AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

17,835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸರ್ಕಾರದಿಂದ ಅನುಮೋದನೆ

ರಾಜ್ಯದಲ್ಲಿ 27,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿಯಿಂದ ಕರ್ನಾಟಕ ಸರ್ಕಾರವು 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಹೆಚ್ಚುವರಿ ಬಂಡಾವಳ ಹೂಡಿಕೆಯ ಎಂಟು ಯೋಜನೆಗಳಿಗೆ ಅನುಮೋದಿಸಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

17,835.9 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಸರ್ಕಾರದಿಂದ ಅನುಮೋದನೆ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on:Mar 09, 2024 | 8:12 AM

Share

ಬೆಂಗಳೂರು, ಮಾರ್ಚ್​​ 09: ಕರ್ನಾಟಕ ಸರ್ಕಾರವು (Karnataka Government) 17,835.9 ಕೋಟಿ ರೂ. ಮೌಲ್ಯದ ಆರು ಹೊಸ ಯೋಜನೆಗಳು ಮತ್ತು ಹೆಚ್ಚುವರಿ ಬಂಡಾವಳ ಹೂಡಿಕೆಯ ಎಂಟು ಯೋಜನೆಗಳಿಗೆ ಅನುಮೋದಿಸಿದೆ. ಇದರಿಂದ ರಾಜ್ಯದಲ್ಲಿ 27,000 ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅನುಮೋದನಾ ಸಮಿತಿ (ಎಸ್​ಹೆಚ್​ಎಲ್​ಸಿಸಿ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.

8,220.05 ಕೋಟಿ ರೂ. ಮೌತ್ತದ ಆರು ಹೊಸ ಯೋಜನೆಗಳಿಗೆ ಮತ್ತು 9,615.85 ಕೋಟಿ ರೂ. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ ಎಂಟು ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಕೋಲಾರ ಜಿಲ್ಲೆಯ ನರಸಾಪರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟ್ರಾನ್​​ ಇನ್ಫೋಕಾಂ ಮ್ಯಾನುಫ್ಯಾಕ್ಚರಿಂಗ್​ ಇಂಡಿಯಾ ಪ್ರವೇಟ್​ ಲಿಮಿಟೆಡ್​​ 2,095 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್​​ಫೋನ್​ ತಯಾರಿಕಾ ಘಟಕ ಆರಂಭವಾಗಲಿದ್ದು, 21,723 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Tata: ಟಾಟಾ ಕಂಪನಿಗಳಿಂದ ಬೆಂಗಳೂರಲ್ಲಿ ಗನ್ ಫ್ಯಾಕ್ಟರಿ, ಎಂಆರ್​ಒ ಘಟಕ; 2,300 ಕೋಟಿ ರೂ ಹೂಡಿಕೆ ಸಾಧ್ಯತೆ

ಯಾವ ಕಂಪನಿಗಳು ಬಂಡವಾಳ ಹೂಡಿಕೆ?

ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲು ಒಟ್ಟು 6 ಕಂಪನಿಗಳು ಮುಂದೆ ಬಂದಿವೆ. ಎಸ್​​ಟಿಟಿ ಗ್ಲೋಬಲ್ ಡಾಟಾ ಸೆಂಟರ್ಸ್ ಇಂಡಿಯಾ ಲಿಮಿಟೆಡ್ 1,750 ಕೋಟಿ ರೂ., ಇಂಡಿಯನ್ ಕೇನ್ ಪವರ್ ಲಿಮಿಟೆಡ್ 1,078 ಕೋಟಿ ರೂ., ಐಸಿಟಿ ಸರ್ವಿಸ್ ಮ್ಯಾನೇಜ್‌ಮೆಂಟ್ ಸೊಲ್ಯೂಷನ್ಸ್ 1,450 ಕೋಟಿ ರೂ. ಮತ್ತು ಶ್ರೀ ಬಾಲಾಜಿ ಷುಗರ್ಸ್​​ ಮತ್ತು ಕೆಮಿಕಲ್ಸ್​ ಪ್ರೈವೇಟ್​ ಲಿಮಿಟೆಡ್​​ ಮತ್ತು ಏರ್​ ಇಂಡಿಯಾ ಲಿಮಿಟೆಡ್​​ ಹೂಡಿಕೆ ಮಾಡಲಿವೆ.

ಉತ್ತರ ಕರ್ನಾಟಕದಲ್ಲಿ ಎಷ್ಟು ಹೂಡಿಕೆ?

ಉತ್ತರ ಕರ್ನಾಟಕ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆ ಎಂಟು ಯೋಜನೆಗಳಿಗೆ ಅನುಮತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಒಟ್ಟಾರೆ 10,433.72 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:11 am, Sat, 9 March 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ