AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ (CET Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನೇ ತಲೆದಂಡ ಮಾಡಿದೆ.

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ
ಕೆಇಎ ನಿರ್ದೇಶಕಿ ರಮ್ಯಾ ವರ್ಗಾವಣೆ
ವಿನಯ್​ ಕಾಶಪ್ಪನವರ್​
| Edited By: |

Updated on:May 16, 2024 | 5:39 PM

Share

ಬೆಂಗಳೂರು, (ಮೇ 16): ಸಿಇಟಿ ಪರೀಕ್ಷೆಯಲ್ಲಾದ(CET Exam) ಸಾಲು ಸಾಲು ಎಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ (Ramya) ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ,

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು.  ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿಯೂ ಸಹ ಬೇಜವಾಬ್ದಾರಿ ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ದೂರದ ಊರುಗಳಲ್ಲಿ ಪರೀಕ್ಷೇ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ರಮ್ಯಾ ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜಗರಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:  CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕೆಇಎ ಎಡವಟ್ಟು

ಇದೀಗ ಅಂತಿಮವಾಗಿ ರಾಜ್ಯ ಸರ್ಕಾರ ಇಂದು (ಮೇ 16) ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ಎತ್ತಂಗಡಿ ಮಾಡಿದ್ದು,  ಇದೀಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎಚ್ ಪ್ರಸನ್ನ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 16 May 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ