AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಸರ್ಕಾರವು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21 ರವರೆಗೆ ವಿಸ್ತರಿಸಿದೆ. ಹೊಸ ಡಿಜಿಪಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವ ನಡುವೆಯೇ ಕರ್ನಾಟಕ ಸರ್ಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲೋಕ್ ಮೋಹನ್​ ಅವರು 1987ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ.

ಪೊಲೀಸ್​ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿ ವಿಸ್ತರಣೆ
ಅಲೋಕ್ ಮೋಹನ್​
ವಿವೇಕ ಬಿರಾದಾರ
|

Updated on:Apr 29, 2025 | 11:09 PM

Share

ಬೆಂಗಳೂರು, ಏಪ್ರಿಲ್​ 29: ರಾಜ್ಯ ಪೊಲೀಸ್​ (Karnataka Police) ಮಹಾನಿರ್ದೇಶಕ (ಡಿಜಿ&ಐಜಿಪಿ) ಅಲೋಕ್ ಮೋಹನ್ (Alok Mohan) ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಣೆ ಮಾಡಿ ಮಂಗಳವಾರ (ಏ.29) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಜಿಪಿ ಅಲೋಕ್​ ಮೋಹನ್​ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಬುಧವಾರ (ಏ.30) ರಂದು ವಯೋನಿವೃತ್ತಿ ಹೊಂದಬೇಕಿದ್ದ ಡಿಜಿಪಿ ಅಲೋಕ್​ ಮೋಹನ್ ಅವರ ಸೇವಾವಧಿಯನ್ನು 22 ದಿವಸಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ಡಿಜಿಪಿ ಅಲೋಕ್ ಮೋಹನ್​ ಅವರು ತಮ್ಮ ಸೇವೆಯನ್ನು ಮೂರು ತಿಂಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್​ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು

ಇದನ್ನೂ ಓದಿ
Image
ಬಿಬಿಎಂಪಿಗೆ ಹೊಸ ಆಯುಕ್ತ ನೇಮಕ: ತುಷಾರ್​ ಗಿರಿನಾಥ್​ ವರ್ಗಾವಣೆ
Image
ಬೆಂಗಳೂರು: ಕಂಟೋನ್ಮೆಂಟ್ ಬಳಿಯ ನೂರಾರು ಮರಗಳ ಕಡಿಯಲು ಸಿದ್ಧತೆ!
Image
ಮೆಟ್ರೋ ಟಿಕೆಟ್​ ದರ ಏರಿಕೆ: ಸಮಿತ ವರದಿ ಬಹಿರಂಗಪಡಿಸಿ, ತೇಜಸ್ವಿ ಸೂರ್ಯ
Image
ಅತ್ಯಾಚಾರ ಕೇಸ್: ಕೋರ್ಟ್​ ಮುಂದೆ ಪರಿ ಪರಿಯಾಗಿ ಬೇಡಿಕೊಂಡ ಪ್ರಜ್ವಲ್-ಭವಾನಿ!

ಈ ತಿಂಗಳ ಅಂತ್ಯಕ್ಕೆ ತಾವು (ಅಲೋಕ್ ಮೋಹನ್) ನಿವೃತ್ತಿಯಾಗುತ್ತಿರುವ ಕಾರಣ ಈ ಹುದ್ದೆಯಲ್ಲಿ ಎರಡು ವರ್ಷ ಪೂರೈಸಲು ಆಗುತ್ತಿಲ್ಲ. ಆದುದರಿಂದ ಸುಪ್ರೀಂಕೋರ್ಟ್ ತೀರ್ಪನ ಪ್ರಕಾರ ಪೊಲೀಸ್​ ಮುಖ್ಯಸ್ಥರ ಹುದ್ದೆಗಳಿಗೆ ಎರಡು ವರ್ಷಗಳ ಅವಧಿ ನೀಡಬೇಕೆಂದು ವಿನಂತಿಸಿದ್ದರು. ಇದನ್ನು ಸರ್ಕಾರ ಪುರಸ್ಕರಿಸಿದೆ.

2023ರಲ್ಲಿ ಅಲೋಕ್ ಮೋಹನ್​ ಅವರು ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಅಲೋಕ್ ಮೋಹನ್​ ಅವರು 1987ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Tue, 29 April 25

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ