AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ 2 ಯೋಜನೆ ಸ್ಥಗಿತ! ಏಕೆ?

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಆರ್ಥಿಕ ಮಿತವ್ಯಯಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಸೂತ್ರಗಳನ್ನ ಹೆಣೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎರಡು ಯೋಜನೆಗಳನ್ನು ಸ್ಥಗಿತಗೊಳಿಸಿ ಮೂರು ಯೋಜನೆಗಳ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ. ರಾಜ್ಯ ಸರ್ಕಾರದ ಮಾತೃಶ್ರೀ ಯೋಜನೆ ಮತ್ತು ಸಾಂತ್ವನ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರದ ಮಾತೃವಂದನಾ ಯೋಜನೆಯಡಿ ಬಾಣಂತಿಯರಿಗೆ 5000 ರೂ.ಗಳನ್ನು ಕೇಂದ್ರ ಮತ್ತು ರಾಜ್ಯ 60:40ರ ಅನುಪಾತದಲ್ಲಿ ನೀಡುತ್ತಿದ್ದವು. ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರದ ಜೊತೆಗೆ ಮಾತೃಪೂರ್ಣ […]

ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ 2 ಯೋಜನೆ ಸ್ಥಗಿತ! ಏಕೆ?
ಸಾಧು ಶ್ರೀನಾಥ್​
|

Updated on:May 15, 2020 | 6:18 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಆರ್ಥಿಕ ಮಿತವ್ಯಯಕ್ಕೆ ರಾಜ್ಯ ಸರ್ಕಾರ ಮತ್ತಷ್ಟು ಸೂತ್ರಗಳನ್ನ ಹೆಣೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎರಡು ಯೋಜನೆಗಳನ್ನು ಸ್ಥಗಿತಗೊಳಿಸಿ ಮೂರು ಯೋಜನೆಗಳ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ.

ರಾಜ್ಯ ಸರ್ಕಾರದ ಮಾತೃಶ್ರೀ ಯೋಜನೆ ಮತ್ತು ಸಾಂತ್ವನ ಯೋಜನೆ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರದ ಮಾತೃವಂದನಾ ಯೋಜನೆಯಡಿ ಬಾಣಂತಿಯರಿಗೆ 5000 ರೂ.ಗಳನ್ನು ಕೇಂದ್ರ ಮತ್ತು ರಾಜ್ಯ 60:40ರ ಅನುಪಾತದಲ್ಲಿ ನೀಡುತ್ತಿದ್ದವು. ಬಾಣಂತಿಯರಿಗೆ ಪೂರಕ ಪೌಷ್ಠಿಕ ಆಹಾರದ ಜೊತೆಗೆ ಮಾತೃಪೂರ್ಣ ಯೋಜನೆಯಡಿ ಆಹಾರ ನೀಡುತ್ತಿರುವುದರಿಂದ ಮಾತೃಶ್ರೀ ಯೋಜನೆ ಸ್ಥಗಿತಗೊಳಿಸಲಾಗುತ್ತೆ.

ಕೇಂದ್ರ ಪುರಸ್ಕೃತ ಯೋಜನೆಯಡಿ ಒನ್ ಸ್ಟಾಪ್ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ಸಾಂತ್ವನ ಯೋಜನೆ ಸ್ಥಗಿತ ಮಾಡಲಾಗುತ್ತೆ. ಭಾಗ್ಯಲಕ್ಷ್ಮೀ ಯೋಜನೆಯನ್ನು ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆ ಜೊತೆ ಒಪ್ಪಂದ ಮಾಡಿಕೊಂಡು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಸ್ಪೆಷಲ್ ಸಪೋರ್ಟ್ ಫಾರ್ HIV + ಚಿಲ್ಡ್ರನ್ ಯೋಜನೆಯಡಿ ನಿಗದಿಪಡಿಸಿರುವ ಅನುದಾನ ಫಲಾನುಭವಿಗಳ ಖಾತೆಗೆ ನೇರ ನಗದು ರೂಪದಲ್ಲಿ ಅನುಷ್ಠಾನ ಮಾಡಲಾಗುತ್ತೆ.

ನಗರ ಪ್ರದೇಶಗಳಲ್ಲಿನ 450 ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಸಿಬ್ಬಂದಿಯನ್ನ ಇಲಾಖೆಯಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯಿಂದಲೇ ಮರು ವಿನ್ಯಾಸದ ಮೂಲಕ ಹಂಚಿಕೆ ಮಾಡಲಾಗುತ್ತೆ. ಭಾಗ್ಯಲಕ್ಷ್ಮೀ ಯೋಜನೆ ಜೀವ ವಿಮಾ ನಿಗಮದ ಬದಲು ಅಂಚೆ ಇಲಾಖೆ ಜತೆ ಒಪ್ಪಂದ ಮಾಡಿಕೊಂಡು ಯೋಜನೆ ಮರು ವಿನ್ಯಾಸಕ್ಕೆ ಸರ್ಕಾರ ತೀರ್ಮಾನಿಸಿದೆ.

Published On - 6:17 pm, Fri, 15 May 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ