AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ

ಕೊವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ನೀಡಿದೆ.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ
ಕರ್ನಾಟಕ ಸರ್ಕಾರದ ಅಧಿಸೂಚನೆ
TV9 Web
| Edited By: |

Updated on: Dec 03, 2021 | 11:05 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಡಿಸೆಂಬರ್ 2ರ ಗುರುವಾರದಂದು ಪ್ರಮುಖವಾದ ತಿದ್ದುಪಡಿ ಆದೇಶವೊಂದನ್ನು ಹೊರಡಿಸಿದೆ. ಈ ಹಿಂದೆ, ಅಂದರೆ ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ ಈ ಹೊಸ ತಿದ್ದುಪಡಿ ಬಂದಿದೆ. ಹೊಸ ಘೋಷಣೆಯಲ್ಲಿ ಏನು ತಿಳಿಸಲಾಗಿದೆ ಅಂದರೆ, ಬಡತನ ರೇಖೆಗಿಂತ ಕೆಳಗಿರುವ “ದುಡಿಯುವ ವ್ಯಕ್ತಿ” ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಆ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಲಾಗಿತ್ತು. ಅಂದರೆ, ಮೃತ ವ್ಯಕ್ತಿ “ದುಡಿಯುವ ಸದಸ್ಯನಾಗಿರಬೇಕು” ಎಂಬ ನಿಯಮ ಇತ್ತು.

ಆದರೆ, ಈಗ “ದುಡಿಯುವ ಸದಸ್ಯನಾಗಿರಬೇಕು” ಎಂಬುದು ಅಧಿಸೂಚನೆಯಲ್ಲಿ ಎಲ್ಲೆಲ್ಲಿ ಬಳಕೆ ಆಗಿದೆಯೋ ಅಲ್ಲೆಲ್ಲ “ದುಡಿಯುವ” ಎಂಬ ಪದವನ್ನು ಬಿಟ್ಟು ಓದಿಕೊಳ್ಳಬೇಕು ಎಂದು ತಿದ್ದುಪಡಿಯಲ್ಲಿ ತಿಳಿಸಲಾಗಿದೆ. ಹೀಗೆ ಮಾಡುವುದರಿಂದ ಬಿಪಿಎಲ್ ಕುಟುಂಬದ ಸದಸ್ಯರು ಯಾರೇ ಕೊವಿಡ್- 19ನಿಂದ ಮೃತಪಟ್ಟರೂ ಕರ್ನಾಟಕ ಸರ್ಕಾರದಿಂದ 1 ಲಕ್ಷ ರೂಪಾಯಿ ಪರಿಹಾರ ದೊರೆಯುತ್ತದೆ.

ತಿದ್ದುಪಡಿಗೆ ಸಂಬಂಧಿಸಿದಂತೆ ಇನ್ನೂ ಮುಂದುವರಿದು, ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೊವಿಡ್- 19 ವೈರಾಣು ಸೋಂಕಿನಿಂದ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. 1 ಲಕ್ಷ ಪರಿಹಾರದ ಆರ್ಥಿಕ ನೆರವನ್ನು ನೀಡತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನು ಹೊರತುಪಡಿಸಿದಂತೆ ದಿನಾಂಕ 28.09.2021ರಂದು ಹೊರಡಿಸಿದ ಆದೇಶ, ಮಾರ್ಗಸೂಚಿಗಳು ಮತ್ತು ಆ ನಂತರ ಅಕ್ಟೋಬರ್ 1ರಂದು ತಂದ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ