AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2021-22ನೇ ಸಾಲಿನಿಂದ ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯ ಧನ ಪರಿಷ್ಕರಿಸಿ ಆದೇಶಿಸಿದ ರಾಜ್ಯ ಸರ್ಕಾರ

ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿ ಆದಾಯ ಮಿತಿಯನ್ನು ಏರಿಸಿಯೂ ಸರ್ಕಾರ ಆದೇಶ ಪ್ರಕಟಿಸಿದೆ. 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಡಿಪ್ಲೊಮಾ, ಐಟಿಐ ಕೋರ್ಸ್, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್​​ಗಳಿಗೆ ಓರ್ವ ವಿದ್ಯಾರ್ಥಿಗೆ ಧನಸಹಾಯ ಮಿತಿ ಏರಿಸಲಾಗಿದೆ.

2021-22ನೇ ಸಾಲಿನಿಂದ ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯ ಧನ ಪರಿಷ್ಕರಿಸಿ ಆದೇಶಿಸಿದ ರಾಜ್ಯ ಸರ್ಕಾರ
ಸಿಎಂ ಯಡಿಯೂರಪ್ಪ ಮತ್ತು ಸಚಿವ ಶಿವರಾಮ ಹೆಬ್ಬಾರ್
TV9 Web
| Edited By: |

Updated on: Jun 29, 2021 | 11:19 PM

Share

ಬೆಂಗಳೂರು: 2021-22ನೇ ಸಾಲಿನಿಂದ ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯ ಧನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಕಾರ್ಮಿಕರ 7 ಯೋಜನೆಗಳ ಮೊತ್ತ ಏರಿಕೆ ಮಾಡಲಾಗಿದ್ದು, 41 ಲಕ್ಷಕ್ಕೂ ಹೆಚ್ಚು ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ.ಕಾರ್ಮಿಕ ವೈದ್ಯಕೀಯ ನೆರವನ್ನು 10 ಸಾವಿರ ರೂ.ನಿಂದ 25,000 ರೂಪಾಯಿಗೆ ಏರಿಸಲಾಗಿದ್ದು, ಕಾರ್ಮಿಕರ ಅಪಘಾತ ಸಹಾಯ ಧನವನ್ನು 3 ಸಾವಿರದಿಂದ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ.  ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಇದ್ದ ಮಿತಿಯನ್ನೂ ಏರಿಸಲಾಗಿದ್ದು, ವೇತನ ಮಿತಿ 15,000 ರೂ. ನಿಂದ 21,000 ರೂ. ಏರಿಕೆ ಮಾಡಲಾಗಿದೆ. 

ಶೈಕ್ಷಣಿಕ ಪ್ರೋತ್ಸಾಹ ಯೋಜನೆಯಡಿ ಆದಾಯ ಮಿತಿಯನ್ನು ಏರಿಸಿಯೂ ಸರ್ಕಾರ ಆದೇಶ ಪ್ರಕಟಿಸಿದೆ. 8ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಡಿಪ್ಲೊಮಾ, ಐಟಿಐ ಕೋರ್ಸ್, ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್​​ಗಳಿಗೆ ಓರ್ವ ವಿದ್ಯಾರ್ಥಿಗೆ ಧನಸಹಾಯ ಮಿತಿ ಏರಿಸಲಾಗಿದೆ.

ಮೃತ ಕಾರ್ಮಿಕನ ಅಂತ್ಯಸಂಸ್ಕಾರಕ್ಕೆ ನೀಡುವ ಸಹಾಯಧನವನ್ನು 5 ಸಾವಿರ ರೂ.ನಿಂದ 10 ಸಾವಿರಕ್ಕೆ ಏರಿಸಲಾಗಿದೆ. ಟ್ರೇಡ್ ಯೂನಿಯನ್ ಅಥವಾ ಸಂಸ್ಥೆಗಳಿಗೆ ನೀಡುತ್ತಿದ್ದ ಸಹಾಯ ಧನವನ್ನು 30 ಸಾವಿರ ರೂ. ನಿಂದ 1 ಲಕ್ಷಕ್ಕೆ ಏರಿಸಲಾಗಿದೆ. ಸಂಘಟಿತ ಮಹಿಳಾ ಕಾರ್ಮಿಕರಿಗೆ 10 ಸಾವಿರ ಹೆರಿಗೆ ಭತ್ಯೆ ನೀಡಲಾಗುವುದು ಸರ್ಕಾರ ತಿಳಿಸಿದೆ. ಮೊದಲ 2 ಮಕ್ಕಳಿಗೆ ತಲಾ 10,000 ರೂ. ಹೆರಿಗೆ ಭತ್ಯೆ, ವಾರ್ಷಿಕ ಕ್ರೀಡಾಕೂಟ ಸಹಾಯಧನವನ್ನು 50 ಸಾವಿರ ರೂ.ನಿಂದ1 ಲಕ್ಷಕ್ಕೆ ಏರಿಸಲಾಗಿದೆ.

ಇದನ್ನೂ ಓದಿ: 

Covid Vaccine: ರಾಜ್ಯದಲ್ಲಿ ಕೊವಿಡ್ ಲಸಿಕೆಯ ಕೊರತೆ ಇಲ್ಲ: ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟನೆ

Job News: 1,242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

(Karnataka Government has revised the mandate for labour welfare schemes from 2021-22)

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ