ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿರುವ ನಡುವೆ, ಅಕ್ರಮ ಬಿಪಿಎಲ್ ಕಾರ್ಡ್​​ದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಶಾಕ್ ನೀಡಿದೆ. ಕೇವಲ 3 ತಿಂಗಳಲ್ಲಿ 15,056 ಕಾರ್ಡ್‌ಗಳು ರದ್ದಾಗಿವೆ. 2025ರ ಸೆಪ್ಟೆಂಬರ್ 03ರಿಂದ ಡಿಸೆಂಬರ್​​ 14ರ ವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಡೆಸಿರುವ ಕಾರ್ಯಾಚಣೆಯ ಮಾಹಿತಿ ಟಿವಿ9ಗೆ ಲಭ್ಯವಾಗಿದೆ.

ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?
ರೇಷನ್​​ ಕಾರ್ಡ್​​ ರದ್ದು

Updated on: Dec 19, 2025 | 1:55 PM

ಬೆಂಗಳೂರು, ಡಿಸೆಂಬರ್​​ 19: ಅಕ್ರಮವಾಗಿ ಬಿಪಿಎಲ್​​ ಕಾರ್ಡ್​​ ಹೊಂದಿರುವವರಿಗೆ ಆಹಾರ ಇಲಾಖೆ ಭರ್ಜರಿ ಶಾಕ್​ ಕೊಟ್ಟಿದ್ದು, ಕಳೆದ 3 ತಿಂಗಳ ಅವಧಿಯಲ್ಲಿ ಬರೋಬ್ಬರಿ 15,056 ಬಿಪಿಎಲ್ ಕಾರ್ಡ್​​ಗಳು ರಾಜ್ಯದಲ್ಲಿ ರದ್ದಾಗಿವೆ. 5,632 ಬಿಪಿಎಲ್ ಕಾರ್ಡ್​​ಗಳ ವಿಚಾರಣೆ ಕಾಯ್ದಿರಿಸಿ ತಾತ್ಕಾಲಿಕ ಅಮಾನತು ಮಾಡಲಾಗಿದೆ. ಬರೋಬ್ಬರಿ 3.90 ಲಕ್ಷ ಕಾರ್ಡ್​​ಗಳು ಎಪಿಎಲ್ ಆಗಿ ಬದಲಾಗಿವೆ. ಆ ಮೂಲಕ ಒಟ್ಟು 4.10 ಲಕ್ಷ ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರ ಬಿಸಿ ಮುಟ್ಟಿಸಿದೆ.

4 ಲಕ್ಷ ಅಕ್ರಮ ಫಲಾನುಭವಿಗಳಿಗೆ ಶಾಕ್

2025ರ ಸೆಪ್ಟೆಂಬರ್ 03ರಿಂದ ಡಿಸೆಂಬರ್​​ 14ರ ವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಡೆಸಿರುವ ಕಾರ್ಯಾಚಣೆಯ ಮಾಹಿತಿ ಟಿವಿ9ಗೆ ಲಭ್ಯವಾಗಿದ್ದು, ಆ ಪ್ರಕಾರ ಸುಮಾರು 14 ಲಕ್ಷ ಅಕ್ರಮ ಫಲಾನುಭವಿಗಳಿಗೆ ಶಾಕ್ ನೀಡಲಾಗಿದೆ.

  • ಸದ್ಯ ರಾಜ್ಯದಲ್ಲಿರುವ ಒಟ್ಟು ರೇಷನ್ ಕಾರ್ಡ್​​ಗಳ ಸಂಖ್ಯೆ- 1,53,65,889
  • ಸದ್ಯ ಸಕ್ರಿಯವಾಗಿರುವ ಬಿಪಿಎಲ್ ಕಾರ್ಡ್​​ಗಳ ಸಂಖ್ಯೆ- 1,13,56,089
  • ಸದ್ಯ ಚಾಲ್ತಿಯಲ್ಲಿರುವ ಅಂತ್ಯೋದಯ ಕಾರ್ಡ್​​ಗಳ ಸಂಖ್ಯೆ- 42,94,924

ಇದನ್ನೂ ಓದಿ: ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಹಚ್ಚೋದು ಹೇಗೆ, ವಿಧಾನ ಏನು? ಇಲ್ಲಿದೆ ನೋಡಿ

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ವಿಧಾನ ಸಭೆಯಲ್ಲಿ ನಿನ್ನೆಯಷ್ಟೇ ತಿಳಿಸಿದ್ದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದಿದ್ದರು.

ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ. ಇಲ್ಲಿನ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್​ ಪಡೆದಿವೆ. ಆದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಮಾತ್ರ ಇರಬೇಕಿತ್ತು ಎಂದಿದ್ದರು.

ವರದಿ: ಲಕ್ಷ್ಮೀನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:53 pm, Fri, 19 December 25

Loading...
Unable to load recommendations.
Follow Us