ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.
ಕರ್ನಾಟಕ ಸರ್ಕಾರವು ಹೊರಡಿಸಿರುವ ಆದೇಶ
ಅಪಾರ್ಟ್ಮೆಂಟ್ ಆವರಣಗಳಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ಸಮ್ಮತಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಗ್ರೂಪ್ ಡ್ಯಾನ್ಸ್ಗಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಿಲ್ಲ. ಅಪಾರ್ಟ್ಮೆಂಟ್ ಆವರಣದಲ್ಲಿ ವರ್ಷಾಚರಣೆಗೆ ಷರತ್ತಿನ ಸಮ್ಮತಿ
ಷರತ್ತು ಪಾಲನೆ ಖಚಿತಪಡಿಸಿಕೊಳ್ಳುವುದು ಸಂಘಟಕರ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Omicron ಒಮಿಕ್ರಾನ್ 3 ಪಟ್ಟು ಹೆಚ್ಚು ಸಾಂಕ್ರಾಮಿಕ, ವಾರ್ ರೂಮ್ಗಳನ್ನು ಸಕ್ರಿಯಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಇದನ್ನೂ ಓದಿ: Omicron: ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ, ಲಸಿಕೆ ಪಡೆದವರಿಗೂ ತಗಲುತ್ತದೆ; WHO ವಿಜ್ಞಾನಿ