AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ

ಕೊವಿಡ್-19ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ನೀಡಿದೆ.

Covid Compensation: ಬಿಪಿಎಲ್​ ಕುಟುಂಬದ ಸದಸ್ಯರು ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ರೂ. 1 ಲಕ್ಷ ಪರಿಹಾರ; ರಾಜ್ಯ ಸರ್ಕಾರ ಆದೇಶ
ಕರ್ನಾಟಕ ಸರ್ಕಾರದ ಅಧಿಸೂಚನೆ
TV9 Web
| Updated By: Srinivas Mata|

Updated on: Dec 03, 2021 | 11:05 AM

Share

ಬೆಂಗಳೂರು: ಕರ್ನಾಟಕ ಸರ್ಕಾರವು ಡಿಸೆಂಬರ್ 2ರ ಗುರುವಾರದಂದು ಪ್ರಮುಖವಾದ ತಿದ್ದುಪಡಿ ಆದೇಶವೊಂದನ್ನು ಹೊರಡಿಸಿದೆ. ಈ ಹಿಂದೆ, ಅಂದರೆ ಸೆಪ್ಟೆಂಬರ್ 28ರಂದು ಹೊರಡಿಸಿದ್ದ ಆದೇಶ ಮತ್ತು ಅಕ್ಟೋಬರ್ 1ರಂದು ರಾಜ್ಯ ಸರ್ಕಾರವು ತಿದ್ದುಪಡಿಯ ಮಾಡಿದ ನಂತರದಲ್ಲಿ ಈ ಹೊಸ ತಿದ್ದುಪಡಿ ಬಂದಿದೆ. ಹೊಸ ಘೋಷಣೆಯಲ್ಲಿ ಏನು ತಿಳಿಸಲಾಗಿದೆ ಅಂದರೆ, ಬಡತನ ರೇಖೆಗಿಂತ ಕೆಳಗಿರುವ “ದುಡಿಯುವ ವ್ಯಕ್ತಿ” ಕೊರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಆ ಕುಟುಂಬಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಲಾಗಿತ್ತು. ಅಂದರೆ, ಮೃತ ವ್ಯಕ್ತಿ “ದುಡಿಯುವ ಸದಸ್ಯನಾಗಿರಬೇಕು” ಎಂಬ ನಿಯಮ ಇತ್ತು.

ಆದರೆ, ಈಗ “ದುಡಿಯುವ ಸದಸ್ಯನಾಗಿರಬೇಕು” ಎಂಬುದು ಅಧಿಸೂಚನೆಯಲ್ಲಿ ಎಲ್ಲೆಲ್ಲಿ ಬಳಕೆ ಆಗಿದೆಯೋ ಅಲ್ಲೆಲ್ಲ “ದುಡಿಯುವ” ಎಂಬ ಪದವನ್ನು ಬಿಟ್ಟು ಓದಿಕೊಳ್ಳಬೇಕು ಎಂದು ತಿದ್ದುಪಡಿಯಲ್ಲಿ ತಿಳಿಸಲಾಗಿದೆ. ಹೀಗೆ ಮಾಡುವುದರಿಂದ ಬಿಪಿಎಲ್ ಕುಟುಂಬದ ಸದಸ್ಯರು ಯಾರೇ ಕೊವಿಡ್- 19ನಿಂದ ಮೃತಪಟ್ಟರೂ ಕರ್ನಾಟಕ ಸರ್ಕಾರದಿಂದ 1 ಲಕ್ಷ ರೂಪಾಯಿ ಪರಿಹಾರ ದೊರೆಯುತ್ತದೆ.

ತಿದ್ದುಪಡಿಗೆ ಸಂಬಂಧಿಸಿದಂತೆ ಇನ್ನೂ ಮುಂದುವರಿದು, ಯಾವುದೇ ವಯಸ್ಸಿನ ನಿಬಂಧನೆ ಇಲ್ಲದೆ ಕೊವಿಡ್- 19 ವೈರಾಣು ಸೋಂಕಿನಿಂದ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬದ ಅರ್ಹ ಕಾನೂನುಬದ್ಧ ವಾರಸುದಾರರಿಗೆ ರಾಜ್ಯ ಸರ್ಕಾರದ ರೂ. 1 ಲಕ್ಷ ಪರಿಹಾರದ ಆರ್ಥಿಕ ನೆರವನ್ನು ನೀಡತಕ್ಕದ್ದು ಎಂದು ತಿಳಿಸಲಾಗಿದೆ.

ಇದನ್ನು ಹೊರತುಪಡಿಸಿದಂತೆ ದಿನಾಂಕ 28.09.2021ರಂದು ಹೊರಡಿಸಿದ ಆದೇಶ, ಮಾರ್ಗಸೂಚಿಗಳು ಮತ್ತು ಆ ನಂತರ ಅಕ್ಟೋಬರ್ 1ರಂದು ತಂದ ತಿದ್ದುಪಡಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?