AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ವಾಹನ ಸ್ಕ್ರ್ಯಾಪ್ ಮಾಡಿ ಇವಿ ತಗೊಂಡರೆ ಸಿಗಲಿದೆ ಭರ್ಜರಿ ತೆರಿಗೆ ರಿಯಾಯಿತಿ: ಇಲ್ಲಿದೆ ವಿವರ

‘ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿ 2022’ ರ ನಿಬಂಧನೆಗಳ ಪ್ರಕಾರ, ಹಳೆಯ ವಾಹನವನ್ನು ಸ್ಕ್ರ್ಯಾಪ್ ಮಾಡಿ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ತೆರಿಗೆ ವಿನಾಯಿತಿ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ. ಯಾವ ವಾಹನಕ್ಕೆ ಎಷ್ಟು ತೆರಿಗೆ ವಿನಾಯಿತಿ ಸಿಗಲಿದೆ ಎಂಬ ಮಾಹಿತಿ ಇಲ್ಲಿದೆ.

ಹಳೆಯ ವಾಹನ ಸ್ಕ್ರ್ಯಾಪ್ ಮಾಡಿ ಇವಿ ತಗೊಂಡರೆ ಸಿಗಲಿದೆ ಭರ್ಜರಿ ತೆರಿಗೆ ರಿಯಾಯಿತಿ: ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jan 19, 2024 | 7:28 AM

Share

ಬೆಂಗಳೂರು, ಜನವರಿ 19: ಜೀವಿತಾವಧಿ ಕೊನೆಗೊಂಡಿರುವ ಹಳೆಯ ವಾಹನವನ್ನು ಸ್ಕ್ರ್ಯಾಪ್ ಮಾಡಿ ಹೊಸ ಎಲೆಕ್ಟ್ರಿಕ್ ವಾಹನಗಳನ್ನು (Electric Vehicle) ಖರೀದಿಸುವ ಗ್ರಾಹಕರಿಗೆ 1,000 ರೂಪಾಯಿಯಿಂದ 40,000 ರೂಪಾಯಿಗಳವರೆಗೆ ತೆರಿಗೆ ರಿಯಾಯಿತಿ ನೀಡಲು ಕರ್ನಾಟಕ ಸರ್ಕಾರ (Karnataka Government) ಮುಂದಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್‌ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ದ್ವಿಚಕ್ರ ವಾಹನಗಳಿಗೆ 1,000 ರೂ.ನಿಂದ 5,000 ರೂ.ವರೆಗೆ ತೆರಿಗೆ ರಿಯಾಯಿತಿ ಇರುತ್ತದೆ ಎಂದು ಪಾಟೀಲ್ ಹೇಳಿದ್ದಾರೆ. 1 ಲಕ್ಷ ರೂ. ವರೆಗಿನ ವಾಹನಗಳಿಗೆ 1,000 ರೂ., 2 ಲಕ್ಷ ರೂ.ವರೆಗಿನ ವಾಹನಗಳಿಗೆ 2,000 ರೂ. ರಿಯಾಯಿತಿ ಮತ್ತು 4-5 ಲಕ್ಷ ರೂ. ವಾಹನಗಳಿಗೆ 5,000 ರೂ.ವರೆಗೆ ತೆರಿಗೆ ರಿಯಾಯಿತಿ ಸಿಗಲಿದೆ.

ಹೊಸ ಎಲೆಕ್ಟ್ರಿಕ್ ನಾಲ್ಕು-ಚಕ್ರ ವಾಹನಗಳಿಗಾಗಿ ಹಳೆಯ ನಾಲ್ಕು-ಚಕ್ರ ವಾಹನಗಳನ್ನು ಸ್ಕ್ರ್ಯಾಪ್ ಮಾಡುವವರಿಗೂ ಇದೇ ರೀತಿಯ ಪ್ರಯೋಜನಗಳು ದೊರೆಯಲಿವೆ. 5 ಲಕ್ಷ ರೂ.ಗಿಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳಿಗೆ 10,000 ರೂ., 5-10 ಲಕ್ಷ ಬೆಲೆಯ ವಾಹನಗಳಿಗೆ 20,000 ರೂ., 10-15 ಲಕ್ಷ ರೂ. ವಾಹನಗಳಿಗೆ 30,000 ರೂ., 15-20 ಲಕ್ಷ ರೂ. ವಾಹನಗಳಿಗೆ 40,000 ರೂ. ಮತ್ತು 20 ಲಕ್ಷಕ್ಕಿಂತ ಹೆಚ್ಚಿನ ಬೆಲೆಯ ವಾಹನಗಳಿಗೆ 50,000 ರೂ. ವರೆಗೆ ರಿಯಾಯಿತಿ ದೊರೆಯಲಿದೆ.

ಈ ರಿಯಾಯಿತಿಯು ಎಲೆಕ್ಟ್ರಿಕ್ ಟ್ರಾನ್ಸ್​​ಪೋರ್ಟ್​ ವಾಹನಗಳಿಗೂ ಅನ್ವಯಿಸಲಿದೆ. ‘ನೋಂದಾಯಿತ ವಾಹನಗಳ ಸ್ಕ್ರ್ಯಾಪಿಂಗ್ ನೀತಿ 2022’ ರ ನಿಬಂಧನೆಗಳ ಪ್ರಕಾರ ರಿಯಾಯಿತಿಗಳನ್ನು ನೀಡಲಾಗಿದೆ.

ಮೋಟಾರು ಸಾರಿಗೆ ಮತ್ತು ಸಂಬಂಧಿತ ವಲಯಗಳ ಕಾರ್ಮಿಕರ ಕಲ್ಯಾಣಕ್ಕಾಗಿ ಸೆಸ್ ಸಂಗ್ರಹಿಸಲು ಸರ್ಕಾರಕ್ಕೆ ಅನುಮತಿ ನೀಡುವ ಸುಗ್ರೀವಾಜ್ಞೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಇದು ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ರಚಿಸಲು ಸರ್ಕಾರಕ್ಕೆ ಅವಕಾಶ ನೀಡುತ್ತದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಅಸ್ತು

ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವುದೂ ಸೇರಿದಂತೆ ಇನ್ನೂ ಅನೇಕ ನಿರ್ಧಾರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?