AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ

ಎರಡು ಹಂತದಲ್ಲಿ ನೌಕರರ ಮೇಲಿನ ಪ್ರಕರಣಗಳ ವಾಪಸ್ಸಿಗೆ ಸರ್ಕಾರ ಯೋಜಿಸಿದೆ.

ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ
ಕೆಎಸ್​ಆರ್​ಟಿಸಿ ನೌಕರರ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 20, 2021 | 10:47 AM

Share

ಬೆಂಗಳೂರು: ಇತ್ತೀಚೆಗೆ ನಡೆದ ಕೆಎಸ್ಆರ್​ಟಿಸಿ ಮತ್ತು ಬಿಎಂಟಿಸಿ ಪ್ರತಿಭಟನೆ ವೇಳೆ ನೌಕರರ ಮೇಲೆ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಬಹುತೇಕ ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಅಮಾನತು, ವಜಾ, ವರ್ಗಾವಣೆ ಸೇರಿದಂತೆ ಬಹುತೇಕ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನ ತಿರ್ಮಾನಿಸಲಾಗಿದ್ದು, ಇಂದೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಯಾಗಿದೆ. ಎರಡು ಹಂತದಲ್ಲಿ ನೌಕರರ ಮೇಲಿನ ಪ್ರಕರಣಗಳ ವಾಪಸ್ಸಿಗೆ ಸರ್ಕಾರ ಯೋಜಿಸಿದೆ. ಸದ್ಯಕ್ಕೆ ಎಫ್ಐಆರ್ ದಾಖಲಾಗಿರುವ ಪ್ರಕರಣಗಳು ಹೊರತುಪಡಿಸಿ ಉಳಿದ ಎಲ್ಲಾ ಪ್ರಕರಣಗಳು ಹಿಂಪಡೆದು, ಎಫ್ಐರ್ ದಾಖಲಾಗಿರುವ ಪ್ರಕರಣಗಳು ಎರಡನೇ ಹಂತದಲ್ಲಿ ವಾಪಸ್ ಪಡೆಯಲು ಸರ್ಕಾರ ಯೋಜಿಸಿದೆ. ಈಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಸಾರಿಗೆ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಮಹತ್ವದ ಸಭೆ ನಡೆಸಿದ್ದರು. ವಿಧಾನಸೌಧದ ಕಚೇರಿಯಲ್ಲಿ ಇಂದು ಸಭೆ ನಡೆದಿತ್ತು. ನೌಕರರ ಅಮಾನತು ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಮಾಹಿತಿ ಪಡೆದಿದ್ದರು. 4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನು ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿತ್ತು.

ಹಲವು ಕಾರಣಗಳಿಂದ ಕೆಲ ಸಾರಿಗೆ ನೌಕರರನ್ನು  ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕೊವಿಡ್ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದ ಕೆಲ ನೌಕರರನ್ನ ಅಮಾನತುಗೊಳಿಸಲಾಗಿತ್ತು. ಅಮಾನತು ಹಿಂಪಡೆಯುವಂತೆ ಸಾಕಷ್ಟು ಮನವಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಸಭೆ ನಡೆಸಿದ್ದರು. ಸಭೆಯಲ್ಲಿ ಎಷ್ಟು ನೌಕರರು ಅಮಾನತು ಆಗಿದ್ದಾರೆ, ಎಷ್ಟು ನೌಕರರ ವಜಾ ಆಗಿದೆ ಹಾಗೂ ಎಷ್ಟು ನೌಕರರ ಮೇಲೆ ಮೇಲೆ ಎಫ್​ಐಆರ್ ದಾಖಲಾಗಿದೆ ಎನ್ನುವ ಮಾಹಿತಿ ಪಡೆದಿದ್ದರು. ಬಹುತೇಕ ಅಮಾನತು ಹಾಗೂ ವಜಾಗೊಂಡ ನೌಕರರನ್ನ ವಾಪಸ್ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ; ಬಿಎಂಟಿಸಿ ಸೇವೆಯಿಂದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರು ವಜಾ

ಓಮ್ನಿ ಆ್ಯಂಬುಲೆನ್ಸ್ ಬಳಕೆ ರೋಗಿಗಳಿಗೆ ಸುರಕ್ಷಿತವಲ್ಲ; ತನ್ನದೇ ಆದೇಶ ಉಲ್ಲಂಘಿಸಿದ ಸಾರಿಗೆ ಇಲಾಖೆ

(Karnataka Government Decides to take back all the cases charged against KSRTC and BMTC workers for their strike)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ