AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ

ಮಳೆ ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೆ, ಅನುದಾನ ಹಂಚಿಕೆ ತಾರತಮ್ಯ ವಿಚಾರವಾಗಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್​, ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದೆ.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ
ಮಳೆ ಹಾನಿ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 30, 2025 | 5:35 PM

Share

ಬೆಂಗಳೂರು, ಅಕ್ಟೋಬರ್​ 30: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ  ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಕೇಂದ್ರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಸ್ತೆ, ಸೇತುವೆ, ಚೆಕ್ ಡ್ಯಾಂಗಳು ಸೇರಿ 5000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಾರ್ವಜನಿಕ ಆಸ್ತಿ ನಷ್ಟ ಅಂದಾಜು ಮಾಡಿರುವ ಸರ್ಕಾರ, NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕಿಡಿ

ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣವನ್ನು ಈಗಾಲೇ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​ ಕಿಡಿ ಕಾರಿದ್ದು, ತನ್ನ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಜಿಎಸ್‌ಟಿ ಹೇರಿಕೆಯಿಂದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದ ರಾಜ್ಯಗಳ ತೆರಿಗೆ ಆದಾಯದಲ್ಲಿ‌ ದೊಡ್ಡ ಪ್ರಮಾಣದ ಕೊರತೆ ಎದುರಾಗಿದೆ. ಕರ್ನಾಟಕ ರಾಜ್ಯಕ್ಕೆ ಜಿಎಸ್‌ಟಿ ಪೂರ್ವದ ಆದಾಯ ವೃದ್ಧಿಯ ಪ್ರಮಾಣಕ್ಕೆ ಹೋಲಿಸಿದರೆ ಒಂದೇ ವರ್ಷದಲ್ಲಿ ರೂ.30,000 ಕೋಟಿಗೂ ಅಧಿಕ ನಷ್ಟವಾಗಿದೆ. ಕನ್ನಡಿಗರಿಗೆ, ರಾಜ್ಯಕ್ಕೆ ಶಾಪವಾಗಿರುವ ಕೇಂದ್ರ ಬಿಜೆಪಿ ಸರ್ಕಾರದಿಂದ ಅನುದಾನ ಹಂಚಿಕೆ, ಜಿಎಸ್‌ಟಿ ಪಾಲು, ನೆರೆ – ಬರ ಪರಿಹಾರ, ಅವೈಜ್ಞಾನಿಕ ನೀತಿಗಳು ಸೇರಿದಂತೆ ಪ್ರತಿಯೊಂದರಲ್ಲೂ ನಿರಂತರ ಅನ್ಯಾಯವಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ದೇಶದಲ್ಲೇ ಅತೀ ಹೆಚ್ಚು ತೆರಿಗೆ ನೀಡುವ, ಪ್ರತಿ ವರ್ಷ ದೇಶದ ಬೊಕ್ಕಸಕ್ಕೆ 4.5 ಲಕ್ಷ ಕೋಟಿ ರೂಪಾಯಿಗಳನ್ನು ತುಂಬಿಸುವ ಕರ್ನಾಟಕ್ಕೆ ಕೇಂದ್ರದಿಂದ ಸಿಗುತ್ತಿರುವುದು ಕನಿಷ್ಠ ಪಾಲು ಮಾತ್ರ. ಉತ್ತರ ಪ್ರದೇಶ – ಬಿಹಾರದಂತಹ ಭ್ರಷ್ಟಾಚಾರದಿಂದ ಬಳಲುತ್ತಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿ ಕರ್ನಾಟಕಕ್ಕೆ ನಿರಂತರ ದ್ರೋಹ ಬಗೆಯಲಾಗುತ್ತಿದೆ. ಕೇಂದ್ರದ ಈ ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದೂ ಆಡಳಿತಾರೂಢ ಕಾಂಗ್ರೆಸ್​ ಆರೋಪಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ