AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ

ಮಳೆ ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೆ, ಅನುದಾನ ಹಂಚಿಕೆ ತಾರತಮ್ಯ ವಿಚಾರವಾಗಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್​, ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದೆ.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ
ಮಳೆ ಹಾನಿ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 30, 2025 | 5:35 PM

Share

ಬೆಂಗಳೂರು, ಅಕ್ಟೋಬರ್​ 30: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ  ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಕೇಂದ್ರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಸ್ತೆ, ಸೇತುವೆ, ಚೆಕ್ ಡ್ಯಾಂಗಳು ಸೇರಿ 5000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಾರ್ವಜನಿಕ ಆಸ್ತಿ ನಷ್ಟ ಅಂದಾಜು ಮಾಡಿರುವ ಸರ್ಕಾರ, NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕಿಡಿ

ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣವನ್ನು ಈಗಾಲೇ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​ ಕಿಡಿ ಕಾರಿದ್ದು, ತನ್ನ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಜಿಎಸ್‌ಟಿ ಹೇರಿಕೆಯಿಂದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದ ರಾಜ್ಯಗಳ ತೆರಿಗೆ ಆದಾಯದಲ್ಲಿ‌ ದೊಡ್ಡ ಪ್ರಮಾಣದ ಕೊರತೆ ಎದುರಾಗಿದೆ. ಕರ್ನಾಟಕ ರಾಜ್ಯಕ್ಕೆ ಜಿಎಸ್‌ಟಿ ಪೂರ್ವದ ಆದಾಯ ವೃದ್ಧಿಯ ಪ್ರಮಾಣಕ್ಕೆ ಹೋಲಿಸಿದರೆ ಒಂದೇ ವರ್ಷದಲ್ಲಿ ರೂ.30,000 ಕೋಟಿಗೂ ಅಧಿಕ ನಷ್ಟವಾಗಿದೆ. ಕನ್ನಡಿಗರಿಗೆ, ರಾಜ್ಯಕ್ಕೆ ಶಾಪವಾಗಿರುವ ಕೇಂದ್ರ ಬಿಜೆಪಿ ಸರ್ಕಾರದಿಂದ ಅನುದಾನ ಹಂಚಿಕೆ, ಜಿಎಸ್‌ಟಿ ಪಾಲು, ನೆರೆ – ಬರ ಪರಿಹಾರ, ಅವೈಜ್ಞಾನಿಕ ನೀತಿಗಳು ಸೇರಿದಂತೆ ಪ್ರತಿಯೊಂದರಲ್ಲೂ ನಿರಂತರ ಅನ್ಯಾಯವಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ದೇಶದಲ್ಲೇ ಅತೀ ಹೆಚ್ಚು ತೆರಿಗೆ ನೀಡುವ, ಪ್ರತಿ ವರ್ಷ ದೇಶದ ಬೊಕ್ಕಸಕ್ಕೆ 4.5 ಲಕ್ಷ ಕೋಟಿ ರೂಪಾಯಿಗಳನ್ನು ತುಂಬಿಸುವ ಕರ್ನಾಟಕ್ಕೆ ಕೇಂದ್ರದಿಂದ ಸಿಗುತ್ತಿರುವುದು ಕನಿಷ್ಠ ಪಾಲು ಮಾತ್ರ. ಉತ್ತರ ಪ್ರದೇಶ – ಬಿಹಾರದಂತಹ ಭ್ರಷ್ಟಾಚಾರದಿಂದ ಬಳಲುತ್ತಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿ ಕರ್ನಾಟಕಕ್ಕೆ ನಿರಂತರ ದ್ರೋಹ ಬಗೆಯಲಾಗುತ್ತಿದೆ. ಕೇಂದ್ರದ ಈ ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದೂ ಆಡಳಿತಾರೂಢ ಕಾಂಗ್ರೆಸ್​ ಆರೋಪಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್