AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ

ಕೊವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ನೀಡಿದೆ.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ
ಕರ್ನಾಟಕ ಸರ್ಕಾರದ ಅಧಿಸೂಚನೆ
TV9 Web
| Edited By: |

Updated on: Dec 03, 2021 | 11:05 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಡಿಸೆಂಬರ್ 2ರ ಗುರುವಾರದಂದು ಪ್ರಮುಖವಾದ ತಿದ್ದುಪಡಿ ಆದೇಶವೊಂದನ್ನು ಹೊರಡಿಸಿದೆ. ಈ ಹಿಂದೆ, ಅಂದರೆ ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ ಈ ಹೊಸ ತಿದ್ದುಪಡಿ ಬಂದಿದೆ. ಹೊಸ ಘೋಷಣೆಯಲ್ಲಿ ಏನು ತಿಳಿಸಲಾಗಿದೆ ಅಂದರೆ, ಬಡತನ ರೇಖೆಗಿಂತ ಕೆಳಗಿರುವ “ದುಡಿಯುವ ವ್ಯಕ್ತಿ” ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಆ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಲಾಗಿತ್ತು. ಅಂದರೆ, ಮೃತ ವ್ಯಕ್ತಿ “ದುಡಿಯುವ ಸದಸ್ಯನಾಗಿರಬೇಕು” ಎಂಬ ನಿಯಮ ಇತ್ತು.

ಆದರೆ, ಈಗ “ದುಡಿಯುವ ಸದಸ್ಯನಾಗಿರಬೇಕು” ಎಂಬುದು ಅಧಿಸೂಚನೆಯಲ್ಲಿ ಎಲ್ಲೆಲ್ಲಿ ಬಳಕೆ ಆಗಿದೆಯೋ ಅಲ್ಲೆಲ್ಲ “ದುಡಿಯುವ” ಎಂಬ ಪದವನ್ನು ಬಿಟ್ಟು ಓದಿಕೊಳ್ಳಬೇಕು ಎಂದು ತಿದ್ದುಪಡಿಯಲ್ಲಿ ತಿಳಿಸಲಾಗಿದೆ. ಹೀಗೆ ಮಾಡುವುದರಿಂದ ಬಿಪಿಎಲ್ ಕುಟುಂಬದ ಸದಸ್ಯರು ಯಾರೇ ಕೊವಿಡ್- 19ನಿಂದ ಮೃತಪಟ್ಟರೂ ಕರ್ನಾಟಕ ಸರ್ಕಾರದಿಂದ 1 ಲಕ್ಷ ರೂಪಾಯಿ ಪರಿಹಾರ ದೊರೆಯುತ್ತದೆ.

ತಿದ್ದುಪಡಿಗೆ ಸಂಬಂಧಿಸಿದಂತೆ ಇನ್ನೂ ಮುಂದುವರಿದು, ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೊವಿಡ್- 19 ವೈರಾಣು ಸೋಂಕಿನಿಂದ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. 1 ಲಕ್ಷ ಪರಿಹಾರದ ಆರ್ಥಿಕ ನೆರವನ್ನು ನೀಡತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನು ಹೊರತುಪಡಿಸಿದಂತೆ ದಿನಾಂಕ 28.09.2021ರಂದು ಹೊರಡಿಸಿದ ಆದೇಶ, ಮಾರ್ಗಸೂಚಿಗಳು ಮತ್ತು ಆ ನಂತರ ಅಕ್ಟೋಬರ್ 1ರಂದು ತಂದ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ