AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ

ಈ ಬಾರಿ ಬೆಂಗಳೂರಿನಲ್ಲಿ ಬಿಪಿಎಲ್​, ಎಪಿಎಲ್​ ಕಾರ್ಡ್​ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸರ್ವರ್ 2 ಮತ್ತು ಸರ್ವರ್ 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಬಿಪಿಎಲ್​, ಎಪಿಎಲ್​ ಕಾರ್ಡ್​ದಾರರಿಗೆ ಗುಡ್​ ನ್ಯೂಸ್: ​​ಕಾರ್ಡ್​ಗಳ ತಿದ್ದಪಡಿ ಸಮಯ ವಿಸ್ತರಣೆ
ರೇಷನ್​ ಕಾರ್ಡ್​
Poornima Agali Nagaraj
| Edited By: |

Updated on:Oct 16, 2023 | 11:32 AM

Share

ಬೆಂಗಳೂರು ಅ.16: ಬಿಪಿಎಲ್​​ (BPL) ಮತ್ತು ಎಪಿಎಲ್​ (APL) ಕಾರ್ಡ್​ದಾರರಿಗೆ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ. ಬಿಪಿಎಲ್​​ ಮತ್ತು ಎಪಿಎಲ್​​​​ ಕಾರ್ಡ್​​​​ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿ ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ. ಬಿಪಿಎಲ್ ಮತ್ತು ಎಪಿಎಲ್​ ಕಾರ್ಡ್​​ ತಿದ್ದಪಡಿಗೆ ಹೆಚ್ಚಿನ ಸಮಯ‌ ನೀಡಿವಂತೆ ಮನವಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ (Food Department) ಸಮಯವನ್ನು ವಿಸ್ತರಿಸಿದೆ. ಆದರೆ ಈ ಬಾರಿ ಬೆಂಗಳೂರಿನಲ್ಲಿ ತಿದ್ದಪಡಿ ಮಾಡಲು ಅವಕಾಶ ನೀಡಿಲ್ಲ. ಕೇವಲ ತಿದ್ದುಪಡಿಗೆ ಹೆಚ್ಚಿನ ಸಮಯದ ನೀಡಿ ಎಂದು ಬೇಡಿಕೆ ಬಂದ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ ಸರ್ವರ್ 2 ಮತ್ತು 3ರಲ್ಲಿ ಮಾತ್ರ ತಿದ್ದಪಡಿಗೆ ಅವಾಕಾಶವಿದೆ. ಬೆಂಗಳೂರು ಒನ್​, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಸರ್ವರ್ 2: ಬಾಗಲಕೋಟೆ, ಬೆಳಗಾವಿ, ಚಾಮರಾಜಪೇಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ದಿನಾಂಕ 16, 17 ಮತ್ತು 18 ನೇ ತಾರೀಖಿನಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದಪಡಿ  ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮೂರು ಹಂತಗಳಲ್ಲಿ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ; ಇಲ್ಲಿದೆ ಮಾಹಿತಿ

ಸರ್ವರ್​ 3: ಬಳ್ಳಾರಿ, ಬಿದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ , ಕಲಬುರಗಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ದಿನಾಂಕ, 19,20, 21ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಈ ಹಿಂದೆ ಆಹಾರ ಇಲಾಖೆ ಅ.5 ರಿಂದ 13ರವರೆಗೆ ತಿದ್ದುಪಡಿ ಮಾಡಿಕೊಳ್ಳಲು ಕಾಲಾವಕಾಶ ನೀಡಿತ್ತು. 9 ದಿನಗಳಲ್ಲಿ ಒಟ್ಟು 60 ರಿಂದ 70 ಸಾವಿರದಷ್ಟು ಅರ್ಜಿಗಳು ಬಂದಿದ್ದು, ಆಹಾರ ಇಲಾಖೆ ಈಗಾಗಲೇ ಅರ್ಜಿಗಳನ್ನು ಪರಿಶೀಲನೆ ಮಾಡುತ್ತಿದೆ. ನೀಡಿರುವ ದಾಖಾಲೆಗಳು ಸರಿ ಇದ್ದರೇ ಮಾತ್ರ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:19 am, Mon, 16 October 23

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್