Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?

ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕಕ್ಕೆ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Fact Check Unit: ಸುಳ್ಳು ಸುದ್ದಿ ತಡೆಗಟ್ಟಲು ಸರ್ಕಾರದಿಂದ ಫ್ಯಾಕ್ಟ್​ ಚೆಕ್​ ಯುನಿಟ್ ಆರಂಭ​; 5 ಕಂಪನಿಗಳಿಗೆ ಇದರ ಜವಾಬ್ದಾರಿ?
ವಿಧಾನಸೌಧ
Follow us
| Edited By: TV9 Digital Desk

Updated on:Nov 20, 2023 | 10:56 AM

ಬೆಂಗಳೂರು ನ.20: ಸುಳ್ಳು ಸುದ್ದಿ ತಡೆಗಟ್ಟಲು ರಾಜ್ಯ ಸರ್ಕಾರ (Karnataka Government) ದಿಟ್ಟ ಹೆಜ್ಜೆ ಇಟ್ಟಿದ್ದು, ಮಾಹಿತಿ ಅಸ್ವಸ್ಥತೆ ನಿಭಾಯಿಸುವ ಘಟಕವನ್ನು (Information Disorder Tackling Unit) ಸ್ಥಾಪಿಸಲು ನಿರ್ಧರಿಸಿದೆ. ಈ ಘಟಕಕ್ಕೆ ಕಂಪನಿಗಳ ನೋಂದಣಿಗಾಗಿ ಸರ್ಕಾರ ಟೆಂಡರ್​ ಕರೆದಿದೆ. ಇದೀಗ ಏಳು ಕಂಪನಿಗಳು ನೊಂದಾಯಿಸಿಕೊಂಡಿದ್ದು, ಐದು ಕಂಪನಿಗಳನ್ನು ಶಾರ್ಟ್​​ಲಿಸ್ಟ್​ ಮಾಡಲಾಗಿದೆ. ಇಲಾಖೆಯು ಕಂಪನಿಗಳ ಹಿನ್ನೆಲೆ ಪರಿಶೀಲನೆ ನಡೆಸುತ್ತಿದ್ದು, ನಂತರ ಕಂಪನಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಈ ಐದು ಕಂಪನಿಗಳೇ ಅಂತಿಮವಾಗುವ ಸಾಧ್ಯತೆ ಇದೆ. ಈ ಕಂಪನಿಗಳು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಶ್ಲೇಷಣೆ ಮತ್ತು ನಕಲಿ ಸುದ್ದಿಗಳನ್ನು ತಡೆಯುವ ಮತ್ತು ಫ್ಯಾಕ್ಟ್​​​ ಚೆಕ್​​ನಲ್ಲಿ ಸಾಕಷ್ಟು ಅನುಭವ ಹೊಂದಿವೆ ಎಂದು ಹೇಳಿದರು.

ಈ ಏಳು ಕಂಪನಿಗಳು ಮಾತ್ರ ಏಕೆ ನೋಂದಾಯಿಸಿಕೊಂಡಿವೆ ಎಂಬ ಪ್ರಶ್ನೆಗೆ, ಇದಕ್ಕೆ ನೋಂದಾಯಿಸಿಕೊಳ್ಳುವ ಕಂಪನಿಗಳು ಭಾರತೀಯ ಮೂಲದವುಗಳಾಗಿರಬೇಕು. ಆಗಸ್ಟ್ 31, 2023 ರಂತೆ ಫ್ಯಾಕ್ಟ್‌ಚೆಕಿಂಗ್ ಸೇವೆಗಳು ಅಥವಾ ಅಂತಹುದೇ ಚಟುವಟಿಕೆಗಳಲ್ಲಿ ಕನಿಷ್ಠ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು. ವಿಶ್ವಾಸಾರ್ಹ ಕೆಲಸ ಮಾಡಿದ ಕಂಪನಿಯನ್ನು ಸರ್ಕಾರ ಗುರುತಿಸಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಖಾಕಿ ಹೊಸ ಪ್ಲಾನ್, ಸಿದ್ಧವಾಗಿದೆ ಸೋಷಿಯಲ್ ಮೀಡಿಯಾ ವಿಂಗ್

ಉಳಿದ ಎರಡು ಕಂಪನಿಗಳು ಹಿಂದೆ ವಿಶ್ವಾಸಾರ್ಹ ಕೆಲಸ ಮಾಡಿದ ಮತ್ತು ಸರ್ಕಾರದೊಂದಿಗೆ ಪಾಲುದಾರಿಕೆಗೆ ಸಿದ್ಧವಾಗಿರುವ ವ್ಯಕ್ತಿಗಳನ್ನು ಒಳಗೊಂಡಿದೆ. ನಾವು ಅವುಗಳನ್ನೂ ಕೂಡ ಪಟ್ಟಿಯೊಳಗೆ ಸೇರಿಸಿಕೊಳ್ಳಲು ಅವಕಾಶವಿದಯೇ ಎಂದು ಪರಿಶೀಲಿಸುತ್ತೇವೆ ಎಂದರು.

ಅಂತಿಮವಾಗಿ ಸರ್ಕಾರದ ಶಾರ್ಟ್​​ಲಿಸ್ಟ್​​ನಲ್ಲಿರುವ ಕಂಪನಿಗಳು ಮತ್ತು ವ್ಯಕ್ತಿಗಳನ್ನು ಮೂರು ಪ್ರಮುಖ ಕ್ಷೇತ್ರಗಳಾಗಿ ವಿಂಗಡಿಸಲಾಗುತ್ತದೆ, ಇದರಲ್ಲಿ ಒಂದು ಸತ್ಯ ಪರಿಶೀಲನಾ ತಂಡವಿದೆ, ಅದು ತಪ್ಪು ಮಾಹಿತಿಯನ್ನು ಪತ್ತೆ ಮಾಡುತ್ತದೆ ಮತ್ತು ಪರಿಹರಿಸುತ್ತದೆ. ಅನಾಲಿಟಿಕ್ಸ್ ಸ್ಕ್ವಾಡ್, ಇದು ತಪ್ಪು ಮಾಹಿತಿಯ ಪರಿಸರ ವ್ಯವಸ್ಥೆಯನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡುತ್ತದೆ. ಸಾಮರ್ಥ್ಯ ಅಭಿವೃದ್ಧಿ ತಂಡ, ಇದು ತಪ್ಪು ಮಾಹಿತಿ ಪರಿಸರ ವ್ಯವಸ್ಥೆಯ ಉಪಸ್ಥಿತಿ ಮತ್ತು ಪರಿಣಾಮಗಳ ಬಗ್ಗೆ ಜನರಿಗೆ ಶಿಕ್ಷಣ ನೀಡಲು ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನೆಡೆಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Mon, 20 November 23

ತಾಜಾ ಸುದ್ದಿ
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಸಿಎಂಗೆ ಪ್ರಶ್ನೆ ಕೇಳುವ ಮುನ್ನ ಅಶೋಕ ಹೋಮ್​ವರ್ಕ್ ಮಾಡಿರಬೇಕು: ಲಕ್ಷ್ಮಣ್
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ಕೇಂದ್ರ ಸರ್ಕಾರದಿಂದ ಬರ ಪರಿಹಾರ ನಿಧಿ ಬಿಡುಗಡೆ ಆಗಿಲ್ಲ: ಸಿದ್ದರಾಮಯ್ಯ
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ರಾಕ್ಷಸರ ರೀತಿ ಮೈ ಮೇಲೆ ಬಿದ್ದ ಬಿಗ್​ ಬಾಸ್​ ಸ್ಪರ್ಧಿಗಳು: ಸಿರಿ ಕಣ್ಣೀರು
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ವಕೀಲರು ಮಾಹಿತಿ ನೀಡದ ಹೊರತು ಯಾವುದೇ ಪ್ರತಿಕ್ರಿಯೆ ನೀಡೋದಿಲ್ಲ: ಶಿವಕುಮಾರ್​
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು