Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ರೈಲ್ವೆ ಯೋಜನೆಗಳಿಗೆ ಕರ್ನಾಟಕದ ಯಾವ ಸರ್ಕಾರವೂ ಹಣ ನೀಡಿಲ್ಲ: ಸಚಿವ ವಿ ಸೋಮಣ್ಣ

ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ರಾಜ್ಯ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದ ರೈಲ್ವೆ ಯೋಜನೆಗಳಿಗೆ ಕರ್ನಾಟಕದ ಯಾವ ಸರ್ಕಾರವೂ ಹಣ ನೀಡಿಲ್ಲ. ಎಲ್ಲ ಸರ್ಕಾರಗಳ ಹಣೆಬರಹ ಇಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ರೈಲ್ವೆ ಯೋಜನೆಗಳಿಗೆ ಕರ್ನಾಟಕದ ಯಾವ ಸರ್ಕಾರವೂ ಹಣ ನೀಡಿಲ್ಲ: ಸಚಿವ ವಿ ಸೋಮಣ್ಣ
ವಿ ಸೋಮಣ್ಣ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Oct 06, 2024 | 3:39 PM

ಬೆಂಗಳೂರು, ಅಕ್ಟೋಬರ್​​ 06: ಕರ್ನಾಟಕದ (Karnataka) ಯಾವ ಸರ್ಕಾರವೂ ರಾಜ್ಯದ ರೈಲ್ವೆ ಯೋಜನೆಗಳಿಗೆ (Railway Projects) ಹಣ ನೀಡಿಲ್ಲ. ಬಿಜೆಪಿ (BJP) ಸರ್ಕಾರ ಇದ್ದಾಗಲು ಹಣ ಕೊಟ್ಟಿಲ್ಲ, ಕಾಂಗ್ರೆಸ್ (Congress) ಸರ್ಕಾರ ಇದ್ದಾಗಲೂ ಹಣ ಕೊಟ್ಟಿಲ್ಲ. ಕೇಂದ್ರವೇ ಹಣ ಹಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸುತ್ತಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ (V Somanna) ಹೇಳಿದರು. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಆಳ್ವಿಕೆಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ರೈಲ್ವೆ ಬಜೆಟ್ 2.62 ಸಾವಿರ ಕೋಟಿ ಇದೆ ಎಂದು ತಿಳಿಸಿದರು.

ಏಳು ರಾಜ್ಯದಲ್ಲಿ ಹೊಸ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ರಾಜ್ಯದಲ್ಲಿ 43 ಸಾವಿರ ಕೋಟಿಯ ಹಲವು ಯೋಜನೆಗಳು ನನೆಗುದಿಗೆ ಬಿದ್ದಿದ್ದವು. ಆ ಎಲ್ಲ ಕಾಮಗಾರಿ ಪುನರಾರಂಭವಾಗಿವೆ. 2027ರ ಒಳಗೆ ರಾಯದುರ್ಗ, ತುಮಕೂರು, ಗದಗ ಕುಡಚಿ, ಬಳ್ಳಾರಿ ಸೇರಿದಂತೆ ಹಲವು ಕಾಮಗಾರಿ ಮುಕ್ತಾಯಗೊಳ್ಳುತ್ತವೆ. ರಾಜ್ಯದಲ್ಲಿ ಶೇ93 ರಷ್ಟು ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮತ್ತು ದೇಶಾದ್ಯಂತ ಶೇ 98 ರಷ್ಟು ಎಲೆಕ್ಟ್ರಿಕ್ ರೈಲ್ವೆ ಕಾಮಗಾರಿ ಮುಗಿದಿದೆ ಎಂದು ತಿಳಿಸಿದರು.

ದೇಶಾದ್ಯಂತ 103 ವಂದೇ ಭಾರತ್ ರೈಲುಗಳು 303 ಜಿಲ್ಲೆಗಳಲ್ಲಿ ಸಂಚರಿಸುತ್ತಿವೆ. ರಾಜ್ಯದ ಹತ್ತು ಜಿಲ್ಲೆಗಳಲ್ಲಿ ವಂದೇ ಭರತ್ ರೈಲುಗಳು ಓಡಾಡುತ್ತಿವೆ. 2025ರ ಮಾರ್ಚ್​ನಲ್ಲಿ ವಂದೇ ಭಾರತ್ ಸ್ಲಿಪಿಂಗ್ ಕೋಚ್ ಸಂಚರಿಸಲಿದೆ ಎಂದರು.

ಇದನ್ನೂ ಓದಿ: ದೇವನಹಳ್ಳಿ ಕಂಟೋನ್ಮೆಂಟ್ ರೈಲು ನಿಲ್ದಾಣ ನವೀಕರಣ ಕಾಮಗಾರಿ ಪರಿಶೀಲಿಸಿದ ಅಶ್ವಿನಿ ವೈಷ್ಣವ್: ಸಚಿವ ವಿ ಸೋಮಣ್ಣ ಸಾಥ್

ಕೊಂಕಣ್ ರೈಲ್ವೆ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಇದೀಗ ಗೋವಾ, ಕರ್ನಾಟಕ, ಮಹಾರಾಷ್ಟ್ರ ರಾಜ್ಯಗಳ ಮಧ್ಯೆ ಹೊಂದಾಣಿಕೆಯಾಗಿದ್ದು, ಕೊಂಕಣ್ ರೈಲ್ವೆ ಕಾಮಗಾರಿ ಆರಂಭವಾಗಿದೆ. ಒಂದು ಸಾವಿರ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಬಳ್ಳಾರಿ ರೈಲು ನಿಲ್ದಾಣವನ್ನು ತ್ವರಿತಗತಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ರೈಲ್ವೆ ಪರೀಕ್ಷೆ ಕನ್ನಡದಲ್ಲಿ: ಸೋಮಣ್ಣ

ರೈಲ್ವೆ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಅಪ್ರೋಚ್ ರೋಡ್​ಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೊಸ ರೈಲ್ವೆ ಲೈನ್ ಮಾಡಲು ಪ್ಲಾನ್ ಮಾಡಲಾಗುತ್ತಿದೆ. ಆದರೆ, ರಾಜ್ಯ ಸರ್ಕಾರ ಯೋಜನೆಗೆ ನಿರೀಕ್ಷಿತ ಹಣ ನೀಡುತ್ತಿಲ್ಲ. ಎಲ್ಲ ಸರ್ಕಾರಗಳ ಹಣೆಬರಹ ಇಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:36 pm, Sun, 6 October 24

ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್