AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ

ಮಳೆ ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಕೇಂದ್ರಕ್ಕೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅಲ್ಲದೆ, ಅನುದಾನ ಹಂಚಿಕೆ ತಾರತಮ್ಯ ವಿಚಾರವಾಗಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್​, ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಆರೋಪಿಸಿದೆ.

ಮಳೆಹಾನಿ: ಕೇಂದ್ರ ಸರ್ಕಾರದಿಂದ 1,545 ಕೋಟಿ ನೆರವಿಗೆ ಮನವಿ ಸಲ್ಲಿಸಲು ತೀರ್ಮಾನ
ಮಳೆ ಹಾನಿ (ಸಾಂದರ್ಭಿಕ ಚಿತ್ರ)
ಪ್ರಸನ್ನ ಹೆಗಡೆ
|

Updated on: Oct 30, 2025 | 5:35 PM

Share

ಬೆಂಗಳೂರು, ಅಕ್ಟೋಬರ್​ 30: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ  ಮತ್ತು ಪ್ರವಾಹದಿಂದ ತೀವ್ರ ಹಾನಿ ಉಂಟಾಗಿರುವ ಹಿನ್ನಲೆ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಕೇಂದ್ರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಸ್ತೆ, ಸೇತುವೆ, ಚೆಕ್ ಡ್ಯಾಂಗಳು ಸೇರಿ 5000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಾರ್ವಜನಿಕ ಆಸ್ತಿ ನಷ್ಟ ಅಂದಾಜು ಮಾಡಿರುವ ಸರ್ಕಾರ, NDRF ಅಡಿಯಲ್ಲಿ 1545.23 ಕೋಟಿ ಆರ್ಥಿಕ ಸಹಾಯ ಕೋರಿ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕಿಡಿ

ಅತಿವೃಷ್ಟಿಯಿಂದ ಹಾನಿಯುಂಟಾಗಿರುವ ಹಿನ್ನೆಲೆ ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವಾಲಯವು ಎಸ್‌ಡಿಆರ್‌ಎಫ್‌ನಿಂದ 2ನೇ ಕಂತಿನ ಹಣವನ್ನು ಈಗಾಲೇ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ ಕೇವಲ 384.40 ಕೋಟಿ ರೂ.ಸಿಕ್ಕಿದ್ದರೆ, ನೆರೆ ರಾಜ್ಯ ಮಹಾರಾಷ್ಟ್ರಕ್ಕೆ ಬರೋಬ್ಬರಿ 1,566.40 ಕೋಟಿ ರೂ. ನೀಡಲಾಗಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್​ ಕಿಡಿ ಕಾರಿದ್ದು, ತನ್ನ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿ ಕೇಂದ್ರ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ಬಿಜೆಪಿ ಸರ್ಕಾರದ ಅವೈಜ್ಞಾನಿಕ ಜಿಎಸ್‌ಟಿ ಹೇರಿಕೆಯಿಂದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದ ರಾಜ್ಯಗಳ ತೆರಿಗೆ ಆದಾಯದಲ್ಲಿ‌ ದೊಡ್ಡ ಪ್ರಮಾಣದ ಕೊರತೆ ಎದುರಾಗಿದೆ. ಕರ್ನಾಟಕ ರಾಜ್ಯಕ್ಕೆ ಜಿಎಸ್‌ಟಿ ಪೂರ್ವದ ಆದಾಯ ವೃದ್ಧಿಯ ಪ್ರಮಾಣಕ್ಕೆ ಹೋಲಿಸಿದರೆ ಒಂದೇ ವರ್ಷದಲ್ಲಿ ರೂ.30,000 ಕೋಟಿಗೂ ಅಧಿಕ ನಷ್ಟವಾಗಿದೆ. ಕನ್ನಡಿಗರಿಗೆ, ರಾಜ್ಯಕ್ಕೆ ಶಾಪವಾಗಿರುವ ಕೇಂದ್ರ ಬಿಜೆಪಿ ಸರ್ಕಾರದಿಂದ ಅನುದಾನ ಹಂಚಿಕೆ, ಜಿಎಸ್‌ಟಿ ಪಾಲು, ನೆರೆ – ಬರ ಪರಿಹಾರ, ಅವೈಜ್ಞಾನಿಕ ನೀತಿಗಳು ಸೇರಿದಂತೆ ಪ್ರತಿಯೊಂದರಲ್ಲೂ ನಿರಂತರ ಅನ್ಯಾಯವಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಅತಿವೃಷ್ಟಿ: ಮಹಾರಾಷ್ಟ್ರಕ್ಕೆ 1,566.40 ಕೋಟಿ ರೂ. ಕರ್ನಾಟಕಕ್ಕೆ ಕೇವಲ 384 ಕೋಟಿ

ದೇಶದಲ್ಲೇ ಅತೀ ಹೆಚ್ಚು ತೆರಿಗೆ ನೀಡುವ, ಪ್ರತಿ ವರ್ಷ ದೇಶದ ಬೊಕ್ಕಸಕ್ಕೆ 4.5 ಲಕ್ಷ ಕೋಟಿ ರೂಪಾಯಿಗಳನ್ನು ತುಂಬಿಸುವ ಕರ್ನಾಟಕ್ಕೆ ಕೇಂದ್ರದಿಂದ ಸಿಗುತ್ತಿರುವುದು ಕನಿಷ್ಠ ಪಾಲು ಮಾತ್ರ. ಉತ್ತರ ಪ್ರದೇಶ – ಬಿಹಾರದಂತಹ ಭ್ರಷ್ಟಾಚಾರದಿಂದ ಬಳಲುತ್ತಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿ ಕರ್ನಾಟಕಕ್ಕೆ ನಿರಂತರ ದ್ರೋಹ ಬಗೆಯಲಾಗುತ್ತಿದೆ. ಕೇಂದ್ರದ ಈ ತಾರತಮ್ಯ ನೀತಿಯನ್ನು ಖಂಡಿಸಬೇಕಾದ ರಾಜ್ಯದ ಬಿಜೆಪಿ ಸಂಸದರು ಧ್ವನಿ ಕಳೆದುಕೊಂಡವರಂತೆ ಮೌನಕ್ಕೆ ಶರಣಾಗಿದ್ದಾರೆ ಎಂದೂ ಆಡಳಿತಾರೂಢ ಕಾಂಗ್ರೆಸ್​ ಆರೋಪಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು