AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Transport Employees: ರಾಮ ನವಮಿಯಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್

Transport Employees Salary Hiked: ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

Transport Employees: ರಾಮ ನವಮಿಯಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on:Mar 30, 2023 | 2:25 PM

Share

ಮುಖ್ಯಾಂಶಗಳು

  • ರಾಮನವಮಿಯಂದೇ ಕರ್ನಾಟಕ ಸಾರಿಗೆ ನೌಕರರಿಗೆ ಗುಡ್ ನ್ಯೂಸ್
  • 15% ವೇತನ ಶ್ರೇಣಿಗಳನ್ನು ಪರಿಷ್ಕರಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ
  • ಕಳೆದ ಹಲವು ವರ್ಷಗಳಿಂದ ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದ ಸಾರಿಗೆ ನೌಕರರು

ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರ(Transport Employees) ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka government) ಅಧಿಕೃತ ಆದೇಶ ಹೊರಡಿಸಿದೆ. 2023ರ ಮಾರ್ಚ್ ತಿಂಗಳಿನಿಂದಲೇ ನೂತನ ವೇತನ ಜಾರಿ ಬರುವಂತೆ ಇಂದು(ಮಾರ್ಚ್ 30) ಅದೇಶಿಸಿದೆ. ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು. ಆದ್ರೆ, ಸರ್ಕಾರ ಮಾರ್ಚ್​ 28ರಂದು  ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಹೇಳಿತ್ತು. ಇದೀಗ ಅದರಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಗಳ ನೌಕರರು ಮಾ. 24ರಿಂದ ಬಸ್‌ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳು, ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ನಾಲ್ಕೂ ನಿಗಮಗಳ ಅಧಿಕಾರಿಗಳ ಸಭೆ ನಡೆಸಿದ್ದರು. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಸುಮಾರು 5 ಲಕ್ಷ ಕೋಟಿ ರೂ. ಸಾಲವಿದೆ. ಹಾಗಾಗಿ, ಮೂಲ ವೇತನದ ಶೇ 8ರಷ್ಟು ವೇತನ ಏರಿಕೆ ಮಾಡಲಾಗುವುದು ಎಂದು ಸಭೆಯಲ್ಲಿ ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ಸಂಘಟನೆಗಳ ಪದಾಧಿಕಾರಿಗಳು ಒಪ್ಪಿರಲಿಲ್ಲ. ಕೊನೆಗೆ ಶೇ. 10ರಷ್ಟು ವೇತನ ಏರಿಕೆಯ ಭರವಸೆ ನೀಡಿದ್ದರು. ಆದರೂ ಸಹ ಸಾರಿಗೆ ನೌಕರರು ಪಟ್ಟು ಸಡಿಲಿಸಿರಲಿಲ್ಲ. ಅಂತಿಮವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೇ 15ರಷ್ಟು ಹೆಚ್ಚಿಸುವುದಾಗಿ ಹೇಳಿ ಸಾರಿಗೆ ನೌಕರರ ಮನವೊಲಿಸಿದ್ದರು.

Published On - 2:17 pm, Thu, 30 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್