AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?

ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕಕ್ಕೆ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?
ವಿಧಾನಸೌಧ
ವಿವೇಕ ಬಿರಾದಾರ
| Edited By: |

Updated on:Nov 20, 2023 | 10:56 AM

Share

ಬೆಂಗಳೂರು ನ.20: ಸುಳ್ಳು ಸುದ್ದಿ ತಡೆಗಟ್ಟಲು ರಾಜ್ಯ ಸರ್ಕಾರ (Karnataka Government) ದಿಟ್ಟ ಹೆಜ್ಜೆ ಇಟ್ಟಿದ್ದು, ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ನಿರ್ಧರಿಸಿದೆ. ಈ ಘಟಕಕ್ಕೆ ಕಂಪನಿಗಳ ನೋಂದಣಿಗಾಗಿ ಸರ್ಕಾರ ಟೆಂಡರ್​ ಕರೆದಿದೆ. ಇದೀಗ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಐದು ಕಂಪನಿಗಳೇ ಅಂತಿಮವಾಗುವ ಸಾಧ್ಯತೆ ಇದೆ. ಈ ಕಂಪನಿಗಳು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಶ್ಲೇಷಣೆ ಮತ್ತು ನಕಲಿ ಸುದ್ದಿಗಳನ್ನು ತಡೆಯುವ ಮತ್ತು ಫ್ಯಾಕ್ಟ್​​​ ಚೆಕ್​​ನಲ್ಲಿ ಸಾಕಷ್ಟು ಅನುಭವ ಹೊಂದಿವೆ ಎಂದು ಹೇಳಿದರು.

ಈ ಏಳು ಕಂಪನಿಗಳು ಮಾತ್ರ ಏಕೆ ನೋಂದಾಯಿಸಿಕೊಂಡಿವೆ ಎಂಬ ಪ್ರಶ್ನೆಗೆ, ಇದಕ್ಕೆ ನೋಂದಾಯಿಸಿಕೊಳ್ಳುವ ಕಂಪನಿಗಳು ಭಾರತೀಯ ಮೂಲದವುಗಳಾಗಿರಬೇಕು. ಆಗಸ್ಟ್ 31, 2023 ರಂತೆ ಫ್ಯಾಕ್ಟ್‌ಚೆಕಿಂಗ್ ಸೇವೆಗಳು ಅಥವಾ ಅಂತಹುದೇ ಚಟುವಟಿಕೆಗಳಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು. ವಿಶ್ವಾಸಾರ್ಹ ಕೆಲಸ ಮಾಡಿದ ಕಂಪನಿಯನ್ನು ಸರ್ಕಾರ ಗುರುತಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಖಾಕಿ ಹೊಸ ಪ್ಲಾನ್, ಸಿದ್ಧವಾಗಿದೆ ಸೋಷಿಯಲ್ ಮೀಡಿಯಾ ವಿಂಗ್

ಉಳಿದ ಎರಡು ಕಂಪನಿಗಳು ಹಿಂದೆ ವಿಶ್ವಾಸಾರ್ಹ ಕೆಲಸ ಮಾಡಿದ ಮತ್ತು ಸರ್ಕಾರದೊಂದಿಗೆ ಪಾಲುದಾರಿಕೆಗೆ ಸಿದ್ಧವಾಗಿರುವ ವ್ಯಕ್ತಿಗಳನ್ನು ಒಳಗೊಂಡಿದೆ. ನಾವು ಅವುಗಳನ್ನೂ ಕೂಡ ಪಟ್ಟಿಯೊಳಗೆ ಸೇರಿಸಿಕೊಳ್ಳಲು ಅವಕಾಶವಿದಯೇ ಎಂದು ಪರಿಶೀಲಿಸುತ್ತೇವೆ ಎಂದರು.

ಅಂತಿಮವಾಗಿ ಸರ್ಕಾರದ ಶಾರ್ಟ್​​ಲಿಸ್ಟ್​​ನಲ್ಲಿರುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಮೂರು ಪ್ರಮುಖ ಕ್ಷೇತ್ರಗಳಾಗಿ ವಿಂಗಡಿಸಲಾಗುತ್ತದೆ, ಇದರಲ್ಲಿ ಒಂದು ಸತ್ಯ ಪರಿಶೀಲನಾ ತಂಡವಿದೆ, ಅದು ತಪ್ಪು ಮಾಹಿತಿಯನ್ನು ಪತ್ತೆ ಮಾಡುತ್ತದೆ ಮತ್ತು ಪರಿಹರಿಸುತ್ತದೆ. ಅನಾಲಿಟಿಕ್ಸ್ ಸ್ಕ್ವಾಡ್, ಇದು ತಪ್ಪು ಮಾಹಿತಿಯ ಪರಿಸರ ವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಾಮರ್ಥ್ಯ ಅಭಿವೃದ್ಧಿ ತಂಡ, ಇದು ತಪ್ಪು ಮಾಹಿತಿ ಪರಿಸರ ವ್ಯವಸ್ಥೆಯ ಉಪಸ್ಥಿತಿ ಮತ್ತು ಪರಿಣಾಮಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನೆಡೆಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Mon, 20 November 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ