AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balija Community: ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ

ಬಲಿಜ ಜನಾಂಗದ ಹಿತದೃಷ್ಟಿಯಿಂದ ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

Balija Community: ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ
ವಿಧಾನಸೌಧ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on:Mar 10, 2023 | 10:54 PM

Share

ಬೆಂಗಳೂರು: ಬಲಿಜ ಜನಾಂಗ(Balija community) ಹಿತದೃಷ್ಟಿಯಿಂದ ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಆರೋಗ್ಯ ಸಚಿವ ಡಾ. ಕೆ ಸುಧಾಕರ್ (Dr K Sudhakar) ಚಿಕ್ಕಬಳ್ಳಾಪುರದಲ್ಲಿ (Chikkaballapur) ಬಲಿಜ ಅಭಿವೃದ್ಧಿ ನಿಗಮ ಸ್ಥಾಪನೆಯ ಭರವಸೆ ನೀಡಿದ್ದರು. ಜತೆಗೆ, ವಾರದೊಳಗೆ ಬಲಿಜ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು ಎಂದು ಹೇಳಿದ್ದರು. ಇದೀಗ ಅವರ ಭರವಸೆಯಂತೆಯೇ ಸರ್ಕಾರ ಕ್ರಮ ಕೈಗೊಂಡಿದೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದ್ದು, ಬಲಿಜ ಜನಾಂಗಕ್ಕೆ 2ಎ ಮೀಸಲಾತಿ ನೀಡುತ್ತೇವೆ ಎಂದೂ ಸುಧಾಕರ್ ಭರವಸೆ ನೀಡಿದ್ದರು.

ಚಿಕ್ಕಬಳ್ಳಾಪುರದಲ್ಲಿ ಯೋಗಿ ನಾರೇಯಣ ಯತೀಂದ್ರರ 297ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸುಧಾಕರ್, ಒಂದು ವಾರದಲ್ಲಿ ಬಲಿಜ ಸಮುದಾಯದ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಲಾಗುವುದು. ಪ್ರಸ್ತುತ 2ಎ ಮೀಸಲಾತಿಗಾಗಿ ದೊಡ್ಡ ದೊಡ್ಡ ಸಮುದಾಯಗಳು ಹೋರಾಟ ನಡೆಸುತ್ತಿವೆ. ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಖಂಡಿತವಾಗಿಯೂ ಬಲಿಜ ಸಮುದಾಯದವರಿಗೆ ಉದ್ಯೋಗದಲ್ಲಿ 2ಎ ಮೀಸಲಾತಿ ನೀಡುತ್ತೇವೆ. ಜತೆಗೆ, ಬಲಿಜ ಸಂಘಕ್ಕೆ 8 ಕೋಟಿ ರೂ. ಮೌಲ್ಯದ 1 ಎಕರೆ ಜಮೀನು ನೀಡುತ್ತೇವೆ ಎಂದೂ ಭರವಸೆ ನೀಡಿದ್ದರು.

ರಾಜ್ಯದಲ್ಲಿ ಬಲಿಜ ಜನಾಂಗ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದಿದೆ. ಮುಂದಿನ ಒಂದು ವಾರದಲ್ಲಿ ಬಲಿಜ ಜನಾಂಗ ಅಭಿವೃದ್ದಿ ಮಂಡಳಿ ಸ್ಥಾಪನೆ ಮಾಡುತ್ತೇನೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೂ ಮುನ್ನ ಮೀಸಲಾತಿ ಕುರಿತ ಅಂತಿಮ ವರದಿ ಸಲ್ಲಿವುದಿಲ್ಲ: ಒಬಿಸಿ ಆಯೋಗದ ಅಧ್ಯಕ್ಷ

ಜನವರಿಯಲ್ಲಿ ನಡೆದಿತ್ತು ಭಾರೀ ಪ್ರತಿಭಟನೆ

ಬಲಿಜ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಜನವರಿ 9ರಂದು ಕರ್ನಾಟಕ ರಾಜ್ಯ ಬಲಿಜ ಸಂಘದ ನೇತೃತ್ವದಲ್ಲಿ ಸಮುದಾಯದ ಜನರು ಬೆಂಗಳೂರಿನ ಫ್ರೀಡಂ ಪಾರ್ಕ್​​​ನಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಹಲವು ಜಿಲ್ಲೆಗಳಿಂದ ಬಂದಿದ್ದ ಸಮುದಾಯದ ಜನರು ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದರು.

ಬಲಿಜ ಜನಾಂಗ ಎಂದರೆ…

ಬಲಿಜ ಎಂಬುದು ಭಾರತೀಯ ಜಾತಿಗಳಲ್ಲಿ ಒಂದಾಗಿದೆ. ದೇಶದ ದಕ್ಷಿಣದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರ ಪ್ರದೇಶಗಳಲ್ಲಿ ಹೆಚ್ಚಾಗಿ ಈ ಜಾತಿಯ ಜನರು ವಾಸಿಸುತ್ತಿದ್ದಾರೆ. ಇವರನ್ನು ಬಣಜಿಗ ಎಂದೂ ಕರೆಯಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Fri, 10 March 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!