AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರ ಮೇಲೆ ಯಾವುದೇ ನಿಬಂಧನೆ ಹೇರುವಂತಿಲ್ಲ: ರಾಜ್ಯ ಸರ್ಕಾರದಿಂದ ಸೂಚನೆ

ಕೊವಿಡ್ ಲಸಿಕೆಯನ್ನು ಎಲ್ಲರಿಗೂ ವಿತರಿಸಬೇಕೆಂಬ ಉದ್ದೇಶದಿಂದ ಯಾವುದೇ ಯೋಜನೆಗೆ ಲಸಿಕಾ ಕಾರ್ಯಕ್ರಮ ಜೋಡಿಸಿದ್ದರೆ ಕೈಬಿಡಿ ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ.

ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಜನರ ಮೇಲೆ ಯಾವುದೇ ನಿಬಂಧನೆ ಹೇರುವಂತಿಲ್ಲ: ರಾಜ್ಯ ಸರ್ಕಾರದಿಂದ ಸೂಚನೆ
ಲಸಿಕೆ ಸಾಂಕೇತಿಕ ಚಿತ್ರ
TV9 Web
| Updated By: guruganesh bhat

Updated on:Sep 02, 2021 | 6:51 PM

Share

ಬೆಂಗಳೂರು: ಸಾರ್ವಜನಿಕರಿಗೆ ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ನಿಬಂಧನೆ ಹೇರದಂತೆ ರಾಜ್ಯ ಸರ್ಕಾರ ಅಧಿಕೃತ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಈಕುರಿತು ಅಧಿಕೃತ ಸೂಚನೆ ನೀಡಿದ್ದಾರೆ. ಕೊವಿಡ್ ಲಸಿಕೆಯನ್ನು ಎಲ್ಲರಿಗೂ ವಿತರಿಸಬೇಕೆಂಬ ಉದ್ದೇಶದಿಂದ ಯಾವುದೇ ಯೋಜನೆಗೆ ಲಸಿಕಾ ಕಾರ್ಯಕ್ರಮ ಜೋಡಿಸಿದ್ದರೆ ಕೈಬಿಡಿ ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ. ನೋ ವ್ಯಾಕ್ಸಿನ್, ನೋ ರೇಷನ್ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿ ನಂತರ ಆದೇಶ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಎಸ್ ರವಿಕುಮಾರ್ ಈ ಸೂಚನೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಸ್ಪಷ್ಟನೆ ಚಾಮರಾನಗರ: ‘ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್’ ಎಂಬ ಯಾವುದೇ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪೆನ್ಷನ್‌, ರೇಷನ್ ಕಡಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚಾಮರಾಜನರ ಜಿಲ್ಲಾಧಿಕಾರಿ ಲಸಿಕೆ ಇಲ್ಲದಿದ್ದರೆ ಪಡಿತರ ಮತ್ತು ಪೆನ್ಶನ್ ಇಲ್ಲ ಎಂಬ ಆದೇಶ ಹೊರಡಿಸಿದ ಹೊತ್ತಲ್ಲೇ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ,‘ನೋ ವ್ಯಾಕ್ಸಿನ್, ನೋ ರೇಷನ್, ನೋ ಪೆನ್ಷನ್‌’- ಇಂತಹ ಯಾವುದೇ ಆದೇಶ ಸರ್ಕಾರದ ವತಿಯಿಂದ ಘೋಷಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರೇ ಉಚಿತವಾಗಿ ಲಸಿಕೆ ಕೊಡುತ್ತೇವೆ ಎಂದಿದ್ದಾರೆ. ಹೀಗಾಗಿ ಇಂತಹ ಸುದ್ದಿಯನ್ನು ಸಾರ್ವಜನಿಕರು ಯಾವುದೇ ಕಾರಣಕ್ಕೂ ನಂಬಬಾರದು ಎಂದು ತಿಳಿಸಿದರು.

ಇದನ್ನೂ ಓದಿ: 

ಚಿಕ್ಕಮಗಳೂರು: ಕುರಿಗಾವಲು ಉಳಿಸಲು ಕಡೂರಿನಲ್ಲಿ ರೈತರು, ಕುರಿಗಾಹಿಗಳಿಂದ ಬೃಹತ್ ಪ್ರತಿಭಟನೆ

ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಗೃಹ ಸಚಿವ ಅಮಿತ್ ಶಾ ಘೋಷಣೆ

(Karnataka Government CS Ravikumar directs do not link covid vaccine distribution to other projects such as ration or pension)

Published On - 4:44 pm, Thu, 2 September 21

ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Devotional: ಗುಳಿ ಕೆನ್ನೆಯವರು ನಿಜಕ್ಕೂ ಅದೃಷ್ಟವಂತರಾ ತಿಳಿಯಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
Daily Horoscope: ಅನ್ಯರ ಸಮಸ್ಯೆಯನ್ನು ನಿಮ್ಮ ಸಮಸ್ಯೆ ಎಂದುಕೊಳ್ಳುವಿರಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ