ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ: ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ

ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್​ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಆ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.

ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ: ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ
ಬಿಬಿಎಂಪಿ, ಸುಪ್ರೀಂಕೋರ್ಟ್
ಮಹೇಶ್ ಇ, ಭೂಮನಹಳ್ಳಿ Edited By:

Updated on: Aug 01, 2025 | 1:46 PM

ಬೆಂಗಳೂರು, ಆಗಸ್ಟ್​ 01: 2020ರಿಂದ ಬಿಬಿಎಂಪಿ ಚುನಾವಣೆ (BBMP elections) ನಡೆದಿಲ್ಲ. ಈಗೊಮ್ಮೆ, ಆಗೊಮ್ಮೆ ಮಾಡುವುದಾಗಿ ಹೇಳಿ ಮುಂದೂಡಿಕೊಂಡು ಬರಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಏಕೆಂದರೆ ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್​ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​ಗೆ (Supreme Court) ಅಫಿಡವಿಟ್ ಸಲ್ಲಿಸಿದೆ.

ಹೌದು. ನವೆಂಬರ್​​ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್​ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಇದನ್ನೂ ಓದಿ
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸರ್ವಪಕ್ಷ ಸಭೆ ಕರೆಯಲಿದ್ದೇನೆ, ಪಾಲಿಕೆ ಎಲ್ಲರಿಗೂ ಸೇರಿದ್ದು: ಶಿವಕುಮಾರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
BBMP ಚುನಾವಣೆ ನಡೆಸಲು ಮುಂದಾದ ಸರ್ಕಾರ: 5 ಭಾಗಗಳಾಗಿ ವಿಂಗಡಿಸಲು ತೀರ್ಮಾನ

ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್​​ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.

ಬಿಬಿಎಂಪಿ ವಾರ್ಡ್​​ ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್​​ನಲ್ಲಿ, ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್

ಈ ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು.  ಡಿಸೆಂಬರ್ 18ರಂದು ಬೆಂಗಳೂರು ಆಡಳಿತಕ್ಕೆ ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:14 pm, Fri, 1 August 25

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us