AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ: ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ

ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್​ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಆ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ: ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ
ಬಿಬಿಎಂಪಿ, ಸುಪ್ರೀಂಕೋರ್ಟ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 01, 2025 | 1:46 PM

Share

ಬೆಂಗಳೂರು, ಆಗಸ್ಟ್​ 01: 2020ರಿಂದ ಬಿಬಿಎಂಪಿ ಚುನಾವಣೆ (BBMP elections) ನಡೆದಿಲ್ಲ. ಈಗೊಮ್ಮೆ, ಆಗೊಮ್ಮೆ ಮಾಡುವುದಾಗಿ ಹೇಳಿ ಮುಂದೂಡಿಕೊಂಡು ಬರಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಏಕೆಂದರೆ ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ (Supreme Court) ಅಫಿಡವಿಟ್ ಸಲ್ಲಿಸಿದೆ.

ಹೌದು. ನವೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್​ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಇದನ್ನೂ ಓದಿ
Image
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
Image
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
Image
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
Image
BBMP ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್​​ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್​​ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್

ಈ ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು.  ಡಿಸೆಂಬರ್ 18ರಂದು ಬೆಂಗಳೂರು ಆಡಳಿತಕ್ಕೆ ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:14 pm, Fri, 1 August 25

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?