AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ದಿನೇಶ್​ ಗುಂಡೂರಾವ್​

ಸಾರ್ವಜನಿಕ ಪೂರೈಕೆಗಾಗಿ ಸರ್ಕಾರವು ಒಟ್ಟು ಔಷಧಿಗಳಲ್ಲಿ 410 "ಅಗತ್ಯ ಔಷಧಿಗಳ" ಅನ್ನು ಖರೀದಿಸುತ್ತದೆ. ಈ ಪೈಕಿ ಪೈಕಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ. ಟೆಂಡರ್ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಪೂರೈಕೆಯಲ್ಲಿ ತೊಂದರೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸರ್ಕಾರದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ದಿನೇಶ್​ ಗುಂಡೂರಾವ್​
ಸಚಿವ ದಿನೇಶ್​​ ಗುಂಡೂರಾವ್​
ವಿವೇಕ ಬಿರಾದಾರ
|

Updated on: Feb 20, 2024 | 7:31 AM

Share

ಬೆಂಗಳೂರು, ಫೆಬ್ರವರಿ 20: ಸರ್ಕಾರಿ ಆಸ್ಪತ್ರೆಗಳು (Government Hospital) ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (Primary Health Centres) ಅಗತ್ಯ ಔಷಧಿಗಳ (Medicine) ತೀವ್ರ ಕೊರತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸದನಕ್ಕೆ ತಿಳಿಸಿದರು. ವಿಧಾನಪರಿಷತ್​ ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರವು ಉಚಿತವಾಗಿ ಪೂರೈಸುವ ಒಟ್ಟು 410 ಅಗತ್ಯ ಔಷಧಿಗಳ ಪೈಕಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ. ಏಪ್ರಿಲ್ ಒಂದರೊಳಗೆ ಪೂರೈಕೆಯನ್ನು ಸುವ್ಯವಸ್ಥಿತಗೊಳಿಸುವ ಸಾಧ್ಯತೆಯಿದೆ ಎಂದು ಅವರು ಭರವಸೆ ನೀಡಿದರು. ಸರ್ಕಾರವು “ಪ್ರಾಥಮಿಕ ಜವಾಬ್ದಾರಿಯಲ್ಲಿ ವಿಫಲವಾಗಿದೆ” ಎಂದು ಒಪ್ಪಿಕೊಂಡರು.

ಸಾರ್ವಜನಿಕ ಪೂರೈಕೆಗಾಗಿ ಸರ್ಕಾರವು ಒಟ್ಟು ಔಷಧಿಗಳಲ್ಲಿ 410 “ಅಗತ್ಯ ಔಷಧಿಗಳು” ಮತ್ತು 322 “ಅಪೇಕ್ಷಣೀಯ ಔಷಧಿಗಳ” ಅನ್ನು ಖರೀದಿಸುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ ಪೂರೈಕೆಯಲ್ಲಿ ತೊಂದರೆಯಾಗಿದೆ. ಲಭ್ಯವಿರುವ ಸುಮಾರು 222 ಕೋಟಿ ರೂ. ಹಣದಿಂದ ಔಷಧಿಗಳನ್ನು ಖರೀದಿಸಿ ಸಾರ್ವಜನಿಕರಿಗೆ ಪೂರೈಸುತ್ತೇವೆ ಎಂದರು.

ಇದನ್ನೂ ಓದಿ: ಮಂಗನ ಕಾಯಿಲೆಗೆ ವೃದ್ಧ ಬಲಿ: ಆರೋಗ್ಯ ಇಲಾಖೆ ಹೈಅಲರ್ಟ್, ಮನೆ ಮನೆಗೆ ತೆರಳಿ ಔಷಧಿ ವಿತರಣೆ

ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮವನ್ನು (ಕೆಎಸ್‌ಎಂಎಸ್‌ಸಿ) ಬಲಪಡಿಸಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿ ದೊರೆಯದ ಕಾರಣ ಔಷಧಾಲಯಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ ಎಂದು ತಿಳಿಸಿದರು.

ಔಷಧಿಗಳ ಕೊರತೆ ಆಗದಂತೆ ನಿರಂತವಾಗಿ ಪೂರೈಕೆಯಾಗಲು ಎರಡು ವರ್ಷದ ಅವಧಿಗೆ ಟೆಂಡರ್ ನೀಡಲು ಉದ್ದೇಶಿಸಲಾಗಿದೆ. ರಾಜ್ಯಾದ್ಯಂತ ಔಷಧಗಳ ಸುಗಮ ಪೂರೈಕೆ ವ್ಯವಸ್ಥೆಯನ್ನು ಇನ್ನಷ್ಟು ಸದೃಢ ಮಾಡಲಾಗುವುದು. ಆಸ್ಪತ್ರೆಗಳಲ್ಲಿನ ವೈದ್ಯಕೀಯ ಉಪಕರಣಗಳ ಸಂಖ್ಯೆ, ಅವು ಕಾರ್ಯನಿರ್ವಹಿಸುತ್ತಿವೆಯೇ ಅಥವಾ ಇಲ್ಲವೇ ಅಥವಾ ಅದರ ನಿರ್ವಹಣೆಯ ಬಗ್ಗೆ ಸರ್ಕಾರದ ಬಳಿ ಮಾಹಿತಿ ಇಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಿ-ಡಾಕ್‌ ಕಂಪನಿಗೆ ವರದಿ ನೀಡುವಂತೆ ತಿಳಿಸಲಾಗಿದೆ. ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ವ್ಯವಸ್ಥಾಪಕ ನಿರ್ದೇಶಕರು ಬದಲಾಗುತ್ತಿರುವುದರಿಂದ ಕೆಎಸ್‌ಎಂಎಸ್‌ಸಿಯನ್ನು ಸುಧಾರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್