ಜೂನ್ ತಿಂಗಳಲ್ಲಿ ಅನ್ನಭಾಗ್ಯದ ಅಕ್ಕಿ ಪಡೆಯದವರಿಗಿಲ್ಲ ಹಣ; ಆಹಾರ ಇಲಾಖೆ ನಿರ್ಧಾರ

ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಹಾಕಲು ಸರ್ಕಾರ ತೀರ್ಮಾನಿಸಿದೆ. ಕಳೆದ ತಿಂಗಳು 1,28,23,868 ಪೈಕಿ 1,17,29,296 ಕುಟುಂಬಗಳು ಅಕ್ಕಿ ಪಡೆದಿದ್ದವು. ಉಳಿದ 10.94 ಲಕ್ಷ ಬಿಪಿಎಲ್​​ ಕುಟುಂಬ​​ಗಳು ಪಡಿತರ ಅಕ್ಕಿ ಪಡೆದಿರಲಿಲ್ಲ.

ಜೂನ್ ತಿಂಗಳಲ್ಲಿ ಅನ್ನಭಾಗ್ಯದ ಅಕ್ಕಿ ಪಡೆಯದವರಿಗಿಲ್ಲ ಹಣ; ಆಹಾರ ಇಲಾಖೆ ನಿರ್ಧಾರ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on:Jul 06, 2023 | 8:58 PM

ಬೆಂಗಳೂರು: ಐದು ಉಚಿತ ಗ್ಯಾರಂಟಿಗಳಲ್ಲಿ ಒಂದಾದ ಐದು ಕೆಜಿ ಅಕ್ಕಿಯ (Rice) ಬದಲು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಕಾಂಗ್ರೆಸ್ ಸರ್ಕಾರ (Congres Government) ಈಗಾಗಲೇ ತೀರ್ಮಾನಿಸಿದೆ. ಅಕ್ಕಿ ಖರೀದಿಸಲು ಸಮಸ್ಯೆಯಾಗಿರುವ ಕಾರಣ ಅದಕ್ಕೆ ವ್ಯವಸ್ಥೆ ಆಗುವ ವರೆಗೆ ಅಕ್ಕಿಯ ಬದಲು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ರಾಜ್ಯ ಸಚಿವ ಸಂಪುಟ ಇತ್ತೀಚೆಗೆ ತೀರ್ಮಾನ ಮಾಡಿತ್ತು. ಆದರೆ, ಇದೀಗ ಜೂನ್ ತಿಂಗಳಲ್ಲಿ ‘ಅನ್ನಭಾಗ್ಯ’ ಯೋಜನೆಯಡಿ ಅಕ್ಕಿ ಪಡೆದ ಬಿಪಿಎಲ್ ಕಾರ್ಡ್​​​ದಾರರ ಖಾತೆಗೆ ಮಾತ್ರ ಹಣ ವರ್ಗಾವಣೆ ಮಾಡಲು ನಿರ್ಧರಿಸಿದೆ.

ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಹಾಕಲು ಸರ್ಕಾರ ತೀರ್ಮಾನಿಸಿದೆ. ಕಳೆದ ತಿಂಗಳು 1,28,23,868 ಪೈಕಿ 1,17,29,296 ಕುಟುಂಬಗಳು ಅಕ್ಕಿ ಪಡೆದಿದ್ದವು. ಉಳಿದ 10.94 ಲಕ್ಷ ಬಿಪಿಎಲ್​​ ಕುಟುಂಬ​​ಗಳು ಪಡಿತರ ಅಕ್ಕಿ ಪಡೆದಿರಲಿಲ್ಲ. 10.94 ಲಕ್ಷ ಕುಟುಂಬಗಳು ಅಂದರೆ, ಅಂದಾಜು 20 ಲಕ್ಷ ಜನ ಅಕ್ಕಿ ಪಡೆದಿಲ್ಲ. 20 ಲಕ್ಷ ಜನರಿಗೆ ಹಣ ಹಾಕದಿದ್ದರೆ 76 ಕೋಟಿ ರೂ. ಹಣ ಉಳಿತಾಯ ಆಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕೆಲವರು ಬಿಪಿಎಲ್ ಕಾರ್ಡ್‌ ಹೊಂದುವ ಉದ್ದೇಶದಿಂದ ಪಡಿತರ ಪಡೆಯುವುದಿಲ್ಲ. ಉಚಿತ ಆರೋಗ್ಯ ಸೇವೆ ಪಡೆಯಲು ಬಿಪಿಎಲ್ ಕಾರ್ಡ್‌ ಹೊಂದಿರುತ್ತಾರೆ. ಇಂತಹವರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ನೀಡುವುದು ಅನಗತ್ಯ ಎಂಬುದು ಸರ್ಕಾರದ ಅಭಿಪ್ರಾಯವಾಗಿದೆ.

ಇದನ್ನೂ ಓದಿ: Anna Bhagya: ಹೆಚ್ಚುವರಿ 5ಕೆಜಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ; ಇದರಿಂದ ಸರ್ಕಾರಕ್ಕೆ ಉಳಿಯುತ್ತೆ ಕೋಟಿ ಕೋಟಿ ರೂ

ಕಳೆದ 3 ತಿಂಗಳಿನಿಂದ 5,37,213 ಬಿಪಿಎಲ್ ಕುಟುಂಬಸ್ಥರು ಅಕ್ಕಿ ಪಡೆದಿಲ್ಲ. ಅಕ್ಕಿ ಪಡೆಯದವರಿಗೆ ಹಣ ನೀಡದಿರಲು ಆಹಾರ ಇಲಾಖೆ ನಿರ್ಧರಿಸಿದೆ.

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರದಿಂದ ದೊರೆಯುತ್ತದೆ. ಹೆಚ್ಚುವರಿಯಾಗಿ 5 ಕೆಜಿ ರಾಜ್ಯ ಸರ್ಕಾರ ನೀಡಬೇಕಾಗಿದೆ. ಖರೀದಿಗೆ ಸಮಸ್ಯೆಯಾಗಿರುವುದರಿಂದ ಅಕ್ಕಿ ಬದಲಿಗೆ 170 ರೂ. ಹಣ ವರ್ಗಾವಣೆ ಮಾಡಲು ಸರ್ಕಾರ ಇತ್ತೀಚೆಗೆ ತೀರ್ಮಾನ ಕೈಗೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Thu, 6 July 23

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ