Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ

ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ (CET Exam) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನೇ ತಲೆದಂಡ ಮಾಡಿದೆ.

ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ಎಡವಟ್ಟು, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಲೆದಂಡ
ಕೆಇಎ ನಿರ್ದೇಶಕಿ ರಮ್ಯಾ ವರ್ಗಾವಣೆ
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:May 16, 2024 | 5:39 PM

ಬೆಂಗಳೂರು, (ಮೇ 16): ಸಿಇಟಿ ಪರೀಕ್ಷೆಯಲ್ಲಾದ(CET Exam) ಸಾಲು ಸಾಲು ಎಡವಟ್ಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examination Authority) ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ (Ramya) ಅವರ ತಲೆದಂಡವಾಗಿದೆ. ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ 51ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆಗಳನ್ನು ಕೇಳುವ ಮೂಲಕ ವಿದ್ಯಾರ್ಥಿಗಳ, ಉಪನ್ಯಾಸಕರ ಮತ್ತು ಪೋಷಕರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ರಮ್ಯಾ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಹೆಚ್.ಪ್ರಸನ್ನ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಸರ್ಕಾರ ಆದೇಶಿಸಿದೆ,

ಇದನ್ನೂ ಓದಿ: CET Exam 2024: ಸಿಇಟಿ ಪರೀಕ್ಷೆ ಗೊಂದಲ: ವರದಿ ಸಲ್ಲಿಸಿದ ತಜ್ಞರ ಸಮಿತಿ, ಮುಂದಿನ ವಾರ ಸರ್ಕಾರ ನಿರ್ಧಾರ ಸಾಧ್ಯತೆ

ಸಿಇಟಿ ಪರೀಕ್ಷೆಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿ ವಿವಾದಕ್ಕೆ ಕಾರಣವಾಗಿತ್ತು.  ಕೇವಲ ಪ್ರಶ್ನೆ ಪತ್ರಿಕೆಯಲ್ಲಿ ಮಾತ್ರ ಲೋಪವಲ್ಲದೇ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿಯೂ ಸಹ ಬೇಜವಾಬ್ದಾರಿ ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ದೂರದ ಊರುಗಳಲ್ಲಿ ಪರೀಕ್ಷೇ ಕೇಂದ್ರಗಳನ್ನು ನಿಗದಿಪಡಿಸಲಾಗಿತ್ತು. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ರಮ್ಯಾ ವರ್ಗಾವಣೆ ಮಾಡುವಂತೆ ಆಗ್ರಹಿಸಿದ್ದರು. ಇದು ಸರ್ಕಾರಕ್ಕೆ ತೀವ್ರ ಮುಜಗರಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ:  CET Exam: ಇಂದಿನಿಂದ ಸಿಇಟಿ ಪರೀಕ್ಷೆ; ಪರೀಕ್ಷಾ ಕೇಂದ್ರ ನಿಗದಿಪಡಿಸುವಲ್ಲಿ ಕೆಇಎ ಎಡವಟ್ಟು

ಇದೀಗ ಅಂತಿಮವಾಗಿ ರಾಜ್ಯ ಸರ್ಕಾರ ಇಂದು (ಮೇ 16) ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರನ್ನು ಎತ್ತಂಗಡಿ ಮಾಡಿದ್ದು,  ಇದೀಗ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎಚ್ ಪ್ರಸನ್ನ ಅವರಿಗೆ ಹೆಚ್ಚುವರಿಯಾಗಿ ಕರ್ನಾಟಕ ಪರೀಕ್ಷ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Thu, 16 May 24

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!