AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ಪರಾಮರ್ಶನೆಗೆ ಉನ್ನತ ಮಟ್ಟದ ಸಮಿತಿ ರಚನೆ

ಸಮಿತಿಯ ನೇತೃತ್ವವನ್ನು ಕರ್ನಾಟಕ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಸುಭಾಷ್ ಅಡಿ ಅವರಿಗೆ ವಹಿಸಲಾಗಿದೆ.

ಪಂಚಮಸಾಲಿ, ಕುರುಬ, ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ಪರಾಮರ್ಶನೆಗೆ ಉನ್ನತ ಮಟ್ಟದ ಸಮಿತಿ ರಚನೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 30, 2021 | 10:07 PM

Share

ಬೆಂಗಳೂರು: ಕರ್ನಾಟಕದಲ್ಲಿ ಪಂಚಮಸಾಲಿ ಮತ್ತು ಕುರುಬ ಸಮುದಾಯಗಳಿಗೆ ಮೀಸಲಾತಿ ಒದಗಿಸುವ ಕೂಗು ಬಲ ಪಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಮೀಸಲಾತಿಯನ್ನು ಪರಾಮರ್ಶಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಸದ್ಯ 3ಬಿ ಮೀಸಲಾತಿಗೆ ಒಳಪಟ್ಟಿರುವ ಪಂಚಮಸಾಲಿ ಸಮುದಾಯವನ್ನು 2ಎ ಅಡಿ ತರಬಹುದೇ ಎಂಬುದರ ಈ ಸಮಿತಿ ಪರಾಮರ್ಶಿಸಲಿದೆ. ನ್ಯಾ. ಎಚ್ಎ.ನ್.ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೆ ತರಲು ಅಗತ್ಯ ಸಲಹೆ ಸೂಚನೆಗಳನ್ನು ಸಹ ಈ ಸಮಿತಿ ನೀಡಲಿದೆ. ಸಮಿತಿಯ ನೇತೃತ್ವವನ್ನು ಕರ್ನಾಟಕ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಸುಭಾಷ್ ಅಡಿ ಅವರಿಗೆ ವಹಿಸಲಾಗಿದೆ. 

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕುರಿತು ಸಹ ಉನ್ನತ ಮಟ್ಟದ ಸಮಿತಿ ಪರಾಮರ್ಶನೆ ನಡೆಸಲಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವ ಕುರಿತು ಸಮಿತಿ ಅಧ್ಯಯನ ನಡೆಸಲಿದೆ. ಜತೆಗೆ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿಯ ಕುರಿತು ಸಹ ಪರಾಮರ್ಶನೆ ನಡೆಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಲಾಗಿದೆ. ಅಷ್ಟೇ ಅಲ್ಲದೇ ಈ ಸಮುದಾಯಗಳಿಗೆ ಮೀಸಲಾತಿ ಒದಗಿಸಲು ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಮೀಸಲಾತಿ ಪರಾಮರ್ಶನೆಗೆ ರಚಿಸಲಾಗಿರುವ ಉನ್ನತ ಮಟ್ಟದ ಸಮಿತಿಯ ಸದಸ್ಯರನ್ನಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ್ ​ಕುಮಾರ್, ಎಂ. ಆರ್.ಕಾಂಬ್ಳೆ ಅವರನ್ನು ನೇಮಿಸಲಾಗಿದೆ.

ಇದನ್ನೂ ಓದಿ: 

ಪ್ರಬಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಡಿ; ಜಾತಿ ಗಣತಿ ಆಧರಿಸಿ ಬಜೆಟ್ ಮಂಡಿಸಿ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ

ಬ್ರಾಹ್ಮಣರಿಂದ ಹಿಡಿದು ಕುರುಬರವರೆಗೆ ಮೀಸಲಾತಿ ಕೇಳ್ತಾರೆ, ದೊಡ್ಡ ಮೀನು ಸಣ್ಣ ಮೀನನ್ನು ನುಂಗಬಾರದು: ಸಿದ್ದರಾಮಯ್ಯ

(Karnataka Government forms high level committee for the review of reservation for the Panchamasali Kuruba and Vokkaliga communities)

Published On - 10:05 pm, Mon, 30 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್