AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ

ಎರಡು ಹಂತದಲ್ಲಿ ನೌಕರರ ಮೇಲಿನ ಪ್ರಕರಣಗಳ ವಾಪಸ್ಸಿಗೆ ಸರ್ಕಾರ ಯೋಜಿಸಿದೆ.

ಪ್ರತಿಭಟನೆ ವೇಳೆ ಕೆಎಸ್​ಆರ್​ಟಿ, ಬಿಎಂಟಿಸಿ ನೌಕರರ ಮೇಲೆ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಕೈಬಿಡಲು ಬಹುತೇಕ ನಿರ್ಧಾರ
ಕೆಎಸ್​ಆರ್​ಟಿಸಿ ನೌಕರರ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on: Sep 20, 2021 | 10:47 AM

Share

ಬೆಂಗಳೂರು: ಇತ್ತೀಚೆಗೆ ನಡೆದ ಕೆಎಸ್ಆರ್​ಟಿಸಿ ಮತ್ತು ಬಿಎಂಟಿಸಿ ಪ್ರತಿಭಟನೆ ವೇಳೆ ನೌಕರರ ಮೇಲೆ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ಬಹುತೇಕ ವಾಪಸ್ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಅಮಾನತು, ವಜಾ, ವರ್ಗಾವಣೆ ಸೇರಿದಂತೆ ಬಹುತೇಕ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲು ತೀರ್ಮಾನ ತಿರ್ಮಾನಿಸಲಾಗಿದ್ದು, ಇಂದೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಯಾಗಿದೆ. ಎರಡು ಹಂತದಲ್ಲಿ ನೌಕರರ ಮೇಲಿನ ಪ್ರಕರಣಗಳ ವಾಪಸ್ಸಿಗೆ ಸರ್ಕಾರ ಯೋಜಿಸಿದೆ. ಸದ್ಯಕ್ಕೆ ಎಫ್ಐಆರ್ ದಾಖಲಾಗಿರುವ ಪ್ರಕರಣಗಳು ಹೊರತುಪಡಿಸಿ ಉಳಿದ ಎಲ್ಲಾ ಪ್ರಕರಣಗಳು ಹಿಂಪಡೆದು, ಎಫ್ಐರ್ ದಾಖಲಾಗಿರುವ ಪ್ರಕರಣಗಳು ಎರಡನೇ ಹಂತದಲ್ಲಿ ವಾಪಸ್ ಪಡೆಯಲು ಸರ್ಕಾರ ಯೋಜಿಸಿದೆ. ಈಕುರಿತು ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.

ಸಾರಿಗೆ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಮಹತ್ವದ ಸಭೆ ನಡೆಸಿದ್ದರು. ವಿಧಾನಸೌಧದ ಕಚೇರಿಯಲ್ಲಿ ಇಂದು ಸಭೆ ನಡೆದಿತ್ತು. ನೌಕರರ ಅಮಾನತು ಬಗ್ಗೆ ಸಾರಿಗೆ ಸಚಿವ ಶ್ರೀರಾಮುಲು ಮಾಹಿತಿ ಪಡೆದಿದ್ದರು. 4 ನಿಗಮಗಳ ಸಾರಿಗೆ ಅಧಿಕಾರಿಗಳ ಜೊತೆ ಸಭೆ ನಡೆದಿತ್ತು. ಅಮಾನತುಗೊಂಡಿರುವ ನೌಕರರನ್ನು ಮರಳಿ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿತ್ತು.

ಹಲವು ಕಾರಣಗಳಿಂದ ಕೆಲ ಸಾರಿಗೆ ನೌಕರರನ್ನು  ಅಮಾನತುಗೊಳಿಸಲಾಗಿತ್ತು. ಇತ್ತೀಚೆಗೆ ಕೊವಿಡ್ ಸಮಯದಲ್ಲಿ ಪ್ರತಿಭಟನೆ ನಡೆಸಿದ್ದ ಕೆಲ ನೌಕರರನ್ನ ಅಮಾನತುಗೊಳಿಸಲಾಗಿತ್ತು. ಅಮಾನತು ಹಿಂಪಡೆಯುವಂತೆ ಸಾಕಷ್ಟು ಮನವಿ ಬಂದಿತ್ತು. ಆ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ಶ್ರೀರಾಮುಲು ಸಭೆ ನಡೆಸಿದ್ದರು. ಸಭೆಯಲ್ಲಿ ಎಷ್ಟು ನೌಕರರು ಅಮಾನತು ಆಗಿದ್ದಾರೆ, ಎಷ್ಟು ನೌಕರರ ವಜಾ ಆಗಿದೆ ಹಾಗೂ ಎಷ್ಟು ನೌಕರರ ಮೇಲೆ ಮೇಲೆ ಎಫ್​ಐಆರ್ ದಾಖಲಾಗಿದೆ ಎನ್ನುವ ಮಾಹಿತಿ ಪಡೆದಿದ್ದರು. ಬಹುತೇಕ ಅಮಾನತು ಹಾಗೂ ವಜಾಗೊಂಡ ನೌಕರರನ್ನ ವಾಪಸ್ ಕೆಲಸಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 

ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ; ಬಿಎಂಟಿಸಿ ಸೇವೆಯಿಂದ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರು ವಜಾ

ಓಮ್ನಿ ಆ್ಯಂಬುಲೆನ್ಸ್ ಬಳಕೆ ರೋಗಿಗಳಿಗೆ ಸುರಕ್ಷಿತವಲ್ಲ; ತನ್ನದೇ ಆದೇಶ ಉಲ್ಲಂಘಿಸಿದ ಸಾರಿಗೆ ಇಲಾಖೆ

(Karnataka Government Decides to take back all the cases charged against KSRTC and BMTC workers for their strike)

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ