ್ತಿರುವ ಹಿನ್ನೆಲೆ, ಬೆಂಗಳೂರಿನ 13 ಚಿತಾಗಾರಗಳಲ್ಲೂ ಅಂತ್ಯಸಂಸ್ಕಾರಕ್ಕೆ ಅನುಮತಿ ನೀಡಲಾಗಿದೆ. ಪ್ರತಿ ದಿನ 90 ಕ್ಕೂ ಹೆಚ್ಚು ಸೋಂಕಿತರು ಬೆಂಗಳೂರಿನಲ್ಲೇ ಮೃತಪಡುತ್ತಿದ್ದಾರೆ. ಒಂದು ಮೃತದೇಹದ ಅಂತ್ಯಸಂಸ್ಕಾರಕ್ಕೆ ಕನಿಷ್ಠ ಒಂದೂವರೆ ಗಂಟೆ ಕಾಲಾವಕಾಶ ಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಚಿತಾಗಾರಗಳಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಬೆಂಗಳೂರಿನಲ್ಲಿ ಕೇವಲ 7 ಚಿತಾಗಾರದಲ್ಲಿ ಮಾತ್ರ ಅಂತ್ಯಸಂಸ್ಕಾರಕ್ಕೆ ಅನುಮತಿ ಕೊಟ್ಟಿದ್ದೆವು. ಆ ಸಂಖ್ಯೆಯನ್ನು ಈಗ 13ಕ್ಕೆ ಏರಿಸುವಂತೆ ಬಿಬಿಎಂಪಿ ಕಮಿಷನರ್​ಗೆ ತಿಳಿಸಿದ್ದೇವೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಸಾವಿನ ಪ್ರಮಾಣವೂ ಜಾಸ್ತಿ ಆಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ಚೈನ್ ಲಿಂಕ್ ಬ್ರೇಕ್​ ಮಾಡಲು 14 ದಿನ ಬೇಕಾಗಿದೆ, ಅದಕ್ಕೇ ಈ ಬಿಗಿ ಕ್ರಮ; ಡಾ. ಕೆ.ಸುಧಾಕರ್ 

ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​