AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

ಈ ಬಾರಿ ಬೆಂಗಳೂರಿನಲ್ಲಿ ಬಿಪಿಎಲ್​, ಎಪಿಎಲ್​ ಕಾರ್ಡ್​ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ವರ್ 2 ಮತ್ತು ಸರ್ವರ್ 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ
ರೇಷನ್​ ಕಾರ್ಡ್​
Poornima Agali Nagaraj
| Edited By: |

Updated on:Oct 16, 2023 | 11:32 AM

Share

ಬೆಂಗಳೂರು ಅ.16: ಬಿಪಿಎಲ್​​ (BPL) ಮತ್ತು ಎಪಿಎಲ್​ (APL) ಕಾರ್ಡ್​ದಾರರಿಗೆ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ. ಬಿಪಿಎಲ್​​ ಮತ್ತು ಎಪಿಎಲ್​​​​ ಕಾರ್ಡ್​​​​ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್​ ಕಾರ್ಡ್​​ ತಿದ್ದಪಡಿಗೆ ಹೆಚ್ಚಿನ ಸಮಯ‌ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ (Food Department) ಸಮಯವನ್ನು ವಿಸ್ತರಿಸಿದೆ. ಆದರೆ ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ  ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ

ಸರ್ವರ್​ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. 9 ದಿನಗಳಲ್ಲಿ ಒಟ್ಟು 60 ರಿಂದ 70 ಸಾವಿರದಷ್ಟು ಅರ್ಜಿಗಳು ಬಂದಿದ್ದು, ಆಹಾರ ಇಲಾಖೆ ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದೆ. ನೀಡಿರುವ ದಾಖಾಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Mon, 16 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!