ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

545 PSI Recruitment Scam: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ಕರ್ನಾಟಕ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Jul 22, 2023 | 11:53 AM

ಬೆಂಗಳೂರು ಜು.22:  545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು (PSI Recruitment Scam) ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ತನಿಖೆಗೆ ನಡೆಯಲಿದೆ. ಈ ನ್ಯಾಯಾಂಗ ತನಿಖೆಗೆ ಪೊಲೀಸ್ ಇಲಾಖೆ ಹಾಗೂ ಸಿಐಡಿ ಸಹಕರಿಸಬೇಕು ಎಂದು ಸರ್ಕಾರ ಸೂಚಿಸಿದೆ. ಪ್ರಕರಣದ ತನಿಖೆಯನ್ನು ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್​ಐ ಹಗರಣ ಭಾರಿ ಸದ್ದು ಮಾಡಿತ್ತು. ಈ ಹಗರಣ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿತತ್ತು. ನಾವು ಅಧಿಕಾರಕ್ಕೆ ಬಂದ ಕೂಡಲೆ ತನಿಖೆ ನಡೆಸುವುದಾಗಿ ಕಾಂಗ್ರೆಸ್​ ಹೇಳಿತ್ತು. ಅದರಂತೆ ಇದೀಗ ತನಿಖೆಗೆ ನೀಡಿದೆ.

ಇದನ್ನೂ ಓದಿ: ಪಿಎಸ್‌ಐ ಅಕ್ರಮದ ಆರೋಪಿಯಲ್ಲದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಸಾಧ್ಯವಿಲ್ಲ; ಹೈಕೋರ್ಟ್​​ಗೆ ತಿಳಿಸಿದ ಸರ್ಕಾರ

ಪಿಎಸ್​ಐ 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಜನವರಿ 21 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್​ 3 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ನೀಡಿತ್ತು.

ರಾಜ್ಯದ ವಿವಿಧ ಪೊಲೀಸ್​ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳನ್ನು ಒಳಗೊಂಡ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಲಾಗಿತ್ತು. ನಂತರ ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆ ಬರೆದಿರುವು ದೃಢಪಟ್ಟಿರುವ ಹಿನ್ನೆಲೆ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳ ಪ್ರಕಾರ ಪೊಲೀಸ್​ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.

ಇನ್ನು ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ಎಡಿಜಿಪಿ ಅಮೃತ್ ಪಾಲ್​​ ಅವರಿಗೆ  ಮತ್ತೊಂದು ಸಂಕಷ್ಟ ಎದುರಾಗಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದೆ. ಪ್ರಕರಣ ಸಂಬಂಧ ಈಗಾಗಲೇ ಪ್ರಾಥಮಿಕ ಚಾರ್ಜ್ ಶೀಟ್​​ನ್ನು ಸಿಐಡಿ ನ್ಯಾಯಾಲಯಕ್ಕೆ  ಸಲ್ಲಿಸಿತ್ತು. ಇದೀಗ ಅಮೃತ್ ಪಾಲ್ ವಿರುದ್ದ ಮುಂದಿನ ಕಾನೂನು ಕ್ರಮಕ್ಕೆ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಲಾಗಿದೆ. ಸದ್ಯ ಅಮೃತ್ ಪಾಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:21 am, Sat, 22 July 23

ತಾಜಾ ಸುದ್ದಿ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್