AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Christmas and New Year 2021 Covid Guidelines: ಕ್ರಿಸ್​ಮಸ್​ ಹಬ್ಬದಲ್ಲಿ ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ

New Year 2022 Guidelines: ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Dec 21, 2021 | 11:09 PM

Share

ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ (New Year Celebration) ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುವರ್ಣ ಸೌಧದಲ್ಲಿ ಹೇಳಿಕೆ ನೀಡಿದರು. ಹೊಸವರ್ಷದ ಸಂಭ್ರಮಾಚರಣೆಗೆ ಮಾತ್ರ ಈ ನಿಯಮಗಳು ಅನ್ವಯವಾಗುತ್ತವೆ. ಆದರೆ ಕ್ರಿಸ್​ಮಸ್​ ಹಬ್ಬದಲ್ಲಿ  (Christmas Festival) ಚರ್ಚುಗಳಲ್ಲಿ ಪ್ರಾರ್ಥನೆ ನಡೆಸಲು ಯಾವುದೇ ನಿರ್ಬಂಧಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೊಸ ವರ್ಷಾಚರಣೆ ವೇಳೆ ಜನ ಗುಂಪುಗೂಡದಂತೆ ನಿರ್ಬಂಧ ವಿಧಿಸಲಾಗುವುದು ಎಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಗುಂಪುಗೂಡದಂತೆ ನಿಯಮ ವಿಧಿಸಲಾಗುವುದು. ಡಿ 30ರಿಂದ ಜ 2ರವರೆಗೆ ಸಾಮೂಹಿಕ ಸಮಾರಂಭಗಳಿಗೆ ನಿರ್ಬಂಧ ಇರುತ್ತದೆ. ಗುಂಪುಗೂಡಿ ಹೊಸ ವರ್ಷಾಚರಣೆ ಮಾಡಲು ಅವಕಾಶವಿಲ್ಲ. ಪಬ್, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಲ್ಲಿ ಅರ್ಧದಷ್ಟು ಜನರಿಗೆ ಸೇವೆ ಒದಗಿಸಬಹುದು. ಎಲ್ಲಾ ಸಿಬ್ಬಂದಿಗೆ 2 ಡೋಸ್​ ಕೊರೊನಾ ಲಸಿಕೆ ಹಾಕಿಸಿರಬೇಕು. ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ಸಂಬಂಧ ನಡೆದ ವಿಡಿಯೊ ಕಾನ್ಫರೆನ್ಸ್​ನಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.

Karnataka Government announces New Year 2022 Covid Guidelines amid rise of Omicron Cases in Karnataka State Here is the detail in Kannada

ಕರ್ನಾಟಕ ಸರ್ಕಾರವು ಹೊರಡಿಸಿರುವ ಆದೇಶ

ಅಪಾರ್ಟ್‌ಮೆಂಟ್‌ ಆವರಣಗಳಲ್ಲಿ ಹೊಸ ವರ್ಷಾಚರಣೆಗೆ ಸರ್ಕಾರ ಸಮ್ಮತಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ಗ್ರೂಪ್ ಡ್ಯಾನ್ಸ್‌ಗಾಗಿ ಡಿಜೆ, ಡ್ಯಾನ್ಸ್‌ ಫ್ಲೋರ್‌ ಸೌಲಭ್ಯಕ್ಕೆ ಬ್ರೇಕ್ ಹಾಕಲಾಗಿದೆ. ಯಾವುದೇ ವಿಶೇಷ ಕಾರ್ಯಕ್ರಮಗಳ ಆಯೋಜನೆಗೆ ಅವಕಾಶ ನೀಡಿಲ್ಲ. ಅಪಾರ್ಟ್‌ಮೆಂಟ್ ಆವರಣದಲ್ಲಿ ವರ್ಷಾಚರಣೆಗೆ ಷರತ್ತಿನ ಸಮ್ಮತಿ ಷರತ್ತು ಪಾಲನೆ ಖಚಿತಪಡಿಸಿಕೊಳ್ಳುವುದು ಸಂಘಟಕರ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Omicron ಒಮಿಕ್ರಾನ್ 3 ಪಟ್ಟು ಹೆಚ್ಚು ಸಾಂಕ್ರಾಮಿಕ, ವಾರ್ ರೂಮ್‌ಗಳನ್ನು ಸಕ್ರಿಯಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ ಇದನ್ನೂ ಓದಿ: Omicron: ಡೆಲ್ಟಾಗಿಂತ ಒಮಿಕ್ರಾನ್ ವೇಗವಾಗಿ ಹರಡುತ್ತದೆ, ಲಸಿಕೆ ಪಡೆದವರಿಗೂ ತಗಲುತ್ತದೆ; WHO ವಿಜ್ಞಾನಿ

Published On - 3:30 pm, Tue, 21 December 21

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?